23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಮಹಿಳೆಯ ಕಾಲಿನ ಮೇಲೆ ಹರಿದ ಕಾರು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಧರ್ಮಸ್ಥಳ: ಧರ್ಮಸ್ಥಳ ಅಣ್ಣಪ್ಪ ಸ್ವಾಮಿ ದ್ವಾರದ ಬಳಿ ಕಾರೊಂದು ಮಹಿಳೆಯ ಕಾಲಿನ ಮೇಲೆ ಹರಿದು ಹೋದ ಪರಿಣಾಮ ಕಾಲಿನ ಬೆರಳುಗಳಿಗೆ ರಕ್ತ ಗಾಯವಾದ ಘಟನೆ ಮಾ.5ರಂದು ವರದಿಯಾಗಿದೆ.

ಘಟನೆ ವಿವರ: ಚನ್ನರಾಯಪಟ್ಟಣ ತಾಲೂಕು, ಹಾಸನ ನಿವಾಸಿ ಶ್ರೀಮತಿ ರೇಖಾ ಸಿ.ಎಸ್ (39ವ) ಎಂಬವರ ದೂರಿನಂತೆ, ಸದ್ರಿಯವರು ತನ್ನ ನೆರೆಕೆರೆಯವರಾದ ಜಯಲಕ್ಷ್ಮಿ, ಮಂಜುಳಮ್ಮರವರುಗಳೊಂದಿಗೆ, ಮಾ.05 ರಂದು ರಾತ್ರಿ ದೇವರ ದರ್ಶನ ಮಾಡುವ ಸಲುವಾಗಿ, ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಧರ್ಮಸ್ಥಳ ಅಣ್ಣಪ್ಪ ಸ್ವಾಮಿ ದ್ವಾರದ ಬಳಿ ನಿಂತುಕೊಂಡಿರುವಾಗ, KA52B9983 ನೇ ಕಾರನ್ನು ಅದರ ಚಾಲಕ ಮಣಿಕಂಠ ಎಂಬವರು ದುಡುಕುತನದಿಂದ ಚಲಾಯಿಸಿಕೊಂಡು ಬಂದು, ರೇಖಾ ಸಿ.ಎಸ್. ರವರ ಎರಡು ಕಾಲಿನ ಮೇಲೆ ಕಾರಿನ ಚಕ್ರ ಹರಿದು ಹೋದ ಪರಿಣಾಮ, ರೇಖಾರವರ ಕಾಲಿನ ಬೆರಳುಗಳಿಗೆ ರಕ್ತಗಾಯವಾಗಿರುತ್ತದೆ.

ಅವರನ್ನು ಚಿಕಿತ್ಸೆಗಾಗಿ ಉಜಿರೆ ಎಸ್ ಡಿ ಎಂ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂಬುದಾಗಿ, ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 26/2024 ಕಲಂ: 279,337 ಭಾ.ದಂ.ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 80ನೇ ಹುಟ್ಟುಹಬ್ಬ ಪ್ರಯುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ ಈ ಭಾರಿ ಹೆಚ್ಚು ಕ್ರೀಡಾಭಿಮಾನಿಗಳು ಸೇರುವ ನಿರೀಕ್ಷೆ, ವಿಜೇತ ತಂಡಗಳಿಗೆ ನಗದು ಹಾಗೂ ಟ್ರೋಪಿ,

Suddi Udaya

“ಬಂಟರ ಕ್ರೀಡಾಕೂಟ-2026” ಕ್ರಿಕೆಟ್ ಹಾಗೂ ತ್ರೋಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya

ಉಜಿರೆ: ಪ್ರಕಾಶ್ ಎಲೆಕ್ಟ್ರಾನಿಕ್ಸ್ ಹಾಗೂ ಫರ್ನಿಚರ್ ಮಳಿಗೆಯಲ್ಲಿ ಪ್ರೆಸ್ಟೀಜ್ ಕಂಪನಿಯ ನವೀನ ಮಾದರಿಯ ಎಂಡ್ಯೂರ ಪ್ರೊ ಮಿಕ್ಸರ್ ಗ್ರೈಂಡರ್ ಬಿಡುಗಡೆ

Suddi Udaya

ಬಡಗಕಾರಂದೂರು ಶಾಲಾ ಮಕ್ಕಳಿಗೆ ಮಿತ್ತರೋಡಿ ಪ್ರಸಾದ್ ಆಚಾರ್ಯ ರವರಿಂದ ಡ್ರಾಯಿಂಗ್ ಪುಸ್ತಕ ವಿತರಣೆ

Suddi Udaya

ವಾಣಿ ಕಾಲೇಜಿನಲ್ಲಿ ವಿಶ್ವಮಾನವ ದಿನಾಚರಣೆ

Suddi Udaya

ಮೇ 21: ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸುವರ್ಣ ಮಹೋತ್ಸವ ಸಮಾರೋಪ

Suddi Udaya
error: Content is protected !!