25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಮಹಿಳೆಯ ಕಾಲಿನ ಮೇಲೆ ಹರಿದ ಕಾರು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಧರ್ಮಸ್ಥಳ: ಧರ್ಮಸ್ಥಳ ಅಣ್ಣಪ್ಪ ಸ್ವಾಮಿ ದ್ವಾರದ ಬಳಿ ಕಾರೊಂದು ಮಹಿಳೆಯ ಕಾಲಿನ ಮೇಲೆ ಹರಿದು ಹೋದ ಪರಿಣಾಮ ಕಾಲಿನ ಬೆರಳುಗಳಿಗೆ ರಕ್ತ ಗಾಯವಾದ ಘಟನೆ ಮಾ.5ರಂದು ವರದಿಯಾಗಿದೆ.

ಘಟನೆ ವಿವರ: ಚನ್ನರಾಯಪಟ್ಟಣ ತಾಲೂಕು, ಹಾಸನ ನಿವಾಸಿ ಶ್ರೀಮತಿ ರೇಖಾ ಸಿ.ಎಸ್ (39ವ) ಎಂಬವರ ದೂರಿನಂತೆ, ಸದ್ರಿಯವರು ತನ್ನ ನೆರೆಕೆರೆಯವರಾದ ಜಯಲಕ್ಷ್ಮಿ, ಮಂಜುಳಮ್ಮರವರುಗಳೊಂದಿಗೆ, ಮಾ.05 ರಂದು ರಾತ್ರಿ ದೇವರ ದರ್ಶನ ಮಾಡುವ ಸಲುವಾಗಿ, ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಧರ್ಮಸ್ಥಳ ಅಣ್ಣಪ್ಪ ಸ್ವಾಮಿ ದ್ವಾರದ ಬಳಿ ನಿಂತುಕೊಂಡಿರುವಾಗ, KA52B9983 ನೇ ಕಾರನ್ನು ಅದರ ಚಾಲಕ ಮಣಿಕಂಠ ಎಂಬವರು ದುಡುಕುತನದಿಂದ ಚಲಾಯಿಸಿಕೊಂಡು ಬಂದು, ರೇಖಾ ಸಿ.ಎಸ್. ರವರ ಎರಡು ಕಾಲಿನ ಮೇಲೆ ಕಾರಿನ ಚಕ್ರ ಹರಿದು ಹೋದ ಪರಿಣಾಮ, ರೇಖಾರವರ ಕಾಲಿನ ಬೆರಳುಗಳಿಗೆ ರಕ್ತಗಾಯವಾಗಿರುತ್ತದೆ.

ಅವರನ್ನು ಚಿಕಿತ್ಸೆಗಾಗಿ ಉಜಿರೆ ಎಸ್ ಡಿ ಎಂ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂಬುದಾಗಿ, ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 26/2024 ಕಲಂ: 279,337 ಭಾ.ದಂ.ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬೆಳ್ತಂಗಡಿ : ವಿಕಲಚೇತನ ವ್ಯಕ್ತಿಯನ್ನು ಮನೆಯವರು ಎತ್ತಿಕೊಂಡು ಮತಗಟ್ಟೆಗೆ ಹೋಗಿ ಮತ ಚಲಾವಣೆ

Suddi Udaya

ಬೆಳ್ತಂಗಡಿ: ಸ.ಪ್ರ.ದ. ಕಾಲೇಜಿನಲ್ಲಿ ರೋವರ್ ರೇಂಜರ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಚಟುವಟಿಕೆಗಳ ಉದ್ಘಾಟನೆ

Suddi Udaya

ತೆಂಕಕಾರಂದೂರು ವಿಷ್ಣು ಮೂರ್ತಿ ಮಕ್ಕಳ ಕುಣಿತ ಭಜನೆ ತರಬೇತಿ ಉದ್ಘಾಟನೆ

Suddi Udaya

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

Suddi Udaya

ಕಳ್ಳತನ ಪ್ರಕರಣವನ್ನು ಭೇದಿಸಿದ ಬಂಟ್ವಾಳ ಪೊಲೀಸರು: ಆರೋಪಿ ತೆಕ್ಕಾರು ನಿವಾಸಿ ಮಹಮ್ಮದ್ ಫಾರೂಕ್ ಮತ್ತು ಕಳವುಗೈದ ನಗದು ವಶ

Suddi Udaya

ಕಾಂಗ್ರೆಸ್ ಪಕ್ಷದಿಂದ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಜ್ಯಾರಿಗಾಗಿ ಬ್ಲಾಕ್, ಗ್ರಾಮ ಮಟ್ಟದಲ್ಲಿ ತರಬೇತಿ: ಇಂದಿರಾ ಸೇವಾ ಸೆಂಟರ್ ಗಳನ್ನು ತೆರೆದು ಫಲಾನುಭವಿಗಳಿಗೆ ಅರ್ಜಿ ನೊಂದಣಿ

Suddi Udaya
error: Content is protected !!