25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಮಹಿಳೆಯ ಕಾಲಿನ ಮೇಲೆ ಹರಿದ ಕಾರು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಧರ್ಮಸ್ಥಳ: ಧರ್ಮಸ್ಥಳ ಅಣ್ಣಪ್ಪ ಸ್ವಾಮಿ ದ್ವಾರದ ಬಳಿ ಕಾರೊಂದು ಮಹಿಳೆಯ ಕಾಲಿನ ಮೇಲೆ ಹರಿದು ಹೋದ ಪರಿಣಾಮ ಕಾಲಿನ ಬೆರಳುಗಳಿಗೆ ರಕ್ತ ಗಾಯವಾದ ಘಟನೆ ಮಾ.5ರಂದು ವರದಿಯಾಗಿದೆ.

ಘಟನೆ ವಿವರ: ಚನ್ನರಾಯಪಟ್ಟಣ ತಾಲೂಕು, ಹಾಸನ ನಿವಾಸಿ ಶ್ರೀಮತಿ ರೇಖಾ ಸಿ.ಎಸ್ (39ವ) ಎಂಬವರ ದೂರಿನಂತೆ, ಸದ್ರಿಯವರು ತನ್ನ ನೆರೆಕೆರೆಯವರಾದ ಜಯಲಕ್ಷ್ಮಿ, ಮಂಜುಳಮ್ಮರವರುಗಳೊಂದಿಗೆ, ಮಾ.05 ರಂದು ರಾತ್ರಿ ದೇವರ ದರ್ಶನ ಮಾಡುವ ಸಲುವಾಗಿ, ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಧರ್ಮಸ್ಥಳ ಅಣ್ಣಪ್ಪ ಸ್ವಾಮಿ ದ್ವಾರದ ಬಳಿ ನಿಂತುಕೊಂಡಿರುವಾಗ, KA52B9983 ನೇ ಕಾರನ್ನು ಅದರ ಚಾಲಕ ಮಣಿಕಂಠ ಎಂಬವರು ದುಡುಕುತನದಿಂದ ಚಲಾಯಿಸಿಕೊಂಡು ಬಂದು, ರೇಖಾ ಸಿ.ಎಸ್. ರವರ ಎರಡು ಕಾಲಿನ ಮೇಲೆ ಕಾರಿನ ಚಕ್ರ ಹರಿದು ಹೋದ ಪರಿಣಾಮ, ರೇಖಾರವರ ಕಾಲಿನ ಬೆರಳುಗಳಿಗೆ ರಕ್ತಗಾಯವಾಗಿರುತ್ತದೆ.

ಅವರನ್ನು ಚಿಕಿತ್ಸೆಗಾಗಿ ಉಜಿರೆ ಎಸ್ ಡಿ ಎಂ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂಬುದಾಗಿ, ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 26/2024 ಕಲಂ: 279,337 ಭಾ.ದಂ.ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ಡ್ರಗ್ ಡಿಸ್ಕವರಿ ಮತ್ತು ಪ್ರಿಸಿಷನ್ ಮೆಡಿಸಿನ್‌ನಲ್ಲಿ ಎ.ಐ ಪಾತ್ರ ಕುರಿತು ಉಪನ್ಯಾಸ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ರತ್ನ ಮಾನಸ ಜೀವನ-ಶಿಕ್ಷಣ ವಿದ್ಯಾರ್ಥಿ ನಿಲಯದಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಇದರ ವಾರ್ಷಿಕ ಮಹಾಸಭೆ

Suddi Udaya

ಶಕ್ತಿಶಾಲಿ ಭಾರತದ ಸಶಕ್ತ ಬಜೆಟ್ : ಹರೀಶ್ ಪೂಂಜ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ನಾವೂರು ಗ್ರಾಮ ಸಮಿತಿಯ ಸಭೆ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಸ್ಥಾನಗಳಲ್ಲೂ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಜಯಭೇರಿ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya
error: Content is protected !!