22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಬ್ರಹ್ಮಶ್ರೀ ಮಂಡಳಿಯಿಂದ ಪೆನ್ನು ವಿತರಣೆ

ಬಳಂಜ: ಪ್ರತಿಷ್ಠಿತ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ಬಳಂಜ ಸರಕಾರಿ ಪ್ರೌಢ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಪೆನ್ನು ವಿತರಣೆ ಕಾರ್ಯಕ್ರಮವು ಮಾ.6ರಂದು ನಡೆಯಿತು.

ಮಂಡಳಿಯ ಪ್ರಧಾನ ಸಂಚಾಲಕರಾದ ಹರೀಶ್ ವೈ ಚಂದ್ರಮ ಇವರ ನೇತೃತ್ವದಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯು ಈಗಾಗಲೇ ಕರ್ನಾಟಕ ರಾಜ್ಯ ಮಾತ್ರವಲ್ಲದೆ ಹೊರ ರಾಜ್ಯದಲ್ಲೂ ಕಾರ್ಯಕ್ರಮಗಳನ್ನು ನೀಡಿ ಜನ ಮೆಚ್ಚುಗೆಯನ್ನು ಪಡೆದಿದ್ದು ಸ್ಥಳೀಯವಾಗಿ ಹಲವಾರು ಸಮಾಜಮುಖಿ ಸೇವೆಯನ್ನು ಮಾಡುತ್ತಿದೆ.

ಇದೀಗ ಮಂಡಳಿಯು ಮಹಾ ಶಿವರಾತ್ರಿಯ ಸಂದರ್ಭದಲ್ಲಿ 200ನೇ ಭಜನಾ ಕಾರ್ಯಕ್ರಮವನ್ನು ನೀಡುತ್ತಿದ್ದು ಇದರ ಅಂಗವಾಗಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸ್ಫೂರ್ತಿ ತುಂಬಲು ಪೆನ್ನು ವಿತರಣೆ ಮಾಡಿರುವುದು ಶ್ಲಾಘನೀಯವಾಗಿದೆ ಎಂದು ಬಳಂಜ ಶಾಲಾ ಮುಖ್ಯೋಪಾದ್ಯಾಯರು ಹಾಗೂ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಅಭಿಪ್ರಾಯ ಪಟ್ಟಿದ್ದಾರೆ.

Related posts

ಜಿಲ್ಲಾಧಿಕಾರಿಗಳ ಆದೇಶ: ತುರ್ತು ಪಾಲನೆ ನೋಟೀಸು ಜಾರಿ

Suddi Udaya

ಬಂಟರ ಯಾನೆ ನಾಡವರ ಸಂಘ ಮಡಂತ್ಯಾರು ವಲಯದ ಗರ್ಡಾಡಿ, ಪಡಂಗಡಿ ಗ್ರಾಮಗಳ ಗ್ರಾಮ ಸಮಿತಿ ರಚನೆ

Suddi Udaya

ಬಾಲೆ ಪಿಲಿ ಸ್ಪರ್ಧೆ: ಬೆಳ್ತಂಗಡಿಯ ಶ್ರೇಷ್ಠ ಆಚಾರ್ಯ ಪ್ರಥಮ

Suddi Udaya

ಉಜಿರೆ: ಲಕ್ಷ್ಮೀಶ ಭಟ್ ಇವರಿಗೆ ಹಿಮಾಲಯ ವುಡ್ ಬ್ಯಾಡ್ಜ್ ನಲ್ಲಿ ಅರ್ಹತೆ

Suddi Udaya

ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದ ಸ್ವಾಗತ ಗೋಪುರ ಉದ್ಘಾಟನೆ

Suddi Udaya

ಸುಲ್ಕೇರಿ ಗ್ರಾ. ಪಂ. ವ್ಯಾಪ್ತಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!