ಮಾ.9: ಬೆಳ್ತಂಗಡಿ ಪಂಚ ಗ್ಯಾರಂಟಿ ಸಮಾವೇಶದಲ್ಲಿ ಭಾಗವಹಿಸಲು ಉಚಿತ ಬಸ್ಸು ವ್ಯವಸ್ಥೆ

Suddi Udaya

ಬೆಳ್ತಂಗಡಿ: ಮಾರ್ಚ್ 9ರಂದು ಶನಿವಾರ ಪೂರ್ವಾಹ್ನ ಬೆಳ್ತಂಗಡಿಯ ಕಿನ್ಯಮ್ಮ ಯಾನೆ ಗುಣವತಿಯಮ್ಮ ಸಭಾಂಗಣದಲ್ಲಿ ನಡೆಯಲಿರುವ ಸರ್ಕಾರದ ಪಂಚ ಗ್ಯಾರಂಟಿಗಳ ಫಲಾನುಭವಿಗಳ ಸಮಾವೇಶಕ್ಕೆ ಫಲಾನುಭವಿಗಳಿಗೆ ಉಚಿತವಾಗಿ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ.

ಪ್ರತೀ ಗ್ರಾಮ ಪಂಚಾಯತಿಗೆ ಬಸ್ಸುಗಳನ್ನು ಒದಗಿಸಲಾಗಿದ್ದು ಮಾರ್ಗಸೂಚಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಅಂದು ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಗ್ರಾಮ ಪಂಚಾಯಿತಿಗಳಿಂದ ಬಸ್ಸುಗಳು ಹೊರಡಲಿದ್ದು ಸಮಾವೇಶ ಮುಗಿದ ಬಳಿಕ ಫಲಾನುಭವಿಗಳನ್ನು ವಾಪಾಸು ಕರೆದುಕೊಂಡು ಹೋಗುವ ವ್ಯವಸ್ಥೆ ಮಾಡಲಾಗಿದೆ.

ಹೆಚ್ಚಿನ ವಿವರಗಳಿಗೆ ಆಯಾ ಗ್ರಾಮ ಪಂಚಾಯಿತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ/ಕಾರ್ಯದರ್ಶಿ ಅಥವಾ ಅಂಗನವಾಡಿ ಕಾರ್ಯಕರ್ತೆಯವರನ್ನು ಸಂಪರ್ಕಿಸಬಹುದೆಂದು ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ಎಸ್.ತಿಳಿಸಿದ್ದಾರೆ.

Leave a Comment

error: Content is protected !!