23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮಾ.9: ಬೆಳ್ತಂಗಡಿ ಪಂಚ ಗ್ಯಾರಂಟಿ ಸಮಾವೇಶದಲ್ಲಿ ಭಾಗವಹಿಸಲು ಉಚಿತ ಬಸ್ಸು ವ್ಯವಸ್ಥೆ

ಬೆಳ್ತಂಗಡಿ: ಮಾರ್ಚ್ 9ರಂದು ಶನಿವಾರ ಪೂರ್ವಾಹ್ನ ಬೆಳ್ತಂಗಡಿಯ ಕಿನ್ಯಮ್ಮ ಯಾನೆ ಗುಣವತಿಯಮ್ಮ ಸಭಾಂಗಣದಲ್ಲಿ ನಡೆಯಲಿರುವ ಸರ್ಕಾರದ ಪಂಚ ಗ್ಯಾರಂಟಿಗಳ ಫಲಾನುಭವಿಗಳ ಸಮಾವೇಶಕ್ಕೆ ಫಲಾನುಭವಿಗಳಿಗೆ ಉಚಿತವಾಗಿ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ.

ಪ್ರತೀ ಗ್ರಾಮ ಪಂಚಾಯತಿಗೆ ಬಸ್ಸುಗಳನ್ನು ಒದಗಿಸಲಾಗಿದ್ದು ಮಾರ್ಗಸೂಚಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಅಂದು ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಗ್ರಾಮ ಪಂಚಾಯಿತಿಗಳಿಂದ ಬಸ್ಸುಗಳು ಹೊರಡಲಿದ್ದು ಸಮಾವೇಶ ಮುಗಿದ ಬಳಿಕ ಫಲಾನುಭವಿಗಳನ್ನು ವಾಪಾಸು ಕರೆದುಕೊಂಡು ಹೋಗುವ ವ್ಯವಸ್ಥೆ ಮಾಡಲಾಗಿದೆ.

ಹೆಚ್ಚಿನ ವಿವರಗಳಿಗೆ ಆಯಾ ಗ್ರಾಮ ಪಂಚಾಯಿತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ/ಕಾರ್ಯದರ್ಶಿ ಅಥವಾ ಅಂಗನವಾಡಿ ಕಾರ್ಯಕರ್ತೆಯವರನ್ನು ಸಂಪರ್ಕಿಸಬಹುದೆಂದು ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ಎಸ್.ತಿಳಿಸಿದ್ದಾರೆ.

Related posts

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ-9 ಸ್ಥಾನ,‌ ಕಾಂಗ್ರೆಸ್ ಬೆಂಬಲಿತ -3 ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ದ.ಕ ಲೋಕಸಭಾ ಚುನಾವಣೆ: ವೀಕ್ಷಕರಾಗಿ ಹರೀಶ್ ಕುಮಾರ್ ನೇಮಕ

Suddi Udaya

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಮತ್ತು ತುಳು ಸಂಘ ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜು ಆಶ್ರಯದಲ್ಲಿ ಎರಡು ದಿನಗಳ ತಾಲೂಕು ಮಟ್ಟದ ತುಳು ಸಾಹಿತ್ಯ ರಚನಾ ಕಮ್ಮಟ ಉದ್ಘಾಟನೆ

Suddi Udaya

ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ ರೂ.1.20ಕೋಟಿ ವಿಮಾ ಪರಿಹಾರ ಹಸ್ತಾಂತರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಭೇಟಿ, ದೇವರ ದರ್ಶನ

Suddi Udaya

ಬೆಳ್ತಂಗಡಿ: ಗಾಳಿ ಮಳೆಗೆ 44 ವಿದ್ಯುತ್ ಕಂಬ ಧರಾಶಾಯಿ: ಅಪಾರ ಹಾನಿ

Suddi Udaya
error: Content is protected !!