24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗೇರುಕಟ್ಟೆ: ಕೊರಂಜ ಸರಕಾರಿ ಶಾಲಾ ಪೋಷಕರ ಮತ್ತು ಹಿರಿಯ ವಿದ್ಯಾರ್ಥಿಗಳ ಸಭೆ: ಸಮಿತಿ ರಚನೆ

ಬೆಳ್ತಂಗಡಿ : ಗೇರುಕಟ್ಟೆ ಕೊರಂಜ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪೋಷಕರ ಮತ್ತು ಹಿರಿಯ ವಿದ್ಯಾರ್ಥಿಗಳ ಸಭೆ ಮಾ.6 ರಂದು ಶಾಲಾ ಸಭಾಂಗಣದಲ್ಲಿ ಜರುಗಿತು.


ಶಾಲಾ ಸರಕಾರಿ ಶಾಲೆಯನ್ನು ಶೈಕ್ಷಣಿಕವಾಗಿ ಮತ್ತಷ್ಟು ಬಲವರ್ಧನೆಗೊಳಿಸಲು ಅಗತ್ಯವಾದ ಗ್ರಂಥಾಲಯ ಉಪಕರಣಗಳು, ಕ್ರೀಡಾಲಯ ಪೀಠೋಪಕರಣಗಳು, ಪಾಠೋಪಕರಣಗಳು,ಇ ಕಲಿಕಾ ಕೇಂದ್ರ ಅಭಿವೃದ್ಧಿ ಪಡಿಸಲು ಶಾಲಾ ಹಳೆಯ ವಿಧ್ಯಾರ್ಥಿಗಳ ಸಂಘದ ರಚನೆಯನ್ನುಮಾ.31ರ ಅಂತ್ಯದಲ್ಲಿ ಮಾಡುವಂತೆ ಸರಕಾರದ ಆದೇಶವನ್ನು ದೈಹಿಕ ಶಿಕ್ಷಣ ಶಿಕ್ಷಕ ರವಿರಾಜ್ ಸಭೆಯಲ್ಲಿ ವಾಚಿಸಿದರು.


ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಜನಾರ್ದನ ಗೌಡ ಕೆ, ಉಪಾಧ್ಯಕ್ಷೆ ಶ್ರೀಮತಿ ವನಿತಾ, ಕಾರ್ಯದರ್ಶಿ ಭುವನೇಶ್ ಜಿ, ಜತೆ ಕಾರ್ಯದರ್ಶಿ ಸಿದ್ದೀಕ್ ಜಿ.ಎ., ಕೋಶಾಧಿಕಾರಿ ಯೋಗೀಶ್ ಕುಮಾರ್, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕೆ.ಎನ್. ಗೌಡ. ಕಲಾಯಿತೋಟ್ಟು, ಸುಭಾಷಿಣಿ ಕೆ., ಅಬೂಬಕ್ಕರ್, ವೆಂಕಪ್ಪ ಪೂಜಾರಿ, ವಿಂಧ್ಯ, ಅಶ್ವಿನಿ, ಸುಶೀಲಾ ಅವರನ್ನು ಆಯ್ಕೆ ಮಾಡಲಾಯಿತು.


ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ,ಕಳಿಯ ಗ್ರಾಮ ಸದಸ್ಯ ಹರೀಶ್ ಕುಮಾರ್ ಬಿ.ಅಧ್ಯಕ್ಷತೆ ವಹಿಸಿದರು.


ವೇದಿಕೆಯಲ್ಲಿ ಕಳಿಯ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ, ಹಾಲಿ ಸದಸ್ಯೆ ಸುಭಾಷಿಣಿ ಜನಾರ್ಧನ ಗೌಡ ಕೆ, ಮುಖ್ಯ ಶಿಕ್ಷಕಿ ಶಾಂತಾ ಎಸ್, ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷೆ ಮುನಿರಾ ಹಾಗೂ ಸದಸ್ಯರು, ಹಿರಿಯ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷ ಜನಾರ್ದನ ಗೌಡ ಕೆ, ಉಪಸ್ಥಿತರಿದ್ದರು.

Related posts

ಪ್ರೌಢ ಶಾಲಾ ವಿಭಾಗದ ಅಥ್ಲೆಟಿಕ್ ಕ್ರೀಡಾಕೂಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಶಿರ್ಲಾಲು ರಿಕ್ಷಾ ಚಾಲಕ-ಮಾಲಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮುಳಿಕ್ಕಾರುನಲ್ಲಿ ದೈವ ವ್ಯಾಘ್ರ ಚಾಮುಂಡಿ, ಪರಿವಾರ ದೈವಗಳ ನೇಮೋತ್ಸವ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವಿವಿಧ ಪಕ್ಷಗಳು ಪಡೆದುಕೊಂಡ ಬೂತುವಾರು ಮತಗಳ ವಿವರ

Suddi Udaya

ಧರ್ಮಸ್ಥಳ: ನೇತ್ರಾವತಿ ಸೇತುವೆಯ ಕೆಳಭಾಗದ ನದಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಕನ್ಯಾಡಿ: ನೇರೋಳ್ ಪಲ್ಕೆ ಕೇಸರಿ ಗೆಳೆಯರ ಬಳಗದಿಂದ 11ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

Suddi Udaya
error: Content is protected !!