22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗೇರುಕಟ್ಟೆ: ಕೊರಂಜ ಸರಕಾರಿ ಶಾಲಾ ಪೋಷಕರ ಮತ್ತು ಹಿರಿಯ ವಿದ್ಯಾರ್ಥಿಗಳ ಸಭೆ: ಸಮಿತಿ ರಚನೆ

ಬೆಳ್ತಂಗಡಿ : ಗೇರುಕಟ್ಟೆ ಕೊರಂಜ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪೋಷಕರ ಮತ್ತು ಹಿರಿಯ ವಿದ್ಯಾರ್ಥಿಗಳ ಸಭೆ ಮಾ.6 ರಂದು ಶಾಲಾ ಸಭಾಂಗಣದಲ್ಲಿ ಜರುಗಿತು.


ಶಾಲಾ ಸರಕಾರಿ ಶಾಲೆಯನ್ನು ಶೈಕ್ಷಣಿಕವಾಗಿ ಮತ್ತಷ್ಟು ಬಲವರ್ಧನೆಗೊಳಿಸಲು ಅಗತ್ಯವಾದ ಗ್ರಂಥಾಲಯ ಉಪಕರಣಗಳು, ಕ್ರೀಡಾಲಯ ಪೀಠೋಪಕರಣಗಳು, ಪಾಠೋಪಕರಣಗಳು,ಇ ಕಲಿಕಾ ಕೇಂದ್ರ ಅಭಿವೃದ್ಧಿ ಪಡಿಸಲು ಶಾಲಾ ಹಳೆಯ ವಿಧ್ಯಾರ್ಥಿಗಳ ಸಂಘದ ರಚನೆಯನ್ನುಮಾ.31ರ ಅಂತ್ಯದಲ್ಲಿ ಮಾಡುವಂತೆ ಸರಕಾರದ ಆದೇಶವನ್ನು ದೈಹಿಕ ಶಿಕ್ಷಣ ಶಿಕ್ಷಕ ರವಿರಾಜ್ ಸಭೆಯಲ್ಲಿ ವಾಚಿಸಿದರು.


ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಜನಾರ್ದನ ಗೌಡ ಕೆ, ಉಪಾಧ್ಯಕ್ಷೆ ಶ್ರೀಮತಿ ವನಿತಾ, ಕಾರ್ಯದರ್ಶಿ ಭುವನೇಶ್ ಜಿ, ಜತೆ ಕಾರ್ಯದರ್ಶಿ ಸಿದ್ದೀಕ್ ಜಿ.ಎ., ಕೋಶಾಧಿಕಾರಿ ಯೋಗೀಶ್ ಕುಮಾರ್, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕೆ.ಎನ್. ಗೌಡ. ಕಲಾಯಿತೋಟ್ಟು, ಸುಭಾಷಿಣಿ ಕೆ., ಅಬೂಬಕ್ಕರ್, ವೆಂಕಪ್ಪ ಪೂಜಾರಿ, ವಿಂಧ್ಯ, ಅಶ್ವಿನಿ, ಸುಶೀಲಾ ಅವರನ್ನು ಆಯ್ಕೆ ಮಾಡಲಾಯಿತು.


ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ,ಕಳಿಯ ಗ್ರಾಮ ಸದಸ್ಯ ಹರೀಶ್ ಕುಮಾರ್ ಬಿ.ಅಧ್ಯಕ್ಷತೆ ವಹಿಸಿದರು.


ವೇದಿಕೆಯಲ್ಲಿ ಕಳಿಯ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ, ಹಾಲಿ ಸದಸ್ಯೆ ಸುಭಾಷಿಣಿ ಜನಾರ್ಧನ ಗೌಡ ಕೆ, ಮುಖ್ಯ ಶಿಕ್ಷಕಿ ಶಾಂತಾ ಎಸ್, ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷೆ ಮುನಿರಾ ಹಾಗೂ ಸದಸ್ಯರು, ಹಿರಿಯ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷ ಜನಾರ್ದನ ಗೌಡ ಕೆ, ಉಪಸ್ಥಿತರಿದ್ದರು.

Related posts

ಮುಗೇರಡ್ಕ ದೈವಸ್ಥಾನ ವತಿಯಿಂದ ಅಲೆಕ್ಕಿ ಶಿಶುಮಂದಿರಕ್ಕೆ ಧನ ಸಹಾಯ

Suddi Udaya

‘ಐಐಎಸ್ಇಆರ್ ಆಪ್ಟಿಟ್ಯೂಡ್ ಟೆಸ್ಟ್’ ಪರೀಕ್ಷೆ: ಗುರುವಾಯನಕೆರೆಯ ಎಕ್ಸೆಲ್ ಪದವಿಪೂರ್ವ ಕಾಲೇಜಿಗೆ ಅಭೂತಪೂರ್ವ ಯಶಸ್ಸು

Suddi Udaya

ಕೊಯ್ಯೂರು : ಪಂಚಶ್ರೀ ಸ್ವಸಹಾಯ ಸಂಘದ ವತಿಯಿಂದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ವಿಜಯ ಕುಮಾರ್ ಎಂ. ರವರಿಗೆ ಸನ್ಮಾನ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಗಾಂಧಿ ಜಯಂತಿ ದಿನಾಚರಣೆ

Suddi Udaya

ಸಹನಾ ಶ್ರೀ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯಿಂದ ಶೀಘ್ರದಲ್ಲೇ ಸಹನಾ ಶ್ರೀ ಫೌಂಡೇಶನ್ ಪ್ರಾರಂಭ

Suddi Udaya

ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ

Suddi Udaya
error: Content is protected !!