July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಬಂಗಾಡಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

ಇಂದಬೆಟ್ಟು : ಶ್ರೀ ಕ್ಷೇತ್ರ ಧರ್ಮಾಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇಂದಬೆಟ್ಟು ಬಂಗಾಡಿ ಪ್ರೌಢ ಶಾಲೆಯ 10 ನೇ ತರಗತಿ ಮಕ್ಕಳಿಗೆ ವಿಶೇಷ ತರಗತಿಯನ್ನು ನಡೆಸಲಾಗಿದ್ದು ಇದರ ಸಮಾರೋಪ ಸಮಾರಂಭವನ್ನು ಬಂಗಾಡಿ ಪ್ರೌಢ ಶಾಲೆಯಲ್ಲಿ ನಡೆಸಲಾಯಿತು.

ಸಭೆಯನ್ನು ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ದೀಪಬೆಳಗಿಸಿ ಮಕ್ಕಳ ಮುಂದಿನ ವಿದ್ಯಾಭ್ಯಾಸದ ಭವಿಷ್ಯಕ್ಕೆ ಎಸ್.ಎಸ್.ಎಲ್.ಸಿ ಯ ಅಂಕವೇ ಪ್ರಾಮುಖ್ಯವಾಗಿದ್ದು ಮಕ್ಕಳಿಗೆ ವಿಶೇಷ ತರಗತಿಯನ್ನು ಹಮ್ಮಿಕೊಂಡಿದ್ದು ಮಕ್ಕಳು ಇದರ ಪ್ರಯೋಜನವನ್ನು ಪಡೆದಿರುತ್ತೀರಿ. ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗುವಂತೆ ತಿಳಿಸಿದರು.

ಶಾಲೆಯ ಮುಖ್ಯೋಪಾಧ್ಯಾಯರಾದ ಚಂದ್ರಕಲಾ ರವರು ಶಾಲೆಯ ಮಕ್ಕಳಿಗೆ ಈ ಅವಕಾಶ ನೀಡಿದಕ್ಕಾಗಿ ಧನ್ಯವಾದ ತಿಳಿಸಿದರು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾಬಿವೃದ್ಧಿ ಸಮಿತಿಯ ಅಧ್ಯಕ್ಷ ಉಮೇಶ್ ರವರು ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಕ್ಷೇತ್ರದಿಂದ ಶಾಲೆಗೆ ಉತ್ತಮ ಸಹಕಾರ ದೊರೆತಿದ್ದು ಎಲ್ಲಾ ಮಕ್ಕಳು ಉತ್ತಮ ಅಂಕಗಳಿಸುವಂತೆ ತಿಳಿಸಿದರು.

ತರಬೇತಿ ಪಡೆದ ವಿದ್ಯಾರ್ಥಿ ನಿಶಿತಾ ರವರು ಅನಿಸಿಕೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕಿ ಉಷಾ, ವಿಶೇಷ ತರಗತಿ ಶಿಕ್ಷಕಿ ಕವಿತಾ, ಜ್ಞಾನ ವಿಕಾಸ ಸಮನ್ವಯಧಿಕಾರಿ ಮಧುರಾ ವಸಂತ್, ಸೇವಾಪ್ರತಿನಿಧಿ ಶೈಲ ಉಪಸ್ಥಿತರಿದ್ದರು.

Related posts

ಹತ್ಯಡ್ಕ : ಶ್ರೀ ವಿಠೋಬ ರಕುಮಾಯಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶೃಂಗೇರಿಯ ಜಗದ್ಗುರು ಭಾರತೀತೀರ್ಥ ಸ್ವಾಮೀಜಿ ಹಾಗೂ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರಿಂದ ರೂ.5 ಲಕ್ಷ ದೇಣಿಗೆ

Suddi Udaya

ಧರ್ಮಸ್ಥಳ: ಟಾಟಾ ಸುಮೋ ಹಾಗೂ ಸ್ಕೂಟಿ ನಡುವೆ ರಸ್ತೆ ಅಪಘಾತ: ಸ್ಕೂಟಿ ಸವಾರ ಗಂಭೀರ ಗಾಯ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಅರ್ಧಏಕಾಹ ಭಜನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ. ಪ್ರಾ. ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ

Suddi Udaya

ಅ.24: ‘ ಶ್ರೀ ಮಹಾಗಣಪತಿ ಇಂಗ್ಲೀಷ್ ಮೀಡಿಯಂ ಸ್ಕೂಲ್‌’ ನೂತನ ಕಟ್ಟಡದ ಶಿಲಾನ್ಯಾಸ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಭಾಗಿ

Suddi Udaya

ಚಾಮುಂಡೇಶ್ವರಿ ಯುವಕ ಮಂಡಲ, ಶ್ರೀ ಕ್ಷೇತ್ರ ಮುಂಡೂರು ಪ್ರಾಯೋಜಕತ್ವದಲ್ಲಿ ಮೈರೊಳ್ತಡ್ಕ ವಿವೇಕಾನಂದನಗರದಲ್ಲಿ ನೂತನ ಬಸ್ ತಂಗುದಾಣ ಲೋಕಾರ್ಪಣೆ

Suddi Udaya
error: Content is protected !!