September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಉಜಿರೆಯ ಲಾಡ್ಜ್ ಗೆ ಪೊಲೀಸ್ ದಾಳಿ: ವೇಶ್ಯಾವಾಟಿಕೆ‌ ನಿರತರಾಗಿದ್ದ‌ಮೂವರ ಬಂಧನ

ಉಜಿರೆ: ಉಜಿರೆಯ ಹಳೇ ಪೇಟೆ ಬಳಿಯ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ‌ ನಡೆಯುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ್ದು ವೇಶ್ಯಾವಾಟಿಕೆ‌ ನಿರತರಾಗಿದ್ದ ಆರೋಪಿಗಳನ್ನು ಬಂಧಿಸಿದ ಘಟನೆ ಮಾ. 6ರಂದು ನಡೆದಿದೆ.

ಮಾ.6 ರಂದು ಉಜಿರೆ ಗ್ರಾಮದ ಹಳೆ ಪೇಟೆ ಬಳಿಯ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ‌ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ, ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಬಿ.ಜಿ. ಸುಬ್ಬಾಪೂರ ಮಠ್ ರವರು ಠಾಣಾ ಸಿಬಂದಿಗಳೊಂದಿಗೆ, ಸದ್ರಿ ಸ್ಥಳಕ್ಕೆ ದಾಳಿ ನಡೆಸಿ, ವೇಶ್ಯಾವಾಟಿಕೆ‌ ನಿರತರಾಗಿದ್ದ ಆರೋಪಿಗಳಾದ, ರೇಣುಕಾ ಪ್ರಸಾದ್, ಅರಳೇ ಪೇಟೆ, ತುಮಕೂರು, ರಾಜೇಶ್ ಮೋಹನ್ ನಾಯರ್ ನಿಟ್ಟೆ ಕಾರ್ಕಳ, ನಿತಿನ್ ಕುಮಾರ್, ನೂರಾಲ್ ಬೆಟ್ಟು ಕಾರ್ಕಳ ಎಂಬವರುಗಳನ್ನು ವಶಕ್ಕೆ ಪಡೆದುಕೊಂಡು, ಸ್ಥಳದಲ್ಲಿದ್ದ ಪ್ರಕರಣದ ನೊಂದ ಮಹಿಳೆಯನ್ನು ಮಹಿಳಾ ಸಿಬ್ಬಂದಿಗಳ ಭದ್ರತೆಗೆ ಕೊಟ್ಟು, ಸದ್ರಿ ಆರೋಪಿಗಳ ವಿರುದ್ದ ಹಾಗೂ ದಾಳಿಯ ವೇಳೆ ಪರಾರಿಯಾದ ಆರೋಪಿಗಳ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 30/24 ಕಲಂ:3,4,5,5 (d) ITP ACT ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಗೇರುಕಟ್ಟೆ: ರಿಕ್ಷಾ ಚಾಲಕ ಎಂ.ಕೆ. ಶರೀಪುದ್ದೀನ್ ನಿಧನ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯೋತ್ಸವ ಮತ್ತು ಯೋಧ ನಮನ ಕಾರ್ಯಕ್ರಮ

Suddi Udaya

ಉಜಿರೆ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಅನಾರು ಸ.ಉ.ಹಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ಯಕ್ಷದ್ರುವ ಪಟ್ಲ ಫೌಂಡೇಶನ್ ರವರ ಉಚಿತ ಯಕ್ಷಧ್ರುವ ಯಕ್ಷ ಶಿಕ್ಷಣ ತರಗತಿ ಉದ್ಘಾಟನೆ

Suddi Udaya
error: Content is protected !!