25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿ

ಕೊಡಗು ವಿ.ವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ ಎನ್ ಜನಾರ್ದನ್ ನೇಮಕ

ಬೆಳ್ತಂಗಡಿ: ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸೆನೆಟ್ ಸದಸ್ಯನಾಗಿ ಶ್ರಿ ಕ್ಷೇತ್ರ ಧರ್ಮಸ್ಥಳದ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ ಎನ್ ಜನಾರ್ದನ್ ನೇಮಕಗೊಂಡಿದ್ದಾರೆ.

ಇವರು ರುಡ್ ಸೆಟ್,ಮತ್ತು ಅರ್ ಸೆಟಿಗಳ ರಾಷ್ಟ್ರೀಯ ನಿರ್ದೇಶಕರಾಗಿದ್ದು ದೇಶದಾದ್ಯಂತ 560 ಕ್ಕು ಅಧಿಕ ಅರ್ ಸೆಟಿಗಳ ಸ್ಥಾಪನೆಗೆ ಅರ್ ಸೆಟಿ ಅದ್ಯಕ್ಷ ಡಾ ಡಿ ವೀರೇಂದ್ರ ಹೆಗ್ಗಡೆಯವರೊಂದಿಗೆ ಶ್ರಮಿಸಿದ್ದರು.ಅರ್ ಸೆಟಿಗಳು ಪ್ರತಿವರ್ಷ 4 ಲಕ್ಷಕ್ಕು ಅಧಿಕ ನಿರುದ್ಯೋಗಿ ಯುವ ಜನತೆಗೆ ತರಬೇತಿ ನೀಡುತ್ತಿದ್ದು ಇದರಲ್ಲಿ ಪ್ರತಿ ವರ್ಷ 3 ಲಕ್ಷಕ್ಕು ಅಧಿಕ ಮಂದಿ ಸ್ವ ಉದ್ಯೋಗಿಗಳಾಗಿ ಸ್ವಂತ ಜೀವನ ನಡೆಸುತ್ತಾರೆ. ಸಿಂಡಿಕೇಟ್ ಬ್ಯಾಂಕ್ ನಲ್ಲಿಸತತ 35 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಇವರು ಬಳಿಕ ಶ್ರಿ ಕ್ಷೇತ್ರ ಧರ್ಮಸ್ಥಳದ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ.

ಅಲ್ಲದೆ ಪ್ರಸ್ತುತ ಡಾ ಡಿ ವೀರೇಂದ್ರ ಹೆಗ್ಗಡೆಯವರ ರಾಜ್ಯ ಸಬಾಸದಸ್ಯರ ಆಪ್ತ ಕಾರ್ಯದರ್ಶಿ ಯಾಗಿ ನೇಮಕಗೊಂಡಿದ್ದಾರೆ. ಇದೀಗ ಕೊಡಗು ವಿ ವಿ ಸಿಂಡಿಕೇಟ್ ಸದಸ್ಯರಾಗಿ ದೊಡ್ಡ ಗೌರವಕ್ಕೆ ಪಾತ್ರರಾಗಿದ್ದಾರೆ.

Related posts

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಟೈಲರ್ ಬಿ. ಕೃಷ್ಣ ಮಡಿವಾಳ ನಿಧನ

Suddi Udaya

ಉಜಿರೆ ಕೇರಿಮಾರ್ ನಿವಾಸಿ ಶ್ರೀಮತಿ ಚೆಲುವಮ್ಮ ನಿಧನ

Suddi Udaya

ಮಾಲಾಡಿ: ಶುದ್ಧ ಕುಡಿಯುವ ನೀರಿನ ಘಟಕ ಸರಿಯಾಗಿ ನಿರ್ವಹಣೆ ಮಾಡದೆ ಲಕ್ಷಾಂತರ ರೂ. ಬೆಲೆಬಾಳುವ ಮಿಷನರಿಗಳು ಕಳ್ಳರ ಪಾಲು : ಸಂಬಂಧಪಟ್ಟ ಇಲಾಖೆಯವರು ಗಮನಹರಿಸಿ ನೀರಿನ ಘಟಕವನ್ನು ಜನಸಾಮಾನ್ಯರಿಗೆ ಉಪಯೋಗ ಆಗುವ ರೀತಿಯಲ್ಲಿ ಮಾಡುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಯಕ್ಷಭಾರತಿ ಕನ್ಯಾಡಿಯಿಂದ ಕೇಶವ ಎಂ. ರವರಿಗೆ ಚಿಕಿತ್ಸಾ ನೆರವು

Suddi Udaya

ಕಕ್ಕಿಂಜೆ ಶಾಲಾ ಬಳಿಯ ಮರದಲ್ಲಿದ್ದ ಹೆಜ್ಜೇನು ಓಡಿಸುವ ಕಾರ್ಯಾಚರಣೆ ಪೂರ್ಣ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ರೂ.59 ಲಕ್ಷ ಲಾಭ, ಶೇ.15 ಡಿವಿಡೆಂಟ್ ಘೋಷಣೆ

Suddi Udaya
error: Content is protected !!