25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿ

ಕೊಡಗು ವಿ.ವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ ಎನ್ ಜನಾರ್ದನ್ ನೇಮಕ

ಬೆಳ್ತಂಗಡಿ: ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸೆನೆಟ್ ಸದಸ್ಯನಾಗಿ ಶ್ರಿ ಕ್ಷೇತ್ರ ಧರ್ಮಸ್ಥಳದ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ ಎನ್ ಜನಾರ್ದನ್ ನೇಮಕಗೊಂಡಿದ್ದಾರೆ.

ಇವರು ರುಡ್ ಸೆಟ್,ಮತ್ತು ಅರ್ ಸೆಟಿಗಳ ರಾಷ್ಟ್ರೀಯ ನಿರ್ದೇಶಕರಾಗಿದ್ದು ದೇಶದಾದ್ಯಂತ 560 ಕ್ಕು ಅಧಿಕ ಅರ್ ಸೆಟಿಗಳ ಸ್ಥಾಪನೆಗೆ ಅರ್ ಸೆಟಿ ಅದ್ಯಕ್ಷ ಡಾ ಡಿ ವೀರೇಂದ್ರ ಹೆಗ್ಗಡೆಯವರೊಂದಿಗೆ ಶ್ರಮಿಸಿದ್ದರು.ಅರ್ ಸೆಟಿಗಳು ಪ್ರತಿವರ್ಷ 4 ಲಕ್ಷಕ್ಕು ಅಧಿಕ ನಿರುದ್ಯೋಗಿ ಯುವ ಜನತೆಗೆ ತರಬೇತಿ ನೀಡುತ್ತಿದ್ದು ಇದರಲ್ಲಿ ಪ್ರತಿ ವರ್ಷ 3 ಲಕ್ಷಕ್ಕು ಅಧಿಕ ಮಂದಿ ಸ್ವ ಉದ್ಯೋಗಿಗಳಾಗಿ ಸ್ವಂತ ಜೀವನ ನಡೆಸುತ್ತಾರೆ. ಸಿಂಡಿಕೇಟ್ ಬ್ಯಾಂಕ್ ನಲ್ಲಿಸತತ 35 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಇವರು ಬಳಿಕ ಶ್ರಿ ಕ್ಷೇತ್ರ ಧರ್ಮಸ್ಥಳದ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ.

ಅಲ್ಲದೆ ಪ್ರಸ್ತುತ ಡಾ ಡಿ ವೀರೇಂದ್ರ ಹೆಗ್ಗಡೆಯವರ ರಾಜ್ಯ ಸಬಾಸದಸ್ಯರ ಆಪ್ತ ಕಾರ್ಯದರ್ಶಿ ಯಾಗಿ ನೇಮಕಗೊಂಡಿದ್ದಾರೆ. ಇದೀಗ ಕೊಡಗು ವಿ ವಿ ಸಿಂಡಿಕೇಟ್ ಸದಸ್ಯರಾಗಿ ದೊಡ್ಡ ಗೌರವಕ್ಕೆ ಪಾತ್ರರಾಗಿದ್ದಾರೆ.

Related posts

ಲಾಯಿಲ: ಸಂವಿಧಾನ ಜಾಗೃತಿ ಜಾಥ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ರವೀಂದ್ರ ಪೂಜಾರಿ ಬಾಂದೋಟ್ಟು ಆಯ್ಕೆ

Suddi Udaya

ತುರ್ತುಕರೆಗೆ ಸ್ಪಂದಿಸಿದ ಉಜಿರೆ ಬೆಳಾಲು ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ಪ್ರಕರಣ: ಸ್ಥಳ ಮಹಜರಿಗೆ ಬಂದ ಎಸ್.ಐ.ಟಿ ತಂಡ

Suddi Udaya

ಲಾಯಿಲ : ಪ್ರಸನ್ನ ಸಿ.ಬಿ.ಎಸ್.ಸಿ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ನಾವೂರು: ಮುರ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!