23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ : ಪಾದಯಾತ್ರಿಗಳಿಗೆ ಸನ್ಮಾನ

ಧರ್ಮಸ್ಥಳ: ಶಿವರಾತ್ರಿ ಎಂಬುದು ತಾಳ್ಮೆ. ಸಂಯಮ, ಜಾಗರಣೆ, ಉಪವಾಸ, ವ್ರತ – ನಿಯಮಗಳ ಪಾಲನೆಯೊಂದಿಗೆ ಪಂಚೆಂದ್ರಿಯಗಳ ನಿಯಂತ್ರಣ ಮಾಡಿ ಎಲ್ಲರಿಗೂ ಮಾನಸಿಕ ಪರಿವರ್ತನೆಯ ಶುಭರಾತ್ರಿಯಾಗಲಿ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹಾರೈಸಿದರು.

ಅವರು ಮಾ.7ರಂದು ಧರ್ಮಸ್ಥಳದಲ್ಲಿ ಕಳೆದ 45 ವರ್ಷಗಳಿಂದ ಶಿವರಾತ್ರಿ ಸಂದರ್ಭ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪ್ರತಿವರ್ಷ ಪಾದಯಾತ್ರೆಯನ್ನು ವ್ಯವಸ್ಥಿತವಾಗಿ, ಶಿಸ್ತುಬದ್ಧವಾಗಿ ಆಯೋಜಿಸುತ್ತಿರುವ ಹನುಮಂತಪ್ಪ ಸ್ವಾಮೀಜಿ ಮತ್ತು ಅವರ ಶಿಷ್ಯರನ್ನು ಗೌರವಿಸಿ ಅಭಿನಂದಿಸಿದರು.ಮುಂದೆ ನಿರ್ಧಿಷ್ಠ ಗುರಿ ಮತ್ತು ಹಿಂದೆ ಆದರ್ಶ ಗುರು ಇದ್ದಾಗ ಯಾವುದೇ ಕಾರ್ಯ ಯಶಸ್ವಿಯಾಗುತ್ತದೆ. ಪಾದಯಾತ್ರೆಯಲ್ಲಿ ಶ್ರದ್ಧಾ – ಭಕ್ತಿಯಿಂದ ಭಗವಂತನ ನಾಮಸ್ಮರಣೆಯೊಂದಿಗೆ ಕೆಟ್ಟ ಅಭ್ಯಾಸಗಳನ್ನು ಬಿಟ್ಟು ತ್ಯಾಗ ಮನೋಭಾವ ಮತ್ತು ಉತ್ತಮ ಸಂಸ್ಕಾರ ಮೈಗೂಡಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ಯುವಜನರು ಹೆಚ್ಚಾಗಿ ಪಾದಯಾತ್ರೆಯಲ್ಲಿ ಭಾಗವಹಿಸುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತ ಪಡಿಸಿದರು.

ಚಲನಚಿತ್ರ ನಿರ್ದೇಶಕ ಶಶಿಕುಮಾರ್, ನಾಗರಾಜ ರೆಡ್ಡಿ, ಕಮಲಾ. ಮೋಹನ ಗೌಡ, ಚಂದ್ರಪ್ಪ, ಹನುಂತರಾಯಪ್ಪ, ನರಸಿಂಹಪ್ಪ ಮತ್ತು ಮರಿಯಪ್ಪ ಅವರನ್ನು ಸನ್ಮಾನಿಸಲಾಯಿತು.ಪಾದಯಾತ್ರಿಗಳ ಕ್ಷೇತ್ರದರ್ಶನ ಸುಗಮವಾಗಲು ಸಹಕರಿಸಿದ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಅವರನ್ನು ಪಾದಯಾತ್ರಿಗಳ ಪರವಾಗಿ ಗೌರವಿಸಲಾಯಿತು.

Related posts

ಬೆಳ್ತಂಗಡಿ : ಕುಣಿತ ಭಜನಾ ತರಬೇತಿ ನೀಡುತ್ತಿರುವ ತರಬೇತಿದಾರರುಗಳ ಸಭೆ: ಪ್ರಥಮ ಬಾರಿಗೆ ಭಜನೆಯಲ್ಲಿ ನಿನ್ನೆ ಇಂದು ನಾಳೆಯ ಬಗ್ಗೆ ಗಂಭೀರ ಚರ್ಚೆ

Suddi Udaya

ಮುಂಡೂರು ಶ್ರೀ ನಾಗಂಬಿಕಾ ದೇವಸ್ಥಾನದಲ್ಲಿ ಸಂಭ್ರಮದ ನವರಾತ್ರಿ ಪೂಜಾ ಮಹೋತ್ಸವ

Suddi Udaya

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಅನಿಯಮಿತ ವಿದ್ಯುತ್ ಕಡಿತದ ಬಗ್ಗೆ ಬೆಳ್ತಂಗಡಿ ಮೆಸ್ಕಾಂ ಅಧಿಕಾರಿಗೆ ಮನವಿ

Suddi Udaya

ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ.

Suddi Udaya

ನಾರ್ಮ್ ರೌಂಡರ್ ರಾಬಿನ್ ಪಂದ್ಯಾವಳಿಯಲ್ಲಿ ಬೆಳ್ತಂಗಡಿಯ ಇಶಾ ಶರ್ಮಾ ರವರಿಗೆ ರಾಜ್ಯದ ಮೊದಲ ಮಹಿಳಾ ಗ್ರ್ಯಾಂಡ್ ಮಾಸ್ಟರ್ ಬಿರುದು

Suddi Udaya

ಕೊಡಗಿನ ಕುಶಾಲನಗರದಲ್ಲಿ ನಡೆದ ಸಂಪತ್ ಎಂಬವರ ಕೊಲೆ ಪ್ರಕರಣ: ಗುರುವಾಯನಕೆರೆಯ ಶಕ್ತಿನಗರದ ಪಿಜಿಯಲ್ಲಿದ್ದ ಆರೋಪಿಯನ್ನು ಬಂಧಿಸಿದ ಕೊಡಗು ಪೊಲೀಸರು

Suddi Udaya
error: Content is protected !!