July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಸಭೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಸಭೆಯು ಬಿಜೆಪಿ ಕಾರ್ಯಾಲಯದಲ್ಲಿ ಮಾ. 6 ರಂದು ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ ವಹಿಸಿದರು.

ಕಾರ್ಯಕ್ರಮವನ್ನು ಭಾರತೀಯ ಜನತಾ ಪಾರ್ಟಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲರವರು ದೀಪ ಪ್ರಜ್ವಲಿಸುವ ಮತ್ತು ಭಾರತ ಮಾತೆಗೆ ಪುಷ್ಪಾರ್ಚನೆ ಗೈದು ಮಾತನಾಡಿ ಯುವ ಮೋರ್ಚಾ ಪದಾಧಿಕಾರಿಗಳ ಜವಾಬ್ದಾರಿಗಳು ಹಾಗೂ ಪಕ್ಷಕ್ಕೆ ಯುವಕರ ಪಾತ್ರ ಏನು ಎಂಬುದರ ಬಗ್ಗೆ ವಿವರಿಸಿ ನೂತನ ತಂಡಕ್ಕೆ ಶುಭ ಕೋರಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕಿಶೋರ್ ಕುಮಾರ್ ಮತ್ತು ಯತೀಶ್ ಆರ್ವರ್ ನೂತನ ತಂಡಕ್ಕೆ ಶುಭ ಕೋರಿ ಕಾರ್ಯ ಚಟುವಟಿಕೆ ಬಗ್ಗೆ ಮಾಹಿತಿ ನೀಡಿದರು.
ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯರವರು ಮಾತನಾಡಿ ಸ್ವಾಮಿ ವಿವೇಕಾನಂದರ ಆದರ್ಶವನ್ನು ಪಾಲನೆ ಮಾಡಿ ಸದೃಢ ಸಮಾಜದಲ್ಲಿ ಯುವ ತಂಡ ಬಲಿಷ್ಠವಾಗಿರಲು ಪದಾಧಿಕಾರಿಗಳ ಸಹಕಾರವನ್ನು ಕೋರಿ ನಮೋ ಯುವ ಭಾರತ್ ಕಾರ್ಯಕ್ರಮದ ಬಗ್ಗೆ ವಿವರಿಸಿದರು.

ಪ್ರಧಾನ ಕಾರ್ಯದರ್ಶಿಗಳಾದ ಭರತ್ ರಾಜ್ ಕೃಷ್ಣಾಪುರ ಸ್ವಾಗತಿಸಿ, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್ ಧನ್ಯವಾದವಿತ್ತರು.

Related posts

ಉಜಿರೆ ಮಹಿಳಾ ಜ್ಞಾನವಿಕಾಸ ಕೇಂದ್ರದಲ್ಲಿ ಬೀದಿ ನಾಟಕ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಗೆಜ್ಜೆಗಿರಿ ಯಕ್ಷಗಾನ ಮೇಳದ ಪ್ರಧಾನ ಸಂಚಾಲಕರಾಗಿ ಪ್ರಮಲ್ ಕುಮಾರ್ ಕಾರ್ಕಳ

Suddi Udaya

ಅರಸಿನಮಕ್ಕಿ ಜನಸ್ಪಂದನ ಸಭೆ: ಕೊಕ್ಕಡದಲ್ಲಿ ಗರ್ಭಿಣಿಯರಿಗೆ ಸ್ಕ್ಯಾನಿಂಗ್ ಕೇಂದ್ರ ನಿರ್ಮಾಣಕ್ಕೆ ಬೇಡಿಕೆ

Suddi Udaya

ಕನ್ಯಾಡಿ 2 ಸ.ಉ.ಹಿ. ಪ್ರಾ. ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ ಸಮಾರಂಭ

Suddi Udaya

ಲಾಯಿಲ ಪ್ರಸನ್ನ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya
error: Content is protected !!