22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮಾ.9: ಬೆಳ್ತಂಗಡಿ ಪಂಚ ಗ್ಯಾರಂಟಿ ಸಮಾವೇಶದಲ್ಲಿ ಭಾಗವಹಿಸಲು ಉಚಿತ ಬಸ್ಸು ವ್ಯವಸ್ಥೆ

ಬೆಳ್ತಂಗಡಿ: ಮಾರ್ಚ್ 9ರಂದು ಶನಿವಾರ ಪೂರ್ವಾಹ್ನ ಬೆಳ್ತಂಗಡಿಯ ಕಿನ್ಯಮ್ಮ ಯಾನೆ ಗುಣವತಿಯಮ್ಮ ಸಭಾಂಗಣದಲ್ಲಿ ನಡೆಯಲಿರುವ ಸರ್ಕಾರದ ಪಂಚ ಗ್ಯಾರಂಟಿಗಳ ಫಲಾನುಭವಿಗಳ ಸಮಾವೇಶಕ್ಕೆ ಫಲಾನುಭವಿಗಳಿಗೆ ಉಚಿತವಾಗಿ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ.

ಪ್ರತೀ ಗ್ರಾಮ ಪಂಚಾಯತಿಗೆ ಬಸ್ಸುಗಳನ್ನು ಒದಗಿಸಲಾಗಿದ್ದು ಮಾರ್ಗಸೂಚಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಅಂದು ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಗ್ರಾಮ ಪಂಚಾಯಿತಿಗಳಿಂದ ಬಸ್ಸುಗಳು ಹೊರಡಲಿದ್ದು ಸಮಾವೇಶ ಮುಗಿದ ಬಳಿಕ ಫಲಾನುಭವಿಗಳನ್ನು ವಾಪಾಸು ಕರೆದುಕೊಂಡು ಹೋಗುವ ವ್ಯವಸ್ಥೆ ಮಾಡಲಾಗಿದೆ.

ಹೆಚ್ಚಿನ ವಿವರಗಳಿಗೆ ಆಯಾ ಗ್ರಾಮ ಪಂಚಾಯಿತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ/ಕಾರ್ಯದರ್ಶಿ ಅಥವಾ ಅಂಗನವಾಡಿ ಕಾರ್ಯಕರ್ತೆಯವರನ್ನು ಸಂಪರ್ಕಿಸಬಹುದೆಂದು ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ಎಸ್.ತಿಳಿಸಿದ್ದಾರೆ.

Related posts

ಕಬಡ್ಡಿ ಪಂದ್ಯಾಟ: ಬೆಳ್ತಂಗಡಿ ಸ. ಪ್ರೌ. ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

‘ಹೆಚ್ಚುವರಿ ನೀರಿನ ಶುಲ್ಕದಿಂದಾಗಿ ಜನಸಾಮಾನ್ಯರಿಗೆ ಹೊರೆ’ : ನಾವೂರು ಎಸ್ ಡಿ ಪಿ ಐ ನೇತೃತ್ವದಲ್ಲಿ ಮನವಿ

Suddi Udaya

ಉಜಿರೆ: ಎಸ್ ಡಿ ಎಮ್ ಸಂಸ್ಥೆಗಳ ಅಂತರ್ ಪ್ರೌಢಶಾಲಾ ಬಾಲಕ -ಬಾಲಕಿಯರ ಕ್ರೀಡಾಕೂಟ

Suddi Udaya

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ: ಧ್ವಜಾರೋಹಣ

Suddi Udaya

ಧರ್ಮಸ್ಥಳ ಪಾಂಗಳ ಕ್ರಾಸ್ ನಲ್ಲಿ ಗುಂಪುಗಳ ನಡುವೆ ಅಹಿತಕರ ಘಟನೆ: ಧರ್ಮಸ್ಥಳ ಠಾಣೆಯಲ್ಲಿ 4 ಪ್ರಕರಣ ಹಾಗೂ ಬೆಳ್ತಂಗಡಿ ಠಾಣೆಯಲ್ಲಿ 3 ಪ್ರಕರಣ ದಾಖಲು

Suddi Udaya

ಜಲಪಾತ ವೀಕ್ಷಣೆ ಹಾಗೂ ಗಡಾಯಿಕಲ್ಲು ಚಾರಣಕ್ಕೆ ನಿರ್ಬಂಧ

Suddi Udaya
error: Content is protected !!