September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ನ ಕಂಪ್ಯೂಟರ್ ಸೈನ್ಸ್ ವಿಭಾಗದ ವತಿಯಿಂದ ಟೆಕ್ ವ್ಯುಹ್ ಕಾರ್ಯಕ್ರಮ

ಉಜಿರೆ: ಎಸ್ ಡಿ ಎಮ್ ಪಾಲಿಟೆಕ್ನಿಕ್ ನ ಕಂಪ್ಯೂಟರ್ ಸೈನ್ಸ್ ವಿಭಾಗದ ವತಿಯಿಂದ ಟೆಕ್ ವ್ಯುಹ್ (Tech Vyuh) ಕಾರ್ಯಕ್ರಮವು ಮಾ.6ರಂದು ಆಯೋಜಿಸಲಾಗಿತ್ತು .

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಡಾ. ಹೆಚ್ ಮನೋಜ್ ಟಿ ಗಡಿಯಾರ್ ಅವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಮೂರು ತತ್ವಗಳಾದ ನಿರ್ದೇಶನ , ಪ್ರಯತ್ನ ಮತ್ತು ಶಿಸ್ತನ್ನು ಅನುಸರಿಸುವ ಮೂಲಕ ಜೀವನದಲ್ಲಿ ಹೇಗೆ ಯಶಸ್ವಿಯಾಗಬಹುದು ಎಂಬುದರ ಕುರಿತು ಮಾತನಾಡಿದರು.

ಕಾರ್ಯಕ್ರಮದ ಗೌರವ ಅತಿಥಿಯಾದ ಕಾಲೇಜಿನ ಹಳೆ ವಿದ್ಯಾರ್ಥಿ ಶಶಿಕಾಂತ್ ಮಾತನಾಡಿ ವಿದ್ಯಾರ್ಥಿಗಳಿಗೆ ಉನ್ನತ ಅಧ್ಯಯನವನ್ನು ಮುಂದುವರಿಸಿ ಹಾಗೂ ಭವಿಷ್ಯಕ್ಕಾಗಿ ಸೂಕ್ತವಾದ ಶೈಕ್ಷಣಿಕ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಹೇಳಿದರು.


ಕಾರ್ಯಕ್ರಮದಲ್ಲಿ ಎಸ್ ಡಿ ಎಂ ನ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಸೋಮಶೇಖರ್ ಅತಿಥಿಯಾಗಿ ಆಗಮಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್, ವಿಭಾಗದ ಮುಖ್ಯಸ್ಥರಾದ ದಿನೇಶ್ ಹಾಗೂ ಕಾಲೇಜಿನ ವ್ಯವಸ್ಥಾಪಕರಾದ ಚಂದ್ರನಾಥ್ ಜೈನ್ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಕಾರ್ಯಕ್ರಮವನ್ನು ವಿದ್ಯಾರ್ಥಿಯಾದ ಹನಿಶ್ ಸ್ವಾಗತಿಸಿ, ಸ್ಫೂರ್ತಿಯವರು ಧನ್ಯವಾದವಿತ್ತರು ಹಾಗೂ ವಿದ್ಯಾರ್ಥಿನಿ ಪುನೀತ ಕಾರ್ಯಕ್ರಮ ನಿರೂಪಿಸಿದರು.

Related posts

ಸಂದೀಪ್ ಸುಂದರ್ ನೀರಲ್ಕೆರವರಿಂದ ಬಡಗಕಾರಂದೂರು ಶಾಲೆಗೆ ಕಂಪ್ಯೂಟರ್ ಟೇಬಲ್ ಗಳ ಕೊಡುಗೆ

Suddi Udaya

ಹತ್ಯಡ್ಕ: ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಮಹೋತ್ಸವ: ಮಹಾಪೂಜೆ, ದರ್ಶನ ಬಲಿ ನಂತರ ಬಟ್ಟಲು ಕಾಣಿಕೆ

Suddi Udaya

ದ.ಕ. ಜಿಲ್ಲಾ ನೂತನ ಎಸ್ಪಿಯಾಗಿ ಡಾ. ಅರುಣ್ ಕೆ. ಅಧಿಕಾರ ಸ್ವೀಕಾರ

Suddi Udaya

ಪುದುವೆಟ್ಟು: ಮಿಯ್ಯಾರು ಶ್ರೀ ವನದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಕಣಿಯೂರು ವಲಯದ ನೂತನ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ಪುರುಷರ ನೆಟ್ ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟ: ಮಂಗಳೂರು ವಿಶ್ವವಿದ್ಯಾನಿಲಯ ತಂಡ ಚಾಂಪಿಯನ್

Suddi Udaya
error: Content is protected !!