23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ

ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಶ್ರೀ ಮಂಜುಳೇಶ ದೇವರ ಸನ್ನಿಧಿಯಲ್ಲಿ  ಮಹಾ ಶಿವರಾತ್ರಿ ಉತ್ಸವವು  ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯರ ನೇತೃತ್ವದಲ್ಲಿ ಅರ್ಚಕ ವೇದಮೂರ್ತಿ ಶ್ರೀನಿವಾಸ  ಹೊಳ್ಳರ ಧಾರ್ಮಿಕ  ವಿಧಿಗಳೊಂದಿಗೆ  ಮಾ 8 ರಂದು  ವಿವಿಧ ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ  ನಡೆಯಿತು.

ಪೂರ್ವಾಹ್ನ  ಶ್ರೀ ಮಂಜುಳೇಶ ದೇವರ ಸನ್ನಿಧಿಯಲ್ಲಿ ವೈದಿಕರಿಂದ ಸಾಮೂಹಿಕ ರುದ್ರ ಪಾರಾಯಣ,ಶ್ರೀ ಮಂಜುಳೇಶ ದೇವರಿಗೆ ಶತರುದ್ರಾಭಿಷೇಕ ಹಾಗು ಮದ್ಯಾಹ್ನ ಮಹಾಪೂಜೆ ನಡೆಯಿತು . ಶಾಲಾ, ಕಾಲೇಜು ವಿದ್ಯಾರ್ಥಿಗಳು,ಊರ ಪರಊರ ಭಕ್ತಾದಿಗಳು ಮತ್ತು ಧರ್ಮಸ್ಥಳ ಪಾದಯಾತ್ರಿಗಳು  ಅಧಿಕ ಸಂಖ್ಯೆಯಲ್ಲಿ  ಬಂದು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.   

ಸಂಜೆ   ದೇವಸ್ಥಾನ ಮುಂಭಾಗದ ವೇದಿಕೆಯಲ್ಲಿ ಉಜಿರೆಯ ಶ್ರೀ ಜನಾರ್ದನ ಸ್ವಾಮಿ ಭಗಿನಿ ಭಜನಾ ಮಂಡಳಿ,ಶ್ರೀ  ಮಹಮ್ಮಾಯಿ ಭಜನಾ ಮಂಡಳಿ,ಶ್ರೀ ಛತ್ರಪತಿ ಶಿವಾಜಿ ಕುಣಿತ ಭಜನಾ ಮಂಡಳಿ,ಶ್ರೀ ಮಾತೃ ಮಂಡಳಿ,ಶ್ರೀ ಕೃಷ್ಣ ಭಜನಾ ಮಂಡಳಿ ಮುಂಡತ್ತೋಡಿ, ಮಾಚಾರು ಶ್ರೀ ಲಕ್ಷ್ಮೀಜನಾರ್ದನ ಭಜನಾ ಮಂಡಳಿ,ವಿನಾಯಕನಗರ ಶ್ರೀ ಸಿದ್ಧಿವಿನಾಯಕ ಭಜನಾ ಮಂಡಳಿ,ಉಜಿರೆಯ ಶ್ರೀ  ಮಾರಿಕಾಂಬಾ ಭಜನಾ ಮಂಡಳಿ ಹಾಗು ಬೆಳ್ತಂಗಡಿ ಶ್ರೀ ವಿವೇಕ ಜಾಗೃತಿ ಬಳಗದವರಿಂದ ನಿರಂತರ ಭಜನಾ ಕಾರ್ಯಕ್ರಮ  ನಡೆಯಲಿದೆ.                                                           

Related posts

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಹೇವ

Suddi Udaya

ಸಮೀಕ್ಷೆ ಮುಗಿಯದ ಹಿನ್ನೆಲೆ ಅ. 18ರವರೆಗೆ ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಿಗೆ ರಜೆ : ಸಿ.ಎಂ. ಸಿದ್ದರಾಮಯ್ಯ ಆದೇಶ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗೀತಾ ಗಾಯನ ಸ್ಪರ್ಧೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವಿವಿಧ ಪಕ್ಷಗಳು ಪಡೆದುಕೊಂಡ ಬೂತುವಾರು ಮತಗಳ ವಿವರ

Suddi Udaya

ಎ.19&20: ಬೆಳ್ತಂಗಡಿ ಶೃಂಗಾರ್ ಜುವೆಲ್ಲರ್ಸ್ ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ವಿಶೇಷ ಕೊಡುಗೆ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya
error: Content is protected !!