ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿ

ಧರ್ಮಸ್ಥಳದಲ್ಲಿ ಅಹೋರಾತ್ರಿ ಸಾಮೂಹಿಕ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ

ಧರ್ಮಸ್ಥಳ: ನೀನೊಲಿದರೆ ಕೊರಡು ಕೊನರುವುದು, ವಿಷವೂ ಅಮೃತವಾಗುವುದು ಎಂಬಂತೆ ಪರಿಶುದ್ಧ ಮನದಿಂದ ಶಿವರಾತ್ರಿಯ ಶುಭರಾತ್ರಿಯಲ್ಲಿ ಶಿವನಾಮ ಸ್ಮರಣೆ ಮಾಡಿದರೆ ಸಕಲದೋಷಗಳ ಪರಿಹಾರವಾಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಅಹೋರಾತ್ರಿ ಶಿವನಾಮ ಪಂಚಾಕ್ಷರಿ ಪಠಣಕ್ಕೆ ಚಾಲನೆ ನೀಡಿ ಮಾತನಾಡಿದರು.ನಮ್ಮ ಎಲ್ಲಾ ಮನೋವಿಕಾರಗಳನ್ನು ದೂರಮಾಡಿ ಸಕಲ ಜೀವಿಗಳಿಗೆ ಲೇಸನ್ನೆ ಬಯಸಿ ಉನ್ನತ ಸಾಧನೆ ಮಾಡಬೇಕು. ಶಿವನ ಜೋತೆಗೆ ಶಿವಭಕ್ತರ ಸೇವೆ ಮಾಡಿದರೂ ಪುಣ್ಯ ಬರುತ್ತದೆ ಎಂದು ಅವರು ಹೇಳಿದರು.

ಮಹಿಳೆಯರನ್ನು ಗೌರವದಿಂದ ಕಾಣಬೇಕು. ಅವರು ನೊಂದು ಕಣ್ಣೀರು ಹಾಕಿದರೂ ಅದು ಶಾಪವಾಗಿ ಪರಿಣಮಿಸುತ್ತದೆ. ಹಿತ-ಮಿತ, ಸುಮಧುರ ಮಾತುಗಳನ್ನಾಡಬೇಕು. ಮಾತೇ ಮಾಣಿಕ್ಯ. ಮಾತು ಬಿಡ ಮಂಜುನಾಥ ಎಂಬ ಮಾತನ್ನು ಎಲ್ಲರೂ ಸದಾ ನೆನಪಿಟ್ಟುಕೊಳ್ಳಬೇಕು ಎಂದು ಅವರು ಕಿವಿಮಾತು ಹೇಳಿದರು.ಮನ, ವಚನ, ಕಾಯದಿಂದ ಪರಿಶುದ್ಧ, ದೃಢಸಂಕಲ್ಪ ಮತ್ತು ಪರಿಶುದ್ಧ ಭಕ್ತಿಯಿಂದ ದೇವರ ಅನುಗ್ರಹಕ್ಕೆ ಪಾತ್ರರಾಗಿ ಉನ್ನತ ಸಾಧನೆ ಮಾಡಬಹುದು. ಶಿವರಾತ್ರಿ ಒಂದೇ ರಾತ್ರಿಗೆ ಸೀಮಿತವಾಗದೆ ಪ್ರತಿ ರಾತ್ರಿಯೂ ಶಿವರಾತ್ರಿಯಾಗಿ, ಶುಭರಾತ್ರಿಯಾಗಿ ಎಲ್ಲೆಲ್ಲೂ ಸುಖ-ಶಾಂತಿ, ನೆಮ್ಮದಿ ನೆಲೆಸಲೆಂದು ಅವರು ಹಾರೈಸಿದರು.

ಹೇಮಾವತಿ ವೀ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್‌ಮ, ಸುಪ್ರಿಯಾ ಹರ್ಷೇಂದ್ರ ಕುಮಾರ್ ಪಾದಯಾತ್ರೆಯ ರೂವಾರಿ ಹನುಮಂತಪ್ಪ ಗುರೂಜಿ, ಮರಿಯಪ್ಪ ಉಪಸ್ಥಿತರಿದ್ದರು.

ಡಾ. ಪವನ್ ಸಂಪಾದಿಸಿದ “ವೈದ್ಯಾಮೃತ” ಕೃತಿಯನ್ನು ಬಿಡುಗಡೆಗೊಳಿಸಲಾಯಿತು.ಬೆಂಗಳೂರಿನ ಭಕ್ತರಿಂದ ಸೇವೆ: ಶಿವರಾತ್ರಿ ಪ್ರಯುಕ್ತ ಬೆಂಗಳೂರಿನ ಹಲವಾರು ಸಂಘಟನೆಗಳು ಸೇರಿ ಶುಕ್ರವಾರ ರಾತ್ರಿ ಭಕ್ತರಿಗೆ ಉಪಾಹಾರ ನೀಡಿದರು.

Related posts

ಮದ್ದಡ್ಕ: ಹೆದ್ದಾರಿಯ ಕೆಲಸ ಕಾಮಗಾರಿಯಲ್ಲಿ ಮಾರ್ಗವನ್ನು ಎತ್ತರವಾಗಿಸಿದ್ದರಿಂದ ಪರಿಸರದ ಜನರಿಗೆ ತೊoದರೆ: ಮಾರ್ಗವನ್ನು ತಗ್ಗಿಸಿ ಕಾಮಗಾರಿ ನಡೆಸುವoತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರಿಗೆ ಮನವಿ

Suddi Udaya

ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆ ದುರಸ್ತಿ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ಆಗಬೇಕಾಗಿರುವ ಬದಲಾವಣೆ ಬಗ್ಗೆ ಲೋಕೋಪಯೋಗಿ ಸಚಿವರಿಗೆ ಮನವಿ ಸಲ್ಲಿಕೆ

Suddi Udaya

ನಾಳ: ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಟೋಟ ಸ್ಪರ್ಧೆ

Suddi Udaya

ಸಿಇಟಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಏಳನೇ ರ‍್ಯಾಂಕ್  ಪಡೆದ ಚಿನ್ಮಯ್ ರವರಿಗೆ ಉಜಿರೆ ವಲಯ ಹಾಗೂ ಉಪ್ಪಿನಂಗಡಿ ಮಂಡಲದ ವತಿಯಿಂದ ಗೌರವ

Suddi Udaya

ಬಂಗಾಡಿ ಪರಿಸರದಲ್ಲಿ ನೆಟ್‌ವರ್ಕ್ ಸಮಸ್ಯೆ: ಬ್ಯಾಂಕ್ ವ್ಯವಹಾರಕ್ಕಾಗಿ ಗ್ರಾಹಕರ ಪರದಾಟ

Suddi Udaya

ಕನ್ಯಾಡಿ: ಪ್ರಗತಿಪರ ಕೃಷಿಕ ಬೊಲ್ಲೊಟ್ಟು ಬಾಬು ಶೆಟ್ಟಿ ನಿಧನ

Suddi Udaya
error: Content is protected !!