25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿ

ಧರ್ಮಸ್ಥಳದಲ್ಲಿ ಅಹೋರಾತ್ರಿ ಸಾಮೂಹಿಕ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ

ಧರ್ಮಸ್ಥಳ: ನೀನೊಲಿದರೆ ಕೊರಡು ಕೊನರುವುದು, ವಿಷವೂ ಅಮೃತವಾಗುವುದು ಎಂಬಂತೆ ಪರಿಶುದ್ಧ ಮನದಿಂದ ಶಿವರಾತ್ರಿಯ ಶುಭರಾತ್ರಿಯಲ್ಲಿ ಶಿವನಾಮ ಸ್ಮರಣೆ ಮಾಡಿದರೆ ಸಕಲದೋಷಗಳ ಪರಿಹಾರವಾಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಅಹೋರಾತ್ರಿ ಶಿವನಾಮ ಪಂಚಾಕ್ಷರಿ ಪಠಣಕ್ಕೆ ಚಾಲನೆ ನೀಡಿ ಮಾತನಾಡಿದರು.ನಮ್ಮ ಎಲ್ಲಾ ಮನೋವಿಕಾರಗಳನ್ನು ದೂರಮಾಡಿ ಸಕಲ ಜೀವಿಗಳಿಗೆ ಲೇಸನ್ನೆ ಬಯಸಿ ಉನ್ನತ ಸಾಧನೆ ಮಾಡಬೇಕು. ಶಿವನ ಜೋತೆಗೆ ಶಿವಭಕ್ತರ ಸೇವೆ ಮಾಡಿದರೂ ಪುಣ್ಯ ಬರುತ್ತದೆ ಎಂದು ಅವರು ಹೇಳಿದರು.

ಮಹಿಳೆಯರನ್ನು ಗೌರವದಿಂದ ಕಾಣಬೇಕು. ಅವರು ನೊಂದು ಕಣ್ಣೀರು ಹಾಕಿದರೂ ಅದು ಶಾಪವಾಗಿ ಪರಿಣಮಿಸುತ್ತದೆ. ಹಿತ-ಮಿತ, ಸುಮಧುರ ಮಾತುಗಳನ್ನಾಡಬೇಕು. ಮಾತೇ ಮಾಣಿಕ್ಯ. ಮಾತು ಬಿಡ ಮಂಜುನಾಥ ಎಂಬ ಮಾತನ್ನು ಎಲ್ಲರೂ ಸದಾ ನೆನಪಿಟ್ಟುಕೊಳ್ಳಬೇಕು ಎಂದು ಅವರು ಕಿವಿಮಾತು ಹೇಳಿದರು.ಮನ, ವಚನ, ಕಾಯದಿಂದ ಪರಿಶುದ್ಧ, ದೃಢಸಂಕಲ್ಪ ಮತ್ತು ಪರಿಶುದ್ಧ ಭಕ್ತಿಯಿಂದ ದೇವರ ಅನುಗ್ರಹಕ್ಕೆ ಪಾತ್ರರಾಗಿ ಉನ್ನತ ಸಾಧನೆ ಮಾಡಬಹುದು. ಶಿವರಾತ್ರಿ ಒಂದೇ ರಾತ್ರಿಗೆ ಸೀಮಿತವಾಗದೆ ಪ್ರತಿ ರಾತ್ರಿಯೂ ಶಿವರಾತ್ರಿಯಾಗಿ, ಶುಭರಾತ್ರಿಯಾಗಿ ಎಲ್ಲೆಲ್ಲೂ ಸುಖ-ಶಾಂತಿ, ನೆಮ್ಮದಿ ನೆಲೆಸಲೆಂದು ಅವರು ಹಾರೈಸಿದರು.

ಹೇಮಾವತಿ ವೀ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್‌ಮ, ಸುಪ್ರಿಯಾ ಹರ್ಷೇಂದ್ರ ಕುಮಾರ್ ಪಾದಯಾತ್ರೆಯ ರೂವಾರಿ ಹನುಮಂತಪ್ಪ ಗುರೂಜಿ, ಮರಿಯಪ್ಪ ಉಪಸ್ಥಿತರಿದ್ದರು.

ಡಾ. ಪವನ್ ಸಂಪಾದಿಸಿದ “ವೈದ್ಯಾಮೃತ” ಕೃತಿಯನ್ನು ಬಿಡುಗಡೆಗೊಳಿಸಲಾಯಿತು.ಬೆಂಗಳೂರಿನ ಭಕ್ತರಿಂದ ಸೇವೆ: ಶಿವರಾತ್ರಿ ಪ್ರಯುಕ್ತ ಬೆಂಗಳೂರಿನ ಹಲವಾರು ಸಂಘಟನೆಗಳು ಸೇರಿ ಶುಕ್ರವಾರ ರಾತ್ರಿ ಭಕ್ತರಿಗೆ ಉಪಾಹಾರ ನೀಡಿದರು.

Related posts

ಸೋಮಂತಡ್ಕ: ನಿಯಂತ್ರಣ ತಪ್ಪಿ ಚರಂಡಿಗೆ ಗುದ್ದಿದ ಕೆಎಸ್ಆರ್ ಟಿಸಿ ಬಸ್

Suddi Udaya

ಪದ್ಮನಾಭ ಮಾಣಿಂಜ ನಿಧನಕ್ಕೆ ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸಂತಾಪ

Suddi Udaya

ಡಾಮರೀಕರಣ ಭಾಗ್ಯಕ್ಕಾಗಿ ಕಾಯುತ್ತಿರುವ ಬಂಗೇರಕಟ್ಟೆ- ನೆತ್ತರ ರಸ್ತೆ

Suddi Udaya

ಕೋಟದಲ್ಲಿ ಗ್ರಾ.ಪಂ. ಸದಸ್ಯರಿಗೆ ಕ್ರೀಡಾಕೂಟ ಮಚ್ಚಿನ ಗ್ರಾ.ಪಂ. ಗೆ ದ್ವಿತೀಯ ಪ್ರಶಸ್ತಿ

Suddi Udaya

ಉಜಿರೆ : ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ‘ಕೌಶಲ್ಯಾಭಿವೃದ್ಧಿ ಕಾರ್ಯಾಗಾರ’

Suddi Udaya

ಲಾಯಿಲ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಗಣೇಶ್ ಕನ್ನಾಜೆ ಆಯ್ಕೆ

Suddi Udaya
error: Content is protected !!