23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಉತ್ಸವ: ವಿಶೇಷ ಪೂಜೆ

ಮಿತ್ತಬಾಗಿಲು: ಇಲ್ಲಿಯ ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಉತ್ಸವವು ಶ್ರೀ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ವೇದಮೂರ್ತಿ ಪಾವಂಜೆ ವಾಗೀಶ ಶಾಸ್ತ್ರಿಯವರ ನೇತೃತ್ವದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಜರುಗಿತು.

ಬೆಳಿಗ್ಗೆ ಪಂಚವಿಂಶತಿ ಕಲಶ ಸ್ಥಾಪನೆ, ಗಣಹೋಮ, ಅಧಿವಾಸ ಹೋಮ, ತೋರಣ ಮೂಹೂರ್ತ, ರುದ್ರಾಭಿಷೇಕ, ಪಂಚವಿಂಶತಿ ಕಲಶಾಭಿಷೇಕ, ಮಹಾಪೂಜೆ, ಉತ್ಸವ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಸಾಂಸ್ಕೃತಿಕ ಕಾರ್ಯಕ್ರಮದ ವಿದ್ಯುಕ್ತ ಉದ್ಘಾಟನೆ, ಕುಣಿತ ಭಜನೆ, ನಡೆಯಿತು.

ಈ ಸಂದರ್ಭದಲ್ಲಿ ಉತ್ಸವ ಸಮಿತಿ ಅಧ್ಯಕ್ಷ ಅಶೋಕ ಗೌಡ, ಕಾರ್ಯದರ್ಶಿ ರಾಜೇಶ್ ಎನ್.ಆರ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಧನಂಜಯ ರಾವ್ ವಕೀಲರು, ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರು, ಉತ್ಸವ ಸಮಿತಿಯ ಗೌರವಾಧ್ಯಕ್ಷರು, ಪದಾಧಿಕಾರಿಗಳು, ಅರ್ಚಕ ವೃಂದ, ವಿಲಯದವರು, ಊರವರು ಉಪಸ್ಥಿತರಿದ್ದರು.

ಸಂಜೆ 4.45 ಕ್ಕೆ ಏಕಾದಶ ರುದ್ರಾಭಿಷೇಕ, ನಿತ್ಯಪೂಜೆ, ದೈವಗಳಿಗೆ ಪರ್ವ, ಭಂಡಾರ ಇಳಿಸಿಕೊಡುವುದು, ರಾತ್ರಿ ಯಕ್ಷನೃತ್ಯ ಗಾನ, ವೈಭವ, , ಮಹಾರಂಗಪೂಜೆ, ಬಲಿ, ಕಟ್ಟೆ ಪೂಜೆ, ಮಂತ್ರಾಕ್ಷತೆ, ಪಿಲಿಚಾಮುಂಡಿ, ಕಲ್ಕುಡ, ಕಲ್ಲುರ್ಟಿ ದೈವಗಳಿಗೆ ನೇಮೋತ್ಸವ, ರಾತ್ರಿ ಗಮಟೆ 1.30 ರಿಂದ ಶಿವಜಾಗರಣೆ ಅಂಗವಾಗಿ ಗ್ರಾಮೀಣ ಆಟವಾದ ತೆಂಗಿನಕಾಯಿ ಕುಟ್ಟುವ ಸ್ಪರ್ಧೆ ನಡೆಯಲಿದೆ.

Related posts

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಗುರುವಾಯನಕೆರೆ ಸೇವಾ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಉಜಿರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕ ಎಮ್. ಗೋಪಾಲಕೃಷ್ಣ ಶೆಟ್ಟಿ (ಎಂ.ಜಿ ಶೆಟ್ಟಿ ) ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ

Suddi Udaya

ಆ. 10 ರವರೆಗೆ ಇ-ಖಾತಾ ಅಭಿಯಾನದ ವಿಸ್ತರಣೆ

Suddi Udaya

ಕೆ. ಪಿ. ಸಿ. ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಸ್ಕೌಟ್ ಗೈಡ್, ಕಬ್ಸ್, ಬುಲ್ ಬುಲ್ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya
error: Content is protected !!