September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಉತ್ಸವ: ವಿಶೇಷ ಪೂಜೆ

ಮಿತ್ತಬಾಗಿಲು: ಇಲ್ಲಿಯ ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಉತ್ಸವವು ಶ್ರೀ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ವೇದಮೂರ್ತಿ ಪಾವಂಜೆ ವಾಗೀಶ ಶಾಸ್ತ್ರಿಯವರ ನೇತೃತ್ವದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಜರುಗಿತು.

ಬೆಳಿಗ್ಗೆ ಪಂಚವಿಂಶತಿ ಕಲಶ ಸ್ಥಾಪನೆ, ಗಣಹೋಮ, ಅಧಿವಾಸ ಹೋಮ, ತೋರಣ ಮೂಹೂರ್ತ, ರುದ್ರಾಭಿಷೇಕ, ಪಂಚವಿಂಶತಿ ಕಲಶಾಭಿಷೇಕ, ಮಹಾಪೂಜೆ, ಉತ್ಸವ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಸಾಂಸ್ಕೃತಿಕ ಕಾರ್ಯಕ್ರಮದ ವಿದ್ಯುಕ್ತ ಉದ್ಘಾಟನೆ, ಕುಣಿತ ಭಜನೆ, ನಡೆಯಿತು.

ಈ ಸಂದರ್ಭದಲ್ಲಿ ಉತ್ಸವ ಸಮಿತಿ ಅಧ್ಯಕ್ಷ ಅಶೋಕ ಗೌಡ, ಕಾರ್ಯದರ್ಶಿ ರಾಜೇಶ್ ಎನ್.ಆರ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಧನಂಜಯ ರಾವ್ ವಕೀಲರು, ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರು, ಉತ್ಸವ ಸಮಿತಿಯ ಗೌರವಾಧ್ಯಕ್ಷರು, ಪದಾಧಿಕಾರಿಗಳು, ಅರ್ಚಕ ವೃಂದ, ವಿಲಯದವರು, ಊರವರು ಉಪಸ್ಥಿತರಿದ್ದರು.

ಸಂಜೆ 4.45 ಕ್ಕೆ ಏಕಾದಶ ರುದ್ರಾಭಿಷೇಕ, ನಿತ್ಯಪೂಜೆ, ದೈವಗಳಿಗೆ ಪರ್ವ, ಭಂಡಾರ ಇಳಿಸಿಕೊಡುವುದು, ರಾತ್ರಿ ಯಕ್ಷನೃತ್ಯ ಗಾನ, ವೈಭವ, , ಮಹಾರಂಗಪೂಜೆ, ಬಲಿ, ಕಟ್ಟೆ ಪೂಜೆ, ಮಂತ್ರಾಕ್ಷತೆ, ಪಿಲಿಚಾಮುಂಡಿ, ಕಲ್ಕುಡ, ಕಲ್ಲುರ್ಟಿ ದೈವಗಳಿಗೆ ನೇಮೋತ್ಸವ, ರಾತ್ರಿ ಗಮಟೆ 1.30 ರಿಂದ ಶಿವಜಾಗರಣೆ ಅಂಗವಾಗಿ ಗ್ರಾಮೀಣ ಆಟವಾದ ತೆಂಗಿನಕಾಯಿ ಕುಟ್ಟುವ ಸ್ಪರ್ಧೆ ನಡೆಯಲಿದೆ.

Related posts

ಬೆಳ್ತಂಗಡಿ: ಹೋಲಿ ರಿಡೀಮರ್ ಆಂ.ಮಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಉಜಿರೆಯಲ್ಲಿ ವಿಶ್ವಕರ್ಮ ಬ್ಯಾಂಕ್‌ನಿಂದ ಸ್ವಚ್ಛತಾ ಅಭಿಯಾನ

Suddi Udaya

ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ: ಕನ್ಯಾಡಿಯ ಕೆ.ವಿ ಸ್ಟೋರ್ಸ್ ನಲ್ಲಿ ಸಿಹಿ ವಿತರಣೆ

Suddi Udaya

ಮಂಜೊಟ್ಟಿ : ಜಾಮಿಯಾ ಮಸ್ಜಿದ್ ಜಮಲಾಬಾದ್ ಇದರ ಅಧ್ಯಕ್ಷರಾಗಿ ಹಾಜಿ ಸಯ್ಯದ್ ಹಬೀಬ್ ಸಾಹೇಬ್, ಕಾರ್ಯದರ್ಶಿಯಾಗಿ ಅಬ್ದುಲ್ ಗಫೂರ್ ಆಯ್ಕೆ

Suddi Udaya

ನಡ: ಸ್ಟಾರ್ ಲೈನ್ ಆಂ.ಮಾ. ಶಾಲೆಯಲ್ಲಿ “ ಶಾಲಾ ವಿದ್ಯಾರ್ಥಿ ಸಂಘದ ಪ್ರತಿಜ್ಞಾ ವಿಧಿ ಸ್ವೀಕಾರ” ಸಮಾರಂಭ

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಮಲವಂತಿಗೆ ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya
error: Content is protected !!