April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ

ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಶ್ರೀ ಮಂಜುಳೇಶ ದೇವರ ಸನ್ನಿಧಿಯಲ್ಲಿ  ಮಹಾ ಶಿವರಾತ್ರಿ ಉತ್ಸವವು  ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯರ ನೇತೃತ್ವದಲ್ಲಿ ಅರ್ಚಕ ವೇದಮೂರ್ತಿ ಶ್ರೀನಿವಾಸ  ಹೊಳ್ಳರ ಧಾರ್ಮಿಕ  ವಿಧಿಗಳೊಂದಿಗೆ  ಮಾ 8 ರಂದು  ವಿವಿಧ ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ  ನಡೆಯಿತು.

ಪೂರ್ವಾಹ್ನ  ಶ್ರೀ ಮಂಜುಳೇಶ ದೇವರ ಸನ್ನಿಧಿಯಲ್ಲಿ ವೈದಿಕರಿಂದ ಸಾಮೂಹಿಕ ರುದ್ರ ಪಾರಾಯಣ,ಶ್ರೀ ಮಂಜುಳೇಶ ದೇವರಿಗೆ ಶತರುದ್ರಾಭಿಷೇಕ ಹಾಗು ಮದ್ಯಾಹ್ನ ಮಹಾಪೂಜೆ ನಡೆಯಿತು . ಶಾಲಾ, ಕಾಲೇಜು ವಿದ್ಯಾರ್ಥಿಗಳು,ಊರ ಪರಊರ ಭಕ್ತಾದಿಗಳು ಮತ್ತು ಧರ್ಮಸ್ಥಳ ಪಾದಯಾತ್ರಿಗಳು  ಅಧಿಕ ಸಂಖ್ಯೆಯಲ್ಲಿ  ಬಂದು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.   

ಸಂಜೆ   ದೇವಸ್ಥಾನ ಮುಂಭಾಗದ ವೇದಿಕೆಯಲ್ಲಿ ಉಜಿರೆಯ ಶ್ರೀ ಜನಾರ್ದನ ಸ್ವಾಮಿ ಭಗಿನಿ ಭಜನಾ ಮಂಡಳಿ,ಶ್ರೀ  ಮಹಮ್ಮಾಯಿ ಭಜನಾ ಮಂಡಳಿ,ಶ್ರೀ ಛತ್ರಪತಿ ಶಿವಾಜಿ ಕುಣಿತ ಭಜನಾ ಮಂಡಳಿ,ಶ್ರೀ ಮಾತೃ ಮಂಡಳಿ,ಶ್ರೀ ಕೃಷ್ಣ ಭಜನಾ ಮಂಡಳಿ ಮುಂಡತ್ತೋಡಿ, ಮಾಚಾರು ಶ್ರೀ ಲಕ್ಷ್ಮೀಜನಾರ್ದನ ಭಜನಾ ಮಂಡಳಿ,ವಿನಾಯಕನಗರ ಶ್ರೀ ಸಿದ್ಧಿವಿನಾಯಕ ಭಜನಾ ಮಂಡಳಿ,ಉಜಿರೆಯ ಶ್ರೀ  ಮಾರಿಕಾಂಬಾ ಭಜನಾ ಮಂಡಳಿ ಹಾಗು ಬೆಳ್ತಂಗಡಿ ಶ್ರೀ ವಿವೇಕ ಜಾಗೃತಿ ಬಳಗದವರಿಂದ ನಿರಂತರ ಭಜನಾ ಕಾರ್ಯಕ್ರಮ  ನಡೆಯಲಿದೆ.                                                           

Related posts

ಪಾರೆಂಕಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ, ಮಹಿಳಾ – ಯುವ ಬಿಲ್ಲವ ವೇದಿಕೆ ವತಿಯಿಂದ ಗುರುಪೂಜೆ, ಸಾಧಕರಿಗೆ ಸನ್ಮಾನ – ಸಾಂಸ್ಕೃತಿಕ ಝೇಂಕಾರ

Suddi Udaya

ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್‌ರಿಂದ ಹೇವಾಜೆ ಶಾಲೆಗೆ ಯಾವುದೇ ಅನುದಾನ ಮಂಜೂರಾಗಿಲ್ಲ: ಮಾಹಿತಿ ಹಕ್ಕಿನಲ್ಲಿ ಅಧಿಕಾರಿ ನೀಡಿದ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್

Suddi Udaya

ಗೇರುಕಟ್ಟೆ ಉಮರ್ ಫಾರೂಕ್ ಮೃತದೇಹ ಹೊರತೆಗೆದು ಕುಟುಂಬಕ್ಕೆ ಹಸ್ತಾಂತರ

Suddi Udaya

‘ದಸ್ಕತ್’ ತುಳು ಸಿನೆಮಾದ ಮೋಷನ್ ಪೋಸ್ಟರ್ ಗೆ ಫಿದಾ ಆದ ತುಳುನಾಡಿನ ದಿಗ್ಗಜರು

Suddi Udaya

ಬೆಳ್ತಂಗಡಿ ಸಂತೆ ಮಾರುಕಟ್ಟೆಯ ವಿದ್ಯುತ್ ಕಂಬಕ್ಕೆ ಸುತ್ತುವರಿದ ಮರದ ಕೊಂಬೆಗಳ ತೆರವು

Suddi Udaya

ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಆಯೋಜಿಸಿದ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!