September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ

ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಶ್ರೀ ಮಂಜುಳೇಶ ದೇವರ ಸನ್ನಿಧಿಯಲ್ಲಿ  ಮಹಾ ಶಿವರಾತ್ರಿ ಉತ್ಸವವು  ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯರ ನೇತೃತ್ವದಲ್ಲಿ ಅರ್ಚಕ ವೇದಮೂರ್ತಿ ಶ್ರೀನಿವಾಸ  ಹೊಳ್ಳರ ಧಾರ್ಮಿಕ  ವಿಧಿಗಳೊಂದಿಗೆ  ಮಾ 8 ರಂದು  ವಿವಿಧ ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ  ನಡೆಯಿತು.

ಪೂರ್ವಾಹ್ನ  ಶ್ರೀ ಮಂಜುಳೇಶ ದೇವರ ಸನ್ನಿಧಿಯಲ್ಲಿ ವೈದಿಕರಿಂದ ಸಾಮೂಹಿಕ ರುದ್ರ ಪಾರಾಯಣ,ಶ್ರೀ ಮಂಜುಳೇಶ ದೇವರಿಗೆ ಶತರುದ್ರಾಭಿಷೇಕ ಹಾಗು ಮದ್ಯಾಹ್ನ ಮಹಾಪೂಜೆ ನಡೆಯಿತು . ಶಾಲಾ, ಕಾಲೇಜು ವಿದ್ಯಾರ್ಥಿಗಳು,ಊರ ಪರಊರ ಭಕ್ತಾದಿಗಳು ಮತ್ತು ಧರ್ಮಸ್ಥಳ ಪಾದಯಾತ್ರಿಗಳು  ಅಧಿಕ ಸಂಖ್ಯೆಯಲ್ಲಿ  ಬಂದು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.   

ಸಂಜೆ   ದೇವಸ್ಥಾನ ಮುಂಭಾಗದ ವೇದಿಕೆಯಲ್ಲಿ ಉಜಿರೆಯ ಶ್ರೀ ಜನಾರ್ದನ ಸ್ವಾಮಿ ಭಗಿನಿ ಭಜನಾ ಮಂಡಳಿ,ಶ್ರೀ  ಮಹಮ್ಮಾಯಿ ಭಜನಾ ಮಂಡಳಿ,ಶ್ರೀ ಛತ್ರಪತಿ ಶಿವಾಜಿ ಕುಣಿತ ಭಜನಾ ಮಂಡಳಿ,ಶ್ರೀ ಮಾತೃ ಮಂಡಳಿ,ಶ್ರೀ ಕೃಷ್ಣ ಭಜನಾ ಮಂಡಳಿ ಮುಂಡತ್ತೋಡಿ, ಮಾಚಾರು ಶ್ರೀ ಲಕ್ಷ್ಮೀಜನಾರ್ದನ ಭಜನಾ ಮಂಡಳಿ,ವಿನಾಯಕನಗರ ಶ್ರೀ ಸಿದ್ಧಿವಿನಾಯಕ ಭಜನಾ ಮಂಡಳಿ,ಉಜಿರೆಯ ಶ್ರೀ  ಮಾರಿಕಾಂಬಾ ಭಜನಾ ಮಂಡಳಿ ಹಾಗು ಬೆಳ್ತಂಗಡಿ ಶ್ರೀ ವಿವೇಕ ಜಾಗೃತಿ ಬಳಗದವರಿಂದ ನಿರಂತರ ಭಜನಾ ಕಾರ್ಯಕ್ರಮ  ನಡೆಯಲಿದೆ.                                                           

Related posts

ಗೋಪಾಲಕೃಷ್ಣ ದೇವಸ್ಥಾನ ಬೆಂದ್ರಾಳ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ಆಟೋಟ ಸ್ಪರ್ಧೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನಕ್ಕೆ ಹೈ ಮಾಸ್ಕ್ ದೀಪದ ಕೊಡುಗೆ ನೀಡಿದ ವಿಧಾನ ಪರಿಷತ್ತು ಶಾಸಕ ಪ್ರತಾಪ್ ಸಿಂಹ ನಾಯಕ್

Suddi Udaya

ಉಜಿರೆ: ರುಡ್ ಸೆಟ್‌ನಲ್ಲಿ ವಿದ್ಯುತ್ ಉಪಕರಣ ಹಾಗೂ ದ್ವಿಚಕ್ರ ವಾಹನ ರಿಪೇರಿ ತರಬೇತಿ ಸಮಾರೋಪ

Suddi Udaya

ಕೊಕ್ಕಡ: ಸರ್ವಿಸ್ ಸ್ಟೇಷನ್ ಮಾಲಕ ಶಾಂತಪ್ಪ ಗೌಡ ಆತ್ಮಹತ್ಯೆ

Suddi Udaya

ನಡ: ಸ್ಟಾರ್ ಲೈನ್ ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ಗೃಹರಕ್ಷಕದಳ ಘಟಕಾಧಿಕಾರಿ ಜಯಾನಂದರಿಗೆ ‘ಮುಖ್ಯಮಂತ್ರಿ ಚಿನ್ನದ ಪದಕ’

Suddi Udaya
error: Content is protected !!