24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ

ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಶ್ರೀ ಮಂಜುಳೇಶ ದೇವರ ಸನ್ನಿಧಿಯಲ್ಲಿ  ಮಹಾ ಶಿವರಾತ್ರಿ ಉತ್ಸವವು  ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯರ ನೇತೃತ್ವದಲ್ಲಿ ಅರ್ಚಕ ವೇದಮೂರ್ತಿ ಶ್ರೀನಿವಾಸ  ಹೊಳ್ಳರ ಧಾರ್ಮಿಕ  ವಿಧಿಗಳೊಂದಿಗೆ  ಮಾ 8 ರಂದು  ವಿವಿಧ ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ  ನಡೆಯಿತು.

ಪೂರ್ವಾಹ್ನ  ಶ್ರೀ ಮಂಜುಳೇಶ ದೇವರ ಸನ್ನಿಧಿಯಲ್ಲಿ ವೈದಿಕರಿಂದ ಸಾಮೂಹಿಕ ರುದ್ರ ಪಾರಾಯಣ,ಶ್ರೀ ಮಂಜುಳೇಶ ದೇವರಿಗೆ ಶತರುದ್ರಾಭಿಷೇಕ ಹಾಗು ಮದ್ಯಾಹ್ನ ಮಹಾಪೂಜೆ ನಡೆಯಿತು . ಶಾಲಾ, ಕಾಲೇಜು ವಿದ್ಯಾರ್ಥಿಗಳು,ಊರ ಪರಊರ ಭಕ್ತಾದಿಗಳು ಮತ್ತು ಧರ್ಮಸ್ಥಳ ಪಾದಯಾತ್ರಿಗಳು  ಅಧಿಕ ಸಂಖ್ಯೆಯಲ್ಲಿ  ಬಂದು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.   

ಸಂಜೆ   ದೇವಸ್ಥಾನ ಮುಂಭಾಗದ ವೇದಿಕೆಯಲ್ಲಿ ಉಜಿರೆಯ ಶ್ರೀ ಜನಾರ್ದನ ಸ್ವಾಮಿ ಭಗಿನಿ ಭಜನಾ ಮಂಡಳಿ,ಶ್ರೀ  ಮಹಮ್ಮಾಯಿ ಭಜನಾ ಮಂಡಳಿ,ಶ್ರೀ ಛತ್ರಪತಿ ಶಿವಾಜಿ ಕುಣಿತ ಭಜನಾ ಮಂಡಳಿ,ಶ್ರೀ ಮಾತೃ ಮಂಡಳಿ,ಶ್ರೀ ಕೃಷ್ಣ ಭಜನಾ ಮಂಡಳಿ ಮುಂಡತ್ತೋಡಿ, ಮಾಚಾರು ಶ್ರೀ ಲಕ್ಷ್ಮೀಜನಾರ್ದನ ಭಜನಾ ಮಂಡಳಿ,ವಿನಾಯಕನಗರ ಶ್ರೀ ಸಿದ್ಧಿವಿನಾಯಕ ಭಜನಾ ಮಂಡಳಿ,ಉಜಿರೆಯ ಶ್ರೀ  ಮಾರಿಕಾಂಬಾ ಭಜನಾ ಮಂಡಳಿ ಹಾಗು ಬೆಳ್ತಂಗಡಿ ಶ್ರೀ ವಿವೇಕ ಜಾಗೃತಿ ಬಳಗದವರಿಂದ ನಿರಂತರ ಭಜನಾ ಕಾರ್ಯಕ್ರಮ  ನಡೆಯಲಿದೆ.                                                           

Related posts

ಸೋಲಾರ್ ಟಾರ್ಪಾಲಿನ್ ಶೀಟ್ ಖರೀದಿಗೆ ಸಹಾಯಧನ: ಅರ್ಜಿ ಆಹ್ವಾನ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಾರ್ಯ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿತೆ ಕಾರ್ಯಕ್ರಮ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆ ಹಾಗೂ ಪಾಲೇದು ಸ. ಹಿ. ಪ್ರಾ. ಶಾಲೆಯ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ

Suddi Udaya

ನಾಲ್ಕೂರು: ಹೃದಯಾಘಾತದಿಂದ ಜಗದೀಶ್ ಪೂಜಾರಿ ಕುದ್ರೋಟ್ಟು ನಿಧನ

Suddi Udaya

ಆಮಂತ್ರಣ ದಶಮಾನೋತ್ಸವ ಸಮಿತಿ ಅಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ: ಬುರುಡೆ ಪ್ರಕರಣ ವಿಚಾರಣೆ ಫೆ.13ಕ್ಕೆ ಮುಂದೂಡಿಕೆ

Suddi Udaya
error: Content is protected !!