22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ

ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಶ್ರೀ ಮಂಜುಳೇಶ ದೇವರ ಸನ್ನಿಧಿಯಲ್ಲಿ  ಮಹಾ ಶಿವರಾತ್ರಿ ಉತ್ಸವವು  ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯರ ನೇತೃತ್ವದಲ್ಲಿ ಅರ್ಚಕ ವೇದಮೂರ್ತಿ ಶ್ರೀನಿವಾಸ  ಹೊಳ್ಳರ ಧಾರ್ಮಿಕ  ವಿಧಿಗಳೊಂದಿಗೆ  ಮಾ 8 ರಂದು  ವಿವಿಧ ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ  ನಡೆಯಿತು.

ಪೂರ್ವಾಹ್ನ  ಶ್ರೀ ಮಂಜುಳೇಶ ದೇವರ ಸನ್ನಿಧಿಯಲ್ಲಿ ವೈದಿಕರಿಂದ ಸಾಮೂಹಿಕ ರುದ್ರ ಪಾರಾಯಣ,ಶ್ರೀ ಮಂಜುಳೇಶ ದೇವರಿಗೆ ಶತರುದ್ರಾಭಿಷೇಕ ಹಾಗು ಮದ್ಯಾಹ್ನ ಮಹಾಪೂಜೆ ನಡೆಯಿತು . ಶಾಲಾ, ಕಾಲೇಜು ವಿದ್ಯಾರ್ಥಿಗಳು,ಊರ ಪರಊರ ಭಕ್ತಾದಿಗಳು ಮತ್ತು ಧರ್ಮಸ್ಥಳ ಪಾದಯಾತ್ರಿಗಳು  ಅಧಿಕ ಸಂಖ್ಯೆಯಲ್ಲಿ  ಬಂದು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.   

ಸಂಜೆ   ದೇವಸ್ಥಾನ ಮುಂಭಾಗದ ವೇದಿಕೆಯಲ್ಲಿ ಉಜಿರೆಯ ಶ್ರೀ ಜನಾರ್ದನ ಸ್ವಾಮಿ ಭಗಿನಿ ಭಜನಾ ಮಂಡಳಿ,ಶ್ರೀ  ಮಹಮ್ಮಾಯಿ ಭಜನಾ ಮಂಡಳಿ,ಶ್ರೀ ಛತ್ರಪತಿ ಶಿವಾಜಿ ಕುಣಿತ ಭಜನಾ ಮಂಡಳಿ,ಶ್ರೀ ಮಾತೃ ಮಂಡಳಿ,ಶ್ರೀ ಕೃಷ್ಣ ಭಜನಾ ಮಂಡಳಿ ಮುಂಡತ್ತೋಡಿ, ಮಾಚಾರು ಶ್ರೀ ಲಕ್ಷ್ಮೀಜನಾರ್ದನ ಭಜನಾ ಮಂಡಳಿ,ವಿನಾಯಕನಗರ ಶ್ರೀ ಸಿದ್ಧಿವಿನಾಯಕ ಭಜನಾ ಮಂಡಳಿ,ಉಜಿರೆಯ ಶ್ರೀ  ಮಾರಿಕಾಂಬಾ ಭಜನಾ ಮಂಡಳಿ ಹಾಗು ಬೆಳ್ತಂಗಡಿ ಶ್ರೀ ವಿವೇಕ ಜಾಗೃತಿ ಬಳಗದವರಿಂದ ನಿರಂತರ ಭಜನಾ ಕಾರ್ಯಕ್ರಮ  ನಡೆಯಲಿದೆ.                                                           

Related posts

ಮದ್ದಡ್ಕ ಕಿನ್ನಿಗೋಳಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿಮಹಿಳೆ ಶವಪತ್ತೆ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ಡ್ರಗ್ ಡಿಸ್ಕವರಿ ಮತ್ತು ಪ್ರಿಸಿಷನ್ ಮೆಡಿಸಿನ್‌ನಲ್ಲಿ ಎ.ಐ ಪಾತ್ರ ಕುರಿತು ಉಪನ್ಯಾಸ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶೋತ್ಸವ ಪೂರ್ವಾಭಾವಿ ಸಭೆ

Suddi Udaya

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya
error: Content is protected !!