27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿ

ಧರ್ಮಸ್ಥಳದಲ್ಲಿ ಅಹೋರಾತ್ರಿ ಸಾಮೂಹಿಕ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ

ಧರ್ಮಸ್ಥಳ: ನೀನೊಲಿದರೆ ಕೊರಡು ಕೊನರುವುದು, ವಿಷವೂ ಅಮೃತವಾಗುವುದು ಎಂಬಂತೆ ಪರಿಶುದ್ಧ ಮನದಿಂದ ಶಿವರಾತ್ರಿಯ ಶುಭರಾತ್ರಿಯಲ್ಲಿ ಶಿವನಾಮ ಸ್ಮರಣೆ ಮಾಡಿದರೆ ಸಕಲದೋಷಗಳ ಪರಿಹಾರವಾಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಅಹೋರಾತ್ರಿ ಶಿವನಾಮ ಪಂಚಾಕ್ಷರಿ ಪಠಣಕ್ಕೆ ಚಾಲನೆ ನೀಡಿ ಮಾತನಾಡಿದರು.ನಮ್ಮ ಎಲ್ಲಾ ಮನೋವಿಕಾರಗಳನ್ನು ದೂರಮಾಡಿ ಸಕಲ ಜೀವಿಗಳಿಗೆ ಲೇಸನ್ನೆ ಬಯಸಿ ಉನ್ನತ ಸಾಧನೆ ಮಾಡಬೇಕು. ಶಿವನ ಜೋತೆಗೆ ಶಿವಭಕ್ತರ ಸೇವೆ ಮಾಡಿದರೂ ಪುಣ್ಯ ಬರುತ್ತದೆ ಎಂದು ಅವರು ಹೇಳಿದರು.

ಮಹಿಳೆಯರನ್ನು ಗೌರವದಿಂದ ಕಾಣಬೇಕು. ಅವರು ನೊಂದು ಕಣ್ಣೀರು ಹಾಕಿದರೂ ಅದು ಶಾಪವಾಗಿ ಪರಿಣಮಿಸುತ್ತದೆ. ಹಿತ-ಮಿತ, ಸುಮಧುರ ಮಾತುಗಳನ್ನಾಡಬೇಕು. ಮಾತೇ ಮಾಣಿಕ್ಯ. ಮಾತು ಬಿಡ ಮಂಜುನಾಥ ಎಂಬ ಮಾತನ್ನು ಎಲ್ಲರೂ ಸದಾ ನೆನಪಿಟ್ಟುಕೊಳ್ಳಬೇಕು ಎಂದು ಅವರು ಕಿವಿಮಾತು ಹೇಳಿದರು.ಮನ, ವಚನ, ಕಾಯದಿಂದ ಪರಿಶುದ್ಧ, ದೃಢಸಂಕಲ್ಪ ಮತ್ತು ಪರಿಶುದ್ಧ ಭಕ್ತಿಯಿಂದ ದೇವರ ಅನುಗ್ರಹಕ್ಕೆ ಪಾತ್ರರಾಗಿ ಉನ್ನತ ಸಾಧನೆ ಮಾಡಬಹುದು. ಶಿವರಾತ್ರಿ ಒಂದೇ ರಾತ್ರಿಗೆ ಸೀಮಿತವಾಗದೆ ಪ್ರತಿ ರಾತ್ರಿಯೂ ಶಿವರಾತ್ರಿಯಾಗಿ, ಶುಭರಾತ್ರಿಯಾಗಿ ಎಲ್ಲೆಲ್ಲೂ ಸುಖ-ಶಾಂತಿ, ನೆಮ್ಮದಿ ನೆಲೆಸಲೆಂದು ಅವರು ಹಾರೈಸಿದರು.

ಹೇಮಾವತಿ ವೀ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್‌ಮ, ಸುಪ್ರಿಯಾ ಹರ್ಷೇಂದ್ರ ಕುಮಾರ್ ಪಾದಯಾತ್ರೆಯ ರೂವಾರಿ ಹನುಮಂತಪ್ಪ ಗುರೂಜಿ, ಮರಿಯಪ್ಪ ಉಪಸ್ಥಿತರಿದ್ದರು.

ಡಾ. ಪವನ್ ಸಂಪಾದಿಸಿದ “ವೈದ್ಯಾಮೃತ” ಕೃತಿಯನ್ನು ಬಿಡುಗಡೆಗೊಳಿಸಲಾಯಿತು.ಬೆಂಗಳೂರಿನ ಭಕ್ತರಿಂದ ಸೇವೆ: ಶಿವರಾತ್ರಿ ಪ್ರಯುಕ್ತ ಬೆಂಗಳೂರಿನ ಹಲವಾರು ಸಂಘಟನೆಗಳು ಸೇರಿ ಶುಕ್ರವಾರ ರಾತ್ರಿ ಭಕ್ತರಿಗೆ ಉಪಾಹಾರ ನೀಡಿದರು.

Related posts

ಉಜಿರೆ ಎಸ್.ಡಿ.ಯಂ ಕಾಲೇಜಿನಲ್ಲಿ ಶ್ರೀಕೃಷ್ಣ ಲೀಲೆ-ಕಂಸ ವಧೆ ಇಂಗ್ಲೀಷ್ ತಾಳಮದ್ದಳೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಸೆ.7-9: ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜ ತಾಲೂಕು ಆಡಳಿತ ಕಚೇರಿಗೆ ಭೇಟಿ

Suddi Udaya

ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿನಲ್ಲಿ CSEET ಓರಿಯೆಂಟೇಷನ್ ಕಾರ್ಯಾಗಾರ

Suddi Udaya

ಬೆಳ್ತಂಗಡಿ :ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಗೆ ರಾಜ್ಯಮಟ್ಟದ ಹಲವು ಪ್ರಶಸ್ತಿ

Suddi Udaya
error: Content is protected !!