ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿ

ಧರ್ಮಸ್ಥಳದಲ್ಲಿ ಅಹೋರಾತ್ರಿ ಸಾಮೂಹಿಕ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ

ಧರ್ಮಸ್ಥಳ: ನೀನೊಲಿದರೆ ಕೊರಡು ಕೊನರುವುದು, ವಿಷವೂ ಅಮೃತವಾಗುವುದು ಎಂಬಂತೆ ಪರಿಶುದ್ಧ ಮನದಿಂದ ಶಿವರಾತ್ರಿಯ ಶುಭರಾತ್ರಿಯಲ್ಲಿ ಶಿವನಾಮ ಸ್ಮರಣೆ ಮಾಡಿದರೆ ಸಕಲದೋಷಗಳ ಪರಿಹಾರವಾಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಅಹೋರಾತ್ರಿ ಶಿವನಾಮ ಪಂಚಾಕ್ಷರಿ ಪಠಣಕ್ಕೆ ಚಾಲನೆ ನೀಡಿ ಮಾತನಾಡಿದರು.ನಮ್ಮ ಎಲ್ಲಾ ಮನೋವಿಕಾರಗಳನ್ನು ದೂರಮಾಡಿ ಸಕಲ ಜೀವಿಗಳಿಗೆ ಲೇಸನ್ನೆ ಬಯಸಿ ಉನ್ನತ ಸಾಧನೆ ಮಾಡಬೇಕು. ಶಿವನ ಜೋತೆಗೆ ಶಿವಭಕ್ತರ ಸೇವೆ ಮಾಡಿದರೂ ಪುಣ್ಯ ಬರುತ್ತದೆ ಎಂದು ಅವರು ಹೇಳಿದರು.

ಮಹಿಳೆಯರನ್ನು ಗೌರವದಿಂದ ಕಾಣಬೇಕು. ಅವರು ನೊಂದು ಕಣ್ಣೀರು ಹಾಕಿದರೂ ಅದು ಶಾಪವಾಗಿ ಪರಿಣಮಿಸುತ್ತದೆ. ಹಿತ-ಮಿತ, ಸುಮಧುರ ಮಾತುಗಳನ್ನಾಡಬೇಕು. ಮಾತೇ ಮಾಣಿಕ್ಯ. ಮಾತು ಬಿಡ ಮಂಜುನಾಥ ಎಂಬ ಮಾತನ್ನು ಎಲ್ಲರೂ ಸದಾ ನೆನಪಿಟ್ಟುಕೊಳ್ಳಬೇಕು ಎಂದು ಅವರು ಕಿವಿಮಾತು ಹೇಳಿದರು.ಮನ, ವಚನ, ಕಾಯದಿಂದ ಪರಿಶುದ್ಧ, ದೃಢಸಂಕಲ್ಪ ಮತ್ತು ಪರಿಶುದ್ಧ ಭಕ್ತಿಯಿಂದ ದೇವರ ಅನುಗ್ರಹಕ್ಕೆ ಪಾತ್ರರಾಗಿ ಉನ್ನತ ಸಾಧನೆ ಮಾಡಬಹುದು. ಶಿವರಾತ್ರಿ ಒಂದೇ ರಾತ್ರಿಗೆ ಸೀಮಿತವಾಗದೆ ಪ್ರತಿ ರಾತ್ರಿಯೂ ಶಿವರಾತ್ರಿಯಾಗಿ, ಶುಭರಾತ್ರಿಯಾಗಿ ಎಲ್ಲೆಲ್ಲೂ ಸುಖ-ಶಾಂತಿ, ನೆಮ್ಮದಿ ನೆಲೆಸಲೆಂದು ಅವರು ಹಾರೈಸಿದರು.

ಹೇಮಾವತಿ ವೀ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್‌ಮ, ಸುಪ್ರಿಯಾ ಹರ್ಷೇಂದ್ರ ಕುಮಾರ್ ಪಾದಯಾತ್ರೆಯ ರೂವಾರಿ ಹನುಮಂತಪ್ಪ ಗುರೂಜಿ, ಮರಿಯಪ್ಪ ಉಪಸ್ಥಿತರಿದ್ದರು.

ಡಾ. ಪವನ್ ಸಂಪಾದಿಸಿದ “ವೈದ್ಯಾಮೃತ” ಕೃತಿಯನ್ನು ಬಿಡುಗಡೆಗೊಳಿಸಲಾಯಿತು.ಬೆಂಗಳೂರಿನ ಭಕ್ತರಿಂದ ಸೇವೆ: ಶಿವರಾತ್ರಿ ಪ್ರಯುಕ್ತ ಬೆಂಗಳೂರಿನ ಹಲವಾರು ಸಂಘಟನೆಗಳು ಸೇರಿ ಶುಕ್ರವಾರ ರಾತ್ರಿ ಭಕ್ತರಿಗೆ ಉಪಾಹಾರ ನೀಡಿದರು.

Related posts

ನಡ ನೆಲ್ಲಿಗುಡ್ಡೆ ಅನಾರೋಗ್ಯದಿಂದ ಬಳಲುತ್ತಿರುವ ಶೀನಪ್ಪ ಗೌಡ ಕುಟುಂಬದ ಜೊತೆಗೆ ಹುಟ್ಟುಹಬ್ಬ ಆಚರಿಸಿ ತಾಲೂಕಿಗೆ ಮಾದರಿಯಾದ ನಡ ಪ.ಪೂ. ಕಾಲೇಜು ವಿದ್ಯಾರ್ಥಿ: ಅಕ್ಕಿ, ದವಸಧಾನ್ಯ ವಿತರಣೆ

Suddi Udaya

ಮಚ್ಚಿನ: ಕುತ್ತಿನ ಶಾಲೆಯಲ್ಲಿ ಬೀಳ್ಕೊಡುಗೆ ಮತ್ತು ಮಕ್ಕಳ ಹಬ್ಬ

Suddi Udaya

ಪಾರೆಂಕಿ ಶ್ರೀ ವಿದ್ಯಾಸರಸ್ವತಿ ಭಜನಾ ಮಂಡಳಿಯಿಂದ ಭಜಕ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಉಜಿರೆ: ಅಗತ್ಯ ದಾಖಲೆ ಹಾಗೂ ನಗದು ಇದ್ದ ಪರ್ಸ್ ಬಿದ್ದು ಕಳೆದುಹೋಗಿದೆ

Suddi Udaya

ಹೋರಿ ಹಾಯ್ದು ಗಾಯಗೊಂಡಿದ್ದ ಗೇರುಕಟ್ಟೆಯ ವ್ಯಕ್ತಿ ಮೃತ್ಯು; ಉಪ್ಪಿನಂಗಡಿ ಖಾಸಗಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಆರೋಪ: ಪ್ರಕರಣ ದಾಖಲು

Suddi Udaya

ಉರುವಾಲು ಹಾಗೂ ಪದ್ಮುಂಜ ಶ್ರೀ ವರಾಮಹಾಲಕ್ಷ್ಮಿ ಪೂಜೆ ಹಾಗೂ ಒಕ್ಕೂಟ ಪದಗ್ರಹಣ ಸಮಾರಂಭ

Suddi Udaya
error: Content is protected !!