26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಹಿಳಾ ದಿನಾಚರಣೆ

ಬೆಳಾಲು : ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ನಾಗಾಂಬಿಕ ಸಂಜೀವಿನಿ ಒಕ್ಕೂಟ ಬೆಳಾಲು, ಹಾಗೂ ಸ್ತ್ರೀ ಶಕ್ತಿ ಗೊಂಚಲು ಇದರ ಸಹಯೋಗದಲ್ಲಿ ಮಹಿಳಾ ದಿನಾಚರಣೆಯನ್ನು ಮಾ. 07 ರಂದು ನಡೆಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿದ್ಯಾ ಶ್ರೀನಿವಾಸ ಗೌಡ ವಹಿಸಿಕೊಂಡು ಮಹಿಳೆಯರು ಸ್ವಾಲಂಬಿ ಬದುಕು ಕಟ್ಟಿಕೊಂಡು ಸಮಾಜದಲ್ಲಿ ಉತ್ತಮ ಸ್ಥಾನಮಾನವನ್ನು ಗಳಿಸಬೇಕೆಂದು ತಿಳಿಸಿದರು. ಒಕ್ಕೂಟದ ಅಧ್ಯಕ್ಷರಾದ ಮಧುರ ಹಾಗೂ ಅತಿಥಿಗಳು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಮುಖ್ಯ ಪುಸ್ತಕ ಬರಹಗಾರರಾದ ಹರಿಣಾಕ್ಷಿ ಇವರು ಒಕ್ಕೂಟದ ವರದಿಯನ್ನು ಮಂಡಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಉಷಾ ಕಾಮತ್ ಸರಕಾರದ ವಿವಿಧ ಯೋಜನೆಗಳನ್ನು ಮಹಿಳೆಯರು ಯಾವ ರೀತಿ ಬಳಸಿಕೊಳ್ಳಬೇಕೆಂದು ತಿಳಿಸಿದರು.

ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಪ್ರತಿಮಾ ಇವರು ಎನ್ ಆರ್ ಎಲ್ ಎಂ ಯೋಜನೆಯ ಬಗ್ಗೆ ಹಾಗೂ ಸಂಘಗಳಿಗೆ ಸೇರಿ ಮಹಿಳೆಯರು ಬೇರೆ ಬೇರೆ ಕಾರ್ಯಾಚಟುವಟಿಕೆಗಳಲ್ಲಿ ಸಾಧನೆ ಮಾಡಿರುವ ಬಗ್ಗೆ ತಿಳಿಸಿದರು. ಸ್ತ್ರೀ ಶಕ್ತಿ ಮೇಲ್ವಿಚಾರಕಿಯಾದ ಅನ್ನಪೂರ್ಣ ಇವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ತಿಳಿಸಿದರು. ಈ ಸಂದರ್ಭದಲ್ಲಿ ಸ್ತ್ರೀಶಕ್ತಿ ಹಾಗೂ ಸಂಜೀವಿನಿ ಸಂಘಗಳಲ್ಲಿ ಹೆಚ್ಚು ಸಾಧನೆ ಮಾಡಿದ ಸಂಘ ಹಾಗೂ ಸದಸ್ಯರನ್ನು ಗುರುತಿಸಿ ಸನ್ಮಾನಿಸಲಾಯಿತು.

ಮಹಿಳೆಯರಿಗೆ ವಿವಿಧ ಮನೋರಂಜನ ಆಟಗಳನ್ನು ಆಯೋಜಿಸಿ ಬಹುಮಾನಗಳನ್ನು ವಿತರಣೆ ಮಾಡಲಾಯಿತು. ಸಭೆಯಲ್ಲಿ ಉಪಾಧ್ಯಕ್ಷೆ ಗೀತಾ ,ಪಂಚಾಯತ್ ಸದಸ್ಯರು, ಅಭಿವೃದ್ಧಿ ಅಧಿಕಾರಿಗಳಾದ ಲಕ್ಷ್ಮೀಬಾಯಿ , ಒಕ್ಕೂಟದ ಅಧ್ಯಕ್ಷರು ಕಾರ್ಯದರ್ಶಿ ಪದಾಧಿಕಾರಿಗಳು, ಗೊಂಚಲಿನ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು, ಬ್ಲಾಕ್ ಸೊಸೈಟಿ ಅಧ್ಯಕ್ಷೆ ನಿಶಾ, ಎಂಬಿಕೆ ಹರಿಣಾಕ್ಷಿ , ಎಲ್ ಸಿ ಆರ್ ಪಿ ವಾಣಿ, ಸರಸ್ವತಿ , ಕೃಷಿ ಸಖಿ ಸ್ವಾತಿ, ಪಶುಸಖಿ ಯಶೋಧ, ಪಂಚಾಯತ್ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯವರು, ಅಂಗನವಾಡಿ ಕಾರ್ಯಕರ್ತೆಯರು, ಸಂಘದ ಸದಸ್ಯರು ಎಂ ಎಸ್ ಡಬ್ಲ್ಯೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಶಾಲಿನಿ ಕಾರ್ಯಕ್ರಮವನ್ನು ನಿರೂಪಿಸಿ, ಲತಾ, ವಿದ್ಯಾ ಭಟ್, ಆಶಾ ಇವರ ಪ್ರಾರ್ಥಸಿ , ಕೃಷಿಸಖಿ ಸ್ವಾತಿ ಸ್ವಾಗತಿಸಿದರು. ಎಲ್ ಸಿ ಆರ್ ಪಿ ಸರಸ್ವತಿ ಧನ್ಯವಾದವಿತ್ತರು.

Related posts

ನಾಳ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯ

Suddi Udaya

ಕೊಲ್ಲೂರಿನಿಂದ-ನಾಡಿನ ಪ್ರಸಿದ್ದ ಶ್ರದ್ದಾಕೇಂದ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ಯಾತ್ರೆ: ಉಜಿರೆಯಲ್ಲಿ ಧರ್ಮ ಸಂರಕ್ಷಣಾ ರಥಯಾತ್ರೆಗೆ ಅದ್ದೂರಿ ಚಾಲನೆ,

Suddi Udaya

ಅರಸಿನಮಕ್ಕಿ: ವಿಶ್ವ ಮಹಿಳಾ ದಿನ ಹಾಗೂ ಅರಸಿನಮಕ್ಕಿ ಗೊಂಚಲು ಸ್ತ್ರೀ ಶಕ್ತಿ ಸಂಘದ ಬೆಳ್ಳಿಹಬ್ಬದ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ

Suddi Udaya

ಬೆಳ್ತಂಗಡಿ ಮಹಿಳಾ ಜೆಸಿ ವಿಭಾಗದಿಂದ ಧ್ವನಿವರ್ಧಕ ಕೊಡುಗೆ

Suddi Udaya

ವೇಣೂರು ಗ್ರಾ.ಪಂ ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘದ ವಾರ್ಷಿಕ ಪೂಜಾ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya
error: Content is protected !!