37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಚಾರು: ಬದನಾಜೆ ಶಾಲೆ ಹಿರಿಯ ವಿದ್ಯಾರ್ಥಿ ಸಂಘದ ಪುನಾರಚನೆ

ಮಾಚಾರು: ಇಲ್ಲಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬದನಾಜೆಯ ಹಿರಿಯ ವಿದ್ಯಾರ್ಥಿ ಸಂಘವನ್ನು ಮಾರ್ಚ್ 3 ರಂದು ನಡೆದ ಶಾಲೆಯಲ್ಲಿ ನಡೆದ ಸಂಘದ ಸಭೆಯಲ್ಲಿ ಪುನಾರಚನೆ ಮಾಡಲಾಯಿತು.

ಸಂಘದ ನೂತನ ಅಧ್ಯಕ್ಷರಾಗಿ ರಾಮಯ್ಯ ಗೌಡ ಮಾಚಾರು ಆಯ್ಕೆಯಾದರು. ಕಾರ್ಯದರ್ಶಿಯಾಗಿ ಸುರೇಶ್ ಮಾಚಾರ್, ಕೋಶಾಧಿಕಾರಿಯಾಗಿ ರೋಶನ್ ಡಿಸೋಜ, ಉಪಾಧ್ಯಕ್ಷರಾಗಿ ಶ್ರೀಮತಿ ನಾಗವೇಣಿ, ಸಂಘಟನಾ ಕಾರ್ಯದರ್ಶಿಯಾಗಿ ಪ್ರಕಾಶ್ಚಂದ್ರ ನಾಯ್ಕ ಆಯ್ಕೆಯಾದರು.

ಈ ಸಂದರ್ಭದಲ್ಲಿ ಹಿರಿಯರಾದ ನಿವೃತ್ತ ಶಿಕ್ಷಕರಾದ ಬಾಬುಗೌಡ ಬಾಜಿಮಾರು ರವರನ್ನು ಸಂಘದ ಗೌರವಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ನಿಕಟಪೂರ್ವ ಅಧ್ಯಕ್ಷರಾದ ಮೋಹನ್ ಪಿ, ಕಾರ್ಯದರ್ಶಿಯಾದ ಗೋಪಾಲ್ ಮಾಸ್ಟರ್, ಎಚ್.ಬಿ.ಮೋಹನ್,ಬಿ.ಎಂ.ಇಲ್ಯಾಸ್,ಗುರುಪ್ರಸಾದ್ ಕೋಟ್ಯಾನ್,ಅನಿಲ್ ಡಿಸೋಜ,ಪಿತಾಂಬರ ಪೂಜಾರಿ,ಸುಂದರ ಬಂಗೇರ, ಸೋಮಶೇಖರ್ ಕೆ,ಮುರಳೀಧರ ಆಚಾರ್ಯ,ಸಂತೋಷ್ ಗೌಡ ಬದನಾಜೆ, ದೇವದಾಸ್ ಮುರ,ಹರಿಪ್ರಸಾದ್ ಪಾಲೆಂಜ,ಕೇಶವ ನಾಯ್ಕ,ಪ್ರಕಾಶ್ ಗೌಡ ಓರಾಲು,ಸುರೇಶ್ ಮಡಿವಾಳ್, ರಮೇಶ್ ಬೊಳ್ಳಿ, ಹಂಝ ಬಂಡಸಾಲೆ,ಸಂಜೀವ ನಾಯ್ಕ ಕಲ್ಲಾಜೆ, ಮಹಮ್ಮದ್ ಇಕ್ಬಾಲ್ ಮಾಚಾರ್, ಪುರುಷೋತ್ತಮ ಬಿ.ಎಸ್, ರಮೇಶ್ ನಾಯ್ಕ ಮಾಪಲ,ಕರುಣಾಕರ ಗೌಡ,ಮಂಜುಳ ಹಾಗೂ ಸ್ವಪ್ನ ಇವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಶಾಲಾ ಪ್ರಭಾರ ಮುಖ್ಯೋಪಾಧ್ಯಾಯರಾದ ಶ್ರೀಮತಿ ಲಲಿತ, ಸಹ ಶಿಕ್ಷಕಿ ಮಮತ ಹಾಗೂ ಬದನಾಜೆ ಪ್ರೌಢಶಾಲಾ ಶಿಕ್ಷಕರಾದ ಮಹದೇವ ಶೆಟ್ಟಿಯವರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ : ಶ್ರೀ ಧ.  ಮಂ.  ಆಂಗ್ಲ ಮಾಧ್ಯಮ ಶಾಲೆಯಲ್ಲಿ  ನಾಯಕತ್ವ ತರಬೇತಿ ಕಾರ್ಯಾಗಾರ

Suddi Udaya

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ: ಶಾಸಕ ಹರೀಶ್ ಪೂಂಜ ಸೇರಿ 65 ಮಂದಿಗೆ ಸಮನ್ಸ್ ಜಾರಿ

Suddi Udaya

ಉಜಿರೆ ಎಸ್ ಡಿ ಎಂ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಚಾರ್‌ಧಾಮ್‌ ಹಾಗೂ ಕೈಲಾಶ ಮಾನಸ ಸರೋವರ ಯಾತ್ರೆಯ ಅರ್ಜಿ ಸಲ್ಲಿಕೆ ಅವಧಿ ಜ. 31 ರ ತನಕ ವಿಸ್ತರಣೆ

Suddi Udaya

ಮೈಸೂರಿನಲ್ಲಿ ಬಾಲಕಿಯರ ವಿಭಾಗದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟ: ಜಿದ್ದಾಜಿದ್ದಿನ ಪಂದ್ಯಾವಳಿಯಲ್ಲಿ ಸತತ 9ನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬಂದಾರು ಶಾಲೆ

Suddi Udaya

ಜಿ.ಪಂ. ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್‌ರ ಮಾತೃಶ್ರೀ ಸಿರಿಯಮ್ಮ ಹೊಸಂಗಡಿ ನಿಧನ

Suddi Udaya
error: Content is protected !!