32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.9: ಬಜಿರೆಯಲ್ಲಿ 60 ಕೆ.ಜಿ ವಿಭಾಗದ ಪುರುಷರ ಹೊನಲು ಬೆಳಕಿನ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಯಂಗ್ ಬಾಯ್ಸ್ ಟ್ರೋಫಿ

ವೇಣೂರು: ಯಂಗ್ ಬಾಯ್ಸ್ ಬಜಿರೆ ಇದರ ಸಾರಥ್ಯದಲ್ಲಿ ಯುವಶಕ್ತಿ ಬಜಿರೆ ಇದರ ಸಹಕಾರದೊಂದಿಗೆ ದ.ಕ. ಜಿಲ್ಲಾ ಮತ್ತು ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ ಇದರ ಸಹಭಾಗಿತ್ವದಲ್ಲಿ 60 ಕೆ.ಜಿ ವಿಭಾಗದ ಪುರುಷರ ಹೊನಲು ಬೆಳಕಿನ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ ಯಂಗ್ ಬಾಯ್ಸ್ ಟ್ರೋಫಿ – 2024 ಮಾ.9ರಂದು ವೇಣೂರು ಬಜಿರೆಯಲ್ಲಿ ನಡೆಯಲಿದೆ.

ಅಧ್ಯಕ್ಷತೆಯನ್ನು ವೇಣೂರು ಗ್ರಾ.ಪಂ. ಅಧ್ಯಕ್ಷ ನೇಮಯ್ಯ ಕುಲಾಲ್ ವಹಿಸಲಿದ್ದಾರೆ, ಕಾರ್ಯಕ್ರಮದ ಉದ್ಘಾಟನೆಯನ್ನು ರಾಜೇಂದ್ರ ಆಚಾರ್ಯ, ಕಲ್ಪನೆ, ಬಜಿರೆ ಹಾಗೂ ಕ್ರೀಡಾಂಗಣ ಉದ್ಘಾಟನೆಯನ್ನು ಸುರೇಶ್ ಆರಿಗ, ಪೆರ್ಮಾಣುಗುತ್ತು, ಬಜಿರೆ ವಹಿಸಲಿದ್ದಾರೆ,

ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ಹರೀಶ್ ಕುಮಾರ್, ಭಾ.ಜ.ಪಾ. ದ.ಕ. ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್ ಮರೋಡಿ, ವೇಣೂರು ಪ್ರಾ.ಕೃ.ಪ.ಸ.ಸಂಘ (ನಿ.) ಅಧ್ಯಕ್ಷ ಸುಂದರ ಹೆಗ್ಡೆ ಬಿ.ಇ., ಅಳದಂಗಡಿ ಕ್ಷೇತ್ರ ಮಾಜಿ ಜಿ.ಪಂ. ಸದಸ್ಯ ಶೇಖರ ಕುಕ್ಕೇಡಿ , ವೇಣೂರು ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ಪುಷ್ಪಾವತಿ ಡಿ. ಹಾಗೂ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಬಜಿರೆಯ ಸಕ್ರೀಯ ಸದಸ್ಯರಾದ ಯುನಿವರ್ಸಿಟಿ ಗೋಲ್ಡ್ ಮೆಡಲಿಸ್ಟ್ ಹಾಗೂ ಖೋಲೋ ಇಂಡಿಯಾ ಯೂನಿವರ್ಸಿಟಿ ಗೋಲ್ಡ್ ಮೆಡಲಿಸ್ಟ್ ಗಳಾದ ಸುಶಾಂತ್ ಶೆಟ್ಟಿ, ಶಶಾಂಕ್ ಆಚಾರ್ಯ ಹಾಗೂ ಯಕ್ಷಗಾನ ಕ್ಷೇತ್ರದಲ್ಲಿ ಸಾಧನೆಗೈದ ಸದಾಶಿವ ಕುಲಾಲ್, ಸದಾಶಿವ ಆಚಾರ್ಯ, ಶೈಕ್ಷಣೀಕ ಕ್ಷೇತ್ರದಲ್ಲಿ ದೀಪಕ್ ಹೆಗ್ಡೆ, ಕ್ರೀಡಾ ಕ್ಷೇಥ್ರ ಪ್ರಿಥ್ವಿ ಭಂಡಾರಿ ದೇರಾಜೆ, ಸಿಂಚನ್ ಎಸ್, ಸಾಕ್ಷಿತಾ ಇವರುಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

Related posts

90ನೇ ವರ್ಷದ ಹುಟ್ಟುಹಬ್ಬ ಆಚರಿಸುತ್ತಿರುವ ಡಾ| ಮೋಹನ ದಾಸ್ ರವರಿಗೆ ಸೌತಡ್ಕ ಕ್ಷೇತ್ರದಿಂದ ಗೌರವಾರ್ಪಣೆ

Suddi Udaya

ಎಕ್ಸೆಲ್ ನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya

ಗಾಂಜಾ ನಶೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ ಯುವಕ ಪೊಲೀಸ್ ವಶ: ಚಿಕ್ಕಮಗಳೂರು ದೊನಿಗದ್ದೆ ನಿವಾಸಿ ಸಂತೋಷ್ ಬಂಧನ

Suddi Udaya

ಬಡಗಕಾರಂದೂರು ಸ.ಉ.ಪ್ರಾ.ಶಾಲೆಯ ವಿವಿಧ ಬೇಡಿಕೆಗಳಿಗೆ ಸಂಬಂಧಿಸಿದಂತೆ ಶಾಲಾ ಎಸ್ ಡಿ ಎಂ ಸಿ ವತಿಯಿಂದ ಸಂಸದ ಬ್ರಿಜೇಶ್ ಚೌಟರವರಿಗೆ ಮನವಿ ಸಲ್ಲಿಕೆ

Suddi Udaya

ಎಸ್ ಎಸ್ ಎಲ್ ಸಿ ಐಸಿಎಸ್ಇ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿವಿಧ ಶಾಲೆಯ ವಿದ್ಯಾರ್ಥಿಗಳಿಗೆ ವಿದ್ವತ್ ಪಿಯು ಕಾಲೇಜಿನಿಂದ ಅಭಿನಂದನೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಗಾಂಧಿಯವರ ಪುಣ್ಯ ಸ್ಮರಣೆ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ರವರ ಜನ್ಮ ದಿನಾಚರಣೆ

Suddi Udaya
error: Content is protected !!