22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಉತ್ಸವ: ವಿಶೇಷ ಪೂಜೆ

ಮಿತ್ತಬಾಗಿಲು: ಇಲ್ಲಿಯ ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಉತ್ಸವವು ಶ್ರೀ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ವೇದಮೂರ್ತಿ ಪಾವಂಜೆ ವಾಗೀಶ ಶಾಸ್ತ್ರಿಯವರ ನೇತೃತ್ವದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಜರುಗಿತು.

ಬೆಳಿಗ್ಗೆ ಪಂಚವಿಂಶತಿ ಕಲಶ ಸ್ಥಾಪನೆ, ಗಣಹೋಮ, ಅಧಿವಾಸ ಹೋಮ, ತೋರಣ ಮೂಹೂರ್ತ, ರುದ್ರಾಭಿಷೇಕ, ಪಂಚವಿಂಶತಿ ಕಲಶಾಭಿಷೇಕ, ಮಹಾಪೂಜೆ, ಉತ್ಸವ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಸಾಂಸ್ಕೃತಿಕ ಕಾರ್ಯಕ್ರಮದ ವಿದ್ಯುಕ್ತ ಉದ್ಘಾಟನೆ, ಕುಣಿತ ಭಜನೆ, ನಡೆಯಿತು.

ಈ ಸಂದರ್ಭದಲ್ಲಿ ಉತ್ಸವ ಸಮಿತಿ ಅಧ್ಯಕ್ಷ ಅಶೋಕ ಗೌಡ, ಕಾರ್ಯದರ್ಶಿ ರಾಜೇಶ್ ಎನ್.ಆರ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಧನಂಜಯ ರಾವ್ ವಕೀಲರು, ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರು, ಉತ್ಸವ ಸಮಿತಿಯ ಗೌರವಾಧ್ಯಕ್ಷರು, ಪದಾಧಿಕಾರಿಗಳು, ಅರ್ಚಕ ವೃಂದ, ವಿಲಯದವರು, ಊರವರು ಉಪಸ್ಥಿತರಿದ್ದರು.

ಸಂಜೆ 4.45 ಕ್ಕೆ ಏಕಾದಶ ರುದ್ರಾಭಿಷೇಕ, ನಿತ್ಯಪೂಜೆ, ದೈವಗಳಿಗೆ ಪರ್ವ, ಭಂಡಾರ ಇಳಿಸಿಕೊಡುವುದು, ರಾತ್ರಿ ಯಕ್ಷನೃತ್ಯ ಗಾನ, ವೈಭವ, , ಮಹಾರಂಗಪೂಜೆ, ಬಲಿ, ಕಟ್ಟೆ ಪೂಜೆ, ಮಂತ್ರಾಕ್ಷತೆ, ಪಿಲಿಚಾಮುಂಡಿ, ಕಲ್ಕುಡ, ಕಲ್ಲುರ್ಟಿ ದೈವಗಳಿಗೆ ನೇಮೋತ್ಸವ, ರಾತ್ರಿ ಗಮಟೆ 1.30 ರಿಂದ ಶಿವಜಾಗರಣೆ ಅಂಗವಾಗಿ ಗ್ರಾಮೀಣ ಆಟವಾದ ತೆಂಗಿನಕಾಯಿ ಕುಟ್ಟುವ ಸ್ಪರ್ಧೆ ನಡೆಯಲಿದೆ.

Related posts

ಬೆಳ್ತಂಗಡಿಯಲ್ಲಿ ಬಿ.ಎಂ.ಎಸ್ ಸಮನ್ವಯ ಸಭೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯಿಂದ ಪುದುವೆಟ್ಟು ಗ್ರಾಮದ ಬೂತ್ ಪ್ರಗತಿ ಸಭೆ

Suddi Udaya

ಅರಸಿನಮಕ್ಕಿ: ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ವಾತ್ಸಲ್ಯ ಮನೆ ನಿರ್ಮಾಣದ ಶ್ರಮದಾನ

Suddi Udaya

ಭಗವಾನ್ ಶ್ರೀ ಮಹಾವೀರ ಸ್ವಾಮಿಯ ಜನ್ಮಕಲ್ಯಾಣೋತ್ಸವ ಕಾರ್ಯಕ್ರಮ

Suddi Udaya

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ

Suddi Udaya

ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ: ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಿಎಮ್ಎಸ್

Suddi Udaya
error: Content is protected !!