22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರದ್ಧಾಕೇಂದ್ರಗಳಲ್ಲಿ “ದೇವವೃಕ್ಷ” ನೆಡುವ ಅಭಿಯಾನಕ್ಕೆ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

ಧರ್ಮಸ್ಥಳ: ನದಿ, ಗಿಡ, ಬೆಟ್ಟ, ಗುಡ್ಡ – ಹೀಗೆ ಪ್ರಕೃತಿಯಲ್ಲೇ ದೇವರ ಸ್ವರೂಪ ಕಂಡು ಆರಾಧಿಸುವ ಪರಂಪರೆ ಭಾರತೀಯರದ್ದಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.


ಅವರು ಮಾ.8 ರಂದು ಧರ್ಮಸ್ಥಳದಲ್ಲಿ ಉದ್ಯಾನದಲ್ಲಿ ರುದ್ರಾಕ್ಷಿ ಗಿಡವನ್ನು ನೆಟ್ಟು ಮೂಡುಗಿಳಿಯಾರು ಜನಸೇವಾ ಟ್ರಸ್ಟ್ ಮೂಲಕ ಧಾರ್ಮಿಕ ಶ್ರದ್ಧಾಕೇಂದ್ರಗಳಲ್ಲಿ ಅರಳಿ, ರುದ್ರಾಕ್ಷಿ, ಪಾರಿಜಾತ, ಬಿಲ್ವಪತ್ರೆ, ಶಮಿ ಮೊದಲಾದ ದೇವವೃಕ್ಷಗಳ ಗಿಡಗಳನ್ನು ನೆಡುವ ಅಭಿಯಾನಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.


ಜನಸೇವಾ ಟ್ರಸ್ಟ್ ನ ಯೋಜನೆಯನ್ನು ಅವರು ಶ್ಲಾಘಿಸಿ ಅಭಿನಂದಿಸಿದರು. ಎಲ್ಲರೂ ಆಸಕ್ತಿಯಿಂದ ಅಭಿಯಾನಕ್ಕೆ ಪ್ರೋತ್ಸಾಹಿಸಿ ಸಹಕರಿಸಬೇಕೆಂದು ಸಲಹೆ ನೀಡಿದ ಅವರು ತನ್ಮೂಲಕ ಪ್ರಕೃತಿ-ಪರಿಸರ ಸಂರಕ್ಷಣೆ ಮಾಡಿದಂತೆಯೂ ಆಗುತ್ತದೆ ಎಂದು ಹೇಳಿದರು.


ಜನಸೇವಾಟ್ರಸ್ಟ್ ಅಧ್ಯಕ್ಷ ವಸಂತ ಗಿಳಿಯಾರು, ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ, ಧನಕೀರ್ತಿ ಆರಿಗಾ, ಸಂದೀಪ್ ರೈ, ರಾಘವೇಂದ್ರ ರಾಜ್, ಜೀವನ್ ಶೆಟ್ಟಿ ಅಯೋಧ್ಯಾ, ಶರತ್ ಶೆಟ್ಟಿ, ನಿಖಿಲ್ ನಾಯಕ್  ಮತ್ತು ಸಂದೀಪ್ ದೇವ್ ಉಪಸ್ಥಿತರಿದ್ದರು.

Related posts

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕೊಪ್ಪರಿಗೆ ತುಂಬಿಸುವ ಕಾರ್ಯಕ್ರಮ

Suddi Udaya

ಕೊಯ್ಯೂರು ಸಹಕಾರ ಸಂಘದ ನವೋದಯ ಸ್ವಸಹಾಯ ಗುಂಪು ಸದಸ್ಯರಿಗೆ ಮಾಹಿತಿ ಕಾರ್ಯಾಗಾರ, ಬ್ಯಾಗ್ ವಿತರಣೆ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಪುತ್ತೂರು ಶಾಸಕ ಅಶೋಕ್ ರೈ ಗೆ ಆಮಂತ್ರಣ

Suddi Udaya

ಉಜಿರೆ-ಪೆರಿಯಶಾಂತಿ ಸ್ಪರ್ ರಸ್ತೆಗೆ ಶೀಘ್ರವೇ ಶಿಲಾನ್ಯಾಸ: ಕುಪ್ಪೆಟ್ಟಿ-ಉಪ್ಪಿನಂಗಡಿ ರಸ್ತೆ ದುರಸ್ತಿಗೆ 7 ಬಾರಿ ಸರಕಾರಕ್ಕೆ ಮನವಿ: ಶಾಸಕ ಹರೀಶ್ ಪೂಂಜ ಪತ್ರಿಕಾಗೋಷ್ಠಿ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸಂಭ್ರಮದ ಜಾತ್ರೋತ್ಸವ

Suddi Udaya

ಸಾಹಿತ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಬಿ.ಕಾಂ ವಿಭಾಗಕ್ಕೆ ಪ್ರಶಸ್ತಿ

Suddi Udaya
error: Content is protected !!