25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರದ್ಧಾಕೇಂದ್ರಗಳಲ್ಲಿ “ದೇವವೃಕ್ಷ” ನೆಡುವ ಅಭಿಯಾನಕ್ಕೆ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

ಧರ್ಮಸ್ಥಳ: ನದಿ, ಗಿಡ, ಬೆಟ್ಟ, ಗುಡ್ಡ – ಹೀಗೆ ಪ್ರಕೃತಿಯಲ್ಲೇ ದೇವರ ಸ್ವರೂಪ ಕಂಡು ಆರಾಧಿಸುವ ಪರಂಪರೆ ಭಾರತೀಯರದ್ದಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.


ಅವರು ಮಾ.8 ರಂದು ಧರ್ಮಸ್ಥಳದಲ್ಲಿ ಉದ್ಯಾನದಲ್ಲಿ ರುದ್ರಾಕ್ಷಿ ಗಿಡವನ್ನು ನೆಟ್ಟು ಮೂಡುಗಿಳಿಯಾರು ಜನಸೇವಾ ಟ್ರಸ್ಟ್ ಮೂಲಕ ಧಾರ್ಮಿಕ ಶ್ರದ್ಧಾಕೇಂದ್ರಗಳಲ್ಲಿ ಅರಳಿ, ರುದ್ರಾಕ್ಷಿ, ಪಾರಿಜಾತ, ಬಿಲ್ವಪತ್ರೆ, ಶಮಿ ಮೊದಲಾದ ದೇವವೃಕ್ಷಗಳ ಗಿಡಗಳನ್ನು ನೆಡುವ ಅಭಿಯಾನಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.


ಜನಸೇವಾ ಟ್ರಸ್ಟ್ ನ ಯೋಜನೆಯನ್ನು ಅವರು ಶ್ಲಾಘಿಸಿ ಅಭಿನಂದಿಸಿದರು. ಎಲ್ಲರೂ ಆಸಕ್ತಿಯಿಂದ ಅಭಿಯಾನಕ್ಕೆ ಪ್ರೋತ್ಸಾಹಿಸಿ ಸಹಕರಿಸಬೇಕೆಂದು ಸಲಹೆ ನೀಡಿದ ಅವರು ತನ್ಮೂಲಕ ಪ್ರಕೃತಿ-ಪರಿಸರ ಸಂರಕ್ಷಣೆ ಮಾಡಿದಂತೆಯೂ ಆಗುತ್ತದೆ ಎಂದು ಹೇಳಿದರು.


ಜನಸೇವಾಟ್ರಸ್ಟ್ ಅಧ್ಯಕ್ಷ ವಸಂತ ಗಿಳಿಯಾರು, ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ, ಧನಕೀರ್ತಿ ಆರಿಗಾ, ಸಂದೀಪ್ ರೈ, ರಾಘವೇಂದ್ರ ರಾಜ್, ಜೀವನ್ ಶೆಟ್ಟಿ ಅಯೋಧ್ಯಾ, ಶರತ್ ಶೆಟ್ಟಿ, ನಿಖಿಲ್ ನಾಯಕ್  ಮತ್ತು ಸಂದೀಪ್ ದೇವ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ ಕೇವಲ ಎರಡೇ ದಿನಗಳು ಬಾಕಿ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya

ವೇಣೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಆದಿವಾಸಿ ಸಮುದಾಯದ ವಿವಿಧ ಬೇಡಿಕೆಗಳನ್ನುಈಡೇರಿಸುವಂತೆ ವಿ.ಪ. ಶಾಸಕ ಬಿ.ಕೆ ಹರಿಪ್ರಸಾದ್ ರವರಿಗೆ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯಿಂದ ಮನವಿ

Suddi Udaya

ಬೆಳ್ತಂಗಡಿ : ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಮೂರನೇ ಬಾರಿ ಮೆಡಿಕಲ್ ಟೆಸ್ಟ್

Suddi Udaya

ಬೆಳ್ತಂಗಡಿ: ಸ್ವಯಂ ಜನಗಣತಿ ಪ್ರಾರಂಭ

Suddi Udaya
error: Content is protected !!