July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

5, 8, 9 ಮತ್ತು 11ನೇ ತರಗತಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು: 5, 8, 9 ಮತ್ತು 11ನೇ ತರಗತಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಹೈಕೋರ್ಟ್ ಆದೇಶ ನೀಡಿದೆ.

ರಾಜ್ಯ ಪಠ್ಯಕ್ರಮದ ಶಾಲೆಗಳ 5, 8, 9 ಹಾಗೂ 11ನೇ ತರಗತಿಗಳ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದ ಮೌಲ್ಯಮಾಪನದ ಬದಲಾಗಿ ರಾಜ್ಯ ಮಟ್ಟದ ಮಂಡಳಿ (ಬೋರ್ಡ್) ಪರೀಕ್ಷೆ ನಡೆಸಲು ತೀರ್ಮಾನಿಸಿ ರಾಜ್ಯ ಸರ್ಕಾರ ಈ ಹಿಂದೆ ಸುತ್ತೋಲೆ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಅನುದಾನರಹಿತ ಖಾಸಗಿ ಶಾಲೆಗಳ ಒಕ್ಕೂಟ ಅರ್ಜಿ ಸಲ್ಲಿಸಿತ್ತು. ಬುಧವಾರ ಈ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ನ್ಯಾಯಪೀಠ, ಬೋರ್ಡ್ ಪರೀಕ್ಷೆ ರದ್ದುಗೊಳಿಸಿ ತೀರ್ಪು ಪ್ರಕಟಿಸಿತ್ತು.

ರಾಜ್ಯ ಪಠ್ಯಕ್ರಮ ಇರುವ ಶಾಲೆಗಳ 5, 8, 9 ಮತ್ತು 11 ತರಗತಿಯ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ರದ್ದುಪಡಿಸಿರುವ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ದ್ವಿಸದಸ್ಯ ಪೀಠಕ್ಕೆ ಮೆಲ್ಮನವಿ ಸಲ್ಲಿಸಿತ್ತು. ಗುರುವಾರ ಕಲಾಪ ಪ್ರಾರಂಭವಾಗುತ್ತಿದ್ದಂತೆ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಟಿ.ಜೆ.ಶಿವಶಂಕರೇಗೌಡ ಪೀಠದ ಎದುರು ಹೆಚ್ಚುವರಿ ಅಡ್ವಕೇಟ್ ಜನರಲ್ ವಿಕ್ರಮ್ ಹುಯಿಲಗೋಳ್ ಅವರು ಈ ವಿಷಯ ಪ್ರಸ್ತಾಪಿಸಿದ್ದರು.

Related posts

ದ.ಕ.ಜಿಲ್ಲಾ ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ನಿರ್ದೇಶಕರಾಗಿ ಗುರುಪ್ರಸಾದ್ ಆಯ್ಕೆ

Suddi Udaya

ಎಳನೀರಿನಲ್ಲಿ ಮೊಟ್ಟಮೊದಲ ಸಾಹಿತ್ಯ ಕಾರ್ಯಕ್ರಮ: ಸಾಹಿತ್ಯ ಮತ್ತು ಬದುಕು ವಿಷಯದ ಕುರಿತು ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಾಳೆಕುದ್ರು ಮಠದ ಪೂಜ್ಯಶ್ರೀ ವಾಸುದೇವ ಸದಾಶಿವ ಆಶ್ರಮ ಮಹಾಸ್ವಾಮೀಜಿ ಭೇಟಿ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಗ್ರಾಮೀಣ ಬ್ಲಾಕ್ ಗೆ ಜಿಲ್ಲಾ ಅಲ್ಪಸಂಖ್ಯಾತ ಘಟಕದಿಂದ ಚುನಾವಣಾ ಉಸ್ತುವಾರಿಯಾಗಿ ಮಹಮ್ಮದ್ ಹನೀಫ್ ಉಜಿರೆ ನೇಮಕ

Suddi Udaya

ಮೀಯಾರು ಕೆಮ್ಮಟ್ಟೆಯಲ್ಲಿ ಎಸ್.ಕೆ.ಡಿ.ಆರ್.ಡಿ.ಪಿ ಟ್ರಸ್ಟ್ ವತಿಯಿಂದ ನೀರು ಉಳಿಸಿ ಭವಿಷ್ಯದ ನೀರು ಇಂದಿನ ಕಾಳಜಿ ಅಭಿಯಾನ

Suddi Udaya

ಅರಸಿನಮಕ್ಕಿ: ಪಡ್ಡಾಯಿಬೆಟ್ಟು ನಿವಾಸಿ ನಿವೃತ್ತ ಶಿಕ್ಷಕ ತಿರುಮಲೇಶ್ವರ ಭಟ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!