37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

5, 8, 9 ಮತ್ತು 11ನೇ ತರಗತಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು: 5, 8, 9 ಮತ್ತು 11ನೇ ತರಗತಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಹೈಕೋರ್ಟ್ ಆದೇಶ ನೀಡಿದೆ.

ರಾಜ್ಯ ಪಠ್ಯಕ್ರಮದ ಶಾಲೆಗಳ 5, 8, 9 ಹಾಗೂ 11ನೇ ತರಗತಿಗಳ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದ ಮೌಲ್ಯಮಾಪನದ ಬದಲಾಗಿ ರಾಜ್ಯ ಮಟ್ಟದ ಮಂಡಳಿ (ಬೋರ್ಡ್) ಪರೀಕ್ಷೆ ನಡೆಸಲು ತೀರ್ಮಾನಿಸಿ ರಾಜ್ಯ ಸರ್ಕಾರ ಈ ಹಿಂದೆ ಸುತ್ತೋಲೆ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಅನುದಾನರಹಿತ ಖಾಸಗಿ ಶಾಲೆಗಳ ಒಕ್ಕೂಟ ಅರ್ಜಿ ಸಲ್ಲಿಸಿತ್ತು. ಬುಧವಾರ ಈ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ನ್ಯಾಯಪೀಠ, ಬೋರ್ಡ್ ಪರೀಕ್ಷೆ ರದ್ದುಗೊಳಿಸಿ ತೀರ್ಪು ಪ್ರಕಟಿಸಿತ್ತು.

ರಾಜ್ಯ ಪಠ್ಯಕ್ರಮ ಇರುವ ಶಾಲೆಗಳ 5, 8, 9 ಮತ್ತು 11 ತರಗತಿಯ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ರದ್ದುಪಡಿಸಿರುವ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ದ್ವಿಸದಸ್ಯ ಪೀಠಕ್ಕೆ ಮೆಲ್ಮನವಿ ಸಲ್ಲಿಸಿತ್ತು. ಗುರುವಾರ ಕಲಾಪ ಪ್ರಾರಂಭವಾಗುತ್ತಿದ್ದಂತೆ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಟಿ.ಜೆ.ಶಿವಶಂಕರೇಗೌಡ ಪೀಠದ ಎದುರು ಹೆಚ್ಚುವರಿ ಅಡ್ವಕೇಟ್ ಜನರಲ್ ವಿಕ್ರಮ್ ಹುಯಿಲಗೋಳ್ ಅವರು ಈ ವಿಷಯ ಪ್ರಸ್ತಾಪಿಸಿದ್ದರು.

Related posts

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya

ಉಜಿರೆಯಲ್ಲಿ ಚುನಾವಣಾ ಪ್ರಚಾರದ ಅಂಗವಾಗಿ ಅಸ್ಸಾಂ ಮುಖ್ಯಮಂತ್ರಿ ಡಾ. ಹಿಮಂತ್ ಬಿಸ್ವಾಸ್ ಶರ್ಮ ಬೃಹತ್ ರೋಡ್ ಶೋ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪರ ಮತ ಪ್ರಚಾರ

Suddi Udaya

ಅಂಡಿಂಜೆ: ಕಾರು ಡಿಕ್ಕಿ ಹೊಡೆದು 5 ವರ್ಷದ ಬಾಲಕ ಸಾವು

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಪಟ್ರಮೆ ಗ್ರಾಮ ಪಂಚಾಯತ್ ಬಳಿ ಬಿಜೆಪಿ ಪ್ರತಿಭಟನೆ

Suddi Udaya

ಶ್ರೀ ಕೃಷ್ಣ ಭಜನಾ ಮಂದಿರದ ಸಭಾ ಭವನದ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧ.ಗ್ರಾ. ಯೋ. ವತಿಯಿಂದ ರೂ.2ಲಕ್ಷ ಸಹಾಯಧನ

Suddi Udaya

ಕುಣಿತ ಭಜನಾ ತರಬೇತಿ ಶಿಬಿರಕ್ಕೆ ಭಜನಾ ಪರಿಷತ್ ರಾಜ್ಯಾಧ್ಯಕ್ಷರ ಭೇಟಿ

Suddi Udaya
error: Content is protected !!