September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ನ ಕಂಪ್ಯೂಟರ್ ಸೈನ್ಸ್ ವಿಭಾಗದ ವತಿಯಿಂದ ಟೆಕ್ ವ್ಯುಹ್ ಕಾರ್ಯಕ್ರಮ

ಉಜಿರೆ: ಎಸ್ ಡಿ ಎಮ್ ಪಾಲಿಟೆಕ್ನಿಕ್ ನ ಕಂಪ್ಯೂಟರ್ ಸೈನ್ಸ್ ವಿಭಾಗದ ವತಿಯಿಂದ ಟೆಕ್ ವ್ಯುಹ್ (Tech Vyuh) ಕಾರ್ಯಕ್ರಮವು ಮಾ.6ರಂದು ಆಯೋಜಿಸಲಾಗಿತ್ತು .

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಡಾ. ಹೆಚ್ ಮನೋಜ್ ಟಿ ಗಡಿಯಾರ್ ಅವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಮೂರು ತತ್ವಗಳಾದ ನಿರ್ದೇಶನ , ಪ್ರಯತ್ನ ಮತ್ತು ಶಿಸ್ತನ್ನು ಅನುಸರಿಸುವ ಮೂಲಕ ಜೀವನದಲ್ಲಿ ಹೇಗೆ ಯಶಸ್ವಿಯಾಗಬಹುದು ಎಂಬುದರ ಕುರಿತು ಮಾತನಾಡಿದರು.

ಕಾರ್ಯಕ್ರಮದ ಗೌರವ ಅತಿಥಿಯಾದ ಕಾಲೇಜಿನ ಹಳೆ ವಿದ್ಯಾರ್ಥಿ ಶಶಿಕಾಂತ್ ಮಾತನಾಡಿ ವಿದ್ಯಾರ್ಥಿಗಳಿಗೆ ಉನ್ನತ ಅಧ್ಯಯನವನ್ನು ಮುಂದುವರಿಸಿ ಹಾಗೂ ಭವಿಷ್ಯಕ್ಕಾಗಿ ಸೂಕ್ತವಾದ ಶೈಕ್ಷಣಿಕ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಹೇಳಿದರು.


ಕಾರ್ಯಕ್ರಮದಲ್ಲಿ ಎಸ್ ಡಿ ಎಂ ನ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಸೋಮಶೇಖರ್ ಅತಿಥಿಯಾಗಿ ಆಗಮಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್, ವಿಭಾಗದ ಮುಖ್ಯಸ್ಥರಾದ ದಿನೇಶ್ ಹಾಗೂ ಕಾಲೇಜಿನ ವ್ಯವಸ್ಥಾಪಕರಾದ ಚಂದ್ರನಾಥ್ ಜೈನ್ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಕಾರ್ಯಕ್ರಮವನ್ನು ವಿದ್ಯಾರ್ಥಿಯಾದ ಹನಿಶ್ ಸ್ವಾಗತಿಸಿ, ಸ್ಫೂರ್ತಿಯವರು ಧನ್ಯವಾದವಿತ್ತರು ಹಾಗೂ ವಿದ್ಯಾರ್ಥಿನಿ ಪುನೀತ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ ಅನುಗ್ರಹ ಆಂ.ಮಾ. ಶಾಲೆಯಲ್ಲಿ ಕಬ್ಸ್, ಬುಲ್ ಬುಲ್, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಂದ ಚಿಂತನಾ ದಿನಾಚರಣೆ

Suddi Udaya

ಎ.22: ಸಾವ್ಯದಲ್ಲಿ 12 ನೇ ವರ್ಷದ ಸಾಮೂಹಿಕ ಶ್ರೀ ಶನಿಪೂಜೆ

Suddi Udaya

ರಾಷ್ಟ್ರೀಯ ಐಸ್ ಹಾಕಿ ಪದಕ ವಿಜೇತ ನಿಶ್ಕ್ ಹರೀಶ್ ಸಾಲ್ಯಾನ್‌ಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮದ ವೀಕ್ಷಣೆ

Suddi Udaya

ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ಸಾರ್ಟಿಸಿ ಬಸ್ ಮಂಜೂರು – ಶಾಸಕರ ಶಿಫಾರಸ್ಸಿನಂತೆ ಬಸ್ಸು ಮಂಜೂರಾಗಿದ್ದರೆ, ಅವರು ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ- ಬಸ್ಸು ಮಂಜೂರು ಮಾಡಿಸಿದ್ದು, ನಾನೇ ಎಂದು ನಾನು ಪ್ರಮಾಣ ಮಾಡುತ್ತೇನೆ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಕೆ. ವಸಂತ ಬಂಗೇರ ಸವಾಲು

Suddi Udaya

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದ ಚಿನ್ಮಯ್ ಗೆ ಡಿ ವೀರೇಂದ್ರ ಹೆಗ್ಗಡೆ ದಂಪತಿಗಳು, ಹಾಗೂ ಡಿ. ಹರ್ಷೇಂದ್ರ ಕುಮಾರ್ ರವರಿಂದ ಅಭಿನಂದನೆ

Suddi Udaya
error: Content is protected !!