September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ

ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಶ್ರೀ ಮಂಜುಳೇಶ ದೇವರ ಸನ್ನಿಧಿಯಲ್ಲಿ  ಮಹಾ ಶಿವರಾತ್ರಿ ಉತ್ಸವವು  ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯರ ನೇತೃತ್ವದಲ್ಲಿ ಅರ್ಚಕ ವೇದಮೂರ್ತಿ ಶ್ರೀನಿವಾಸ  ಹೊಳ್ಳರ ಧಾರ್ಮಿಕ  ವಿಧಿಗಳೊಂದಿಗೆ  ಮಾ 8 ರಂದು  ವಿವಿಧ ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ  ನಡೆಯಿತು.

ಪೂರ್ವಾಹ್ನ  ಶ್ರೀ ಮಂಜುಳೇಶ ದೇವರ ಸನ್ನಿಧಿಯಲ್ಲಿ ವೈದಿಕರಿಂದ ಸಾಮೂಹಿಕ ರುದ್ರ ಪಾರಾಯಣ,ಶ್ರೀ ಮಂಜುಳೇಶ ದೇವರಿಗೆ ಶತರುದ್ರಾಭಿಷೇಕ ಹಾಗು ಮದ್ಯಾಹ್ನ ಮಹಾಪೂಜೆ ನಡೆಯಿತು . ಶಾಲಾ, ಕಾಲೇಜು ವಿದ್ಯಾರ್ಥಿಗಳು,ಊರ ಪರಊರ ಭಕ್ತಾದಿಗಳು ಮತ್ತು ಧರ್ಮಸ್ಥಳ ಪಾದಯಾತ್ರಿಗಳು  ಅಧಿಕ ಸಂಖ್ಯೆಯಲ್ಲಿ  ಬಂದು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.   

ಸಂಜೆ   ದೇವಸ್ಥಾನ ಮುಂಭಾಗದ ವೇದಿಕೆಯಲ್ಲಿ ಉಜಿರೆಯ ಶ್ರೀ ಜನಾರ್ದನ ಸ್ವಾಮಿ ಭಗಿನಿ ಭಜನಾ ಮಂಡಳಿ,ಶ್ರೀ  ಮಹಮ್ಮಾಯಿ ಭಜನಾ ಮಂಡಳಿ,ಶ್ರೀ ಛತ್ರಪತಿ ಶಿವಾಜಿ ಕುಣಿತ ಭಜನಾ ಮಂಡಳಿ,ಶ್ರೀ ಮಾತೃ ಮಂಡಳಿ,ಶ್ರೀ ಕೃಷ್ಣ ಭಜನಾ ಮಂಡಳಿ ಮುಂಡತ್ತೋಡಿ, ಮಾಚಾರು ಶ್ರೀ ಲಕ್ಷ್ಮೀಜನಾರ್ದನ ಭಜನಾ ಮಂಡಳಿ,ವಿನಾಯಕನಗರ ಶ್ರೀ ಸಿದ್ಧಿವಿನಾಯಕ ಭಜನಾ ಮಂಡಳಿ,ಉಜಿರೆಯ ಶ್ರೀ  ಮಾರಿಕಾಂಬಾ ಭಜನಾ ಮಂಡಳಿ ಹಾಗು ಬೆಳ್ತಂಗಡಿ ಶ್ರೀ ವಿವೇಕ ಜಾಗೃತಿ ಬಳಗದವರಿಂದ ನಿರಂತರ ಭಜನಾ ಕಾರ್ಯಕ್ರಮ  ನಡೆಯಲಿದೆ.                                                           

Related posts

ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ಪುದುವೆಟ್ಟು ವಿ. ಹಿಂ. ಪ. ಭಜರಂಗದಳ ವತಿಯಿಂದ ಶ್ರೀ ವನದುರ್ಗ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya

ಪುಂಜಾಲಕಟ್ಟೆ-ಚಾರ್ಮಾಡಿ ಭರದಿಂದ ಸಾಗುತ್ತಿರುವ ಹೆದ್ದಾರಿ ಅಭಿವೃದ್ಧಿ ಕಾಮಗಾರಿ

Suddi Udaya

ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಪ್ರವೀಣ್ ಕುಮಾರ್ ಹೆಚ್.ಎಸ್ ಆಯ್ಕೆ

Suddi Udaya

ಬೆಳ್ತಂಗಡಿ: ಶಶಾಂಕ ಕುಳಮರ್ವ ರವರಿಗೆ ಸುರತ್ಕಲ್ ಎನ್.ಐ.ಟಿ.ಕೆ. ಯಿಂದ ಪಿ.ಎಚ್.ಡಿ. ಪದವಿ

Suddi Udaya

ತೋಟತ್ತಾಡಿ: ನದಿಗೆ ಸ್ನಾನಕ್ಕೆ ತೆರಳಿದ ಜೈಸನ್ ಪಿ.ಎಂ ರವರ ಶವ ಪತ್ತೆ

Suddi Udaya

ಬಾರ್ಯ: ಸರಳಿಕಟ್ಟೆ ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಬ್ಬ ಆಚರಣೆ

Suddi Udaya
error: Content is protected !!