23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ

ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಶ್ರೀ ಮಂಜುಳೇಶ ದೇವರ ಸನ್ನಿಧಿಯಲ್ಲಿ  ಮಹಾ ಶಿವರಾತ್ರಿ ಉತ್ಸವವು  ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯರ ನೇತೃತ್ವದಲ್ಲಿ ಅರ್ಚಕ ವೇದಮೂರ್ತಿ ಶ್ರೀನಿವಾಸ  ಹೊಳ್ಳರ ಧಾರ್ಮಿಕ  ವಿಧಿಗಳೊಂದಿಗೆ  ಮಾ 8 ರಂದು  ವಿವಿಧ ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ  ನಡೆಯಿತು.

ಪೂರ್ವಾಹ್ನ  ಶ್ರೀ ಮಂಜುಳೇಶ ದೇವರ ಸನ್ನಿಧಿಯಲ್ಲಿ ವೈದಿಕರಿಂದ ಸಾಮೂಹಿಕ ರುದ್ರ ಪಾರಾಯಣ,ಶ್ರೀ ಮಂಜುಳೇಶ ದೇವರಿಗೆ ಶತರುದ್ರಾಭಿಷೇಕ ಹಾಗು ಮದ್ಯಾಹ್ನ ಮಹಾಪೂಜೆ ನಡೆಯಿತು . ಶಾಲಾ, ಕಾಲೇಜು ವಿದ್ಯಾರ್ಥಿಗಳು,ಊರ ಪರಊರ ಭಕ್ತಾದಿಗಳು ಮತ್ತು ಧರ್ಮಸ್ಥಳ ಪಾದಯಾತ್ರಿಗಳು  ಅಧಿಕ ಸಂಖ್ಯೆಯಲ್ಲಿ  ಬಂದು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.   

ಸಂಜೆ   ದೇವಸ್ಥಾನ ಮುಂಭಾಗದ ವೇದಿಕೆಯಲ್ಲಿ ಉಜಿರೆಯ ಶ್ರೀ ಜನಾರ್ದನ ಸ್ವಾಮಿ ಭಗಿನಿ ಭಜನಾ ಮಂಡಳಿ,ಶ್ರೀ  ಮಹಮ್ಮಾಯಿ ಭಜನಾ ಮಂಡಳಿ,ಶ್ರೀ ಛತ್ರಪತಿ ಶಿವಾಜಿ ಕುಣಿತ ಭಜನಾ ಮಂಡಳಿ,ಶ್ರೀ ಮಾತೃ ಮಂಡಳಿ,ಶ್ರೀ ಕೃಷ್ಣ ಭಜನಾ ಮಂಡಳಿ ಮುಂಡತ್ತೋಡಿ, ಮಾಚಾರು ಶ್ರೀ ಲಕ್ಷ್ಮೀಜನಾರ್ದನ ಭಜನಾ ಮಂಡಳಿ,ವಿನಾಯಕನಗರ ಶ್ರೀ ಸಿದ್ಧಿವಿನಾಯಕ ಭಜನಾ ಮಂಡಳಿ,ಉಜಿರೆಯ ಶ್ರೀ  ಮಾರಿಕಾಂಬಾ ಭಜನಾ ಮಂಡಳಿ ಹಾಗು ಬೆಳ್ತಂಗಡಿ ಶ್ರೀ ವಿವೇಕ ಜಾಗೃತಿ ಬಳಗದವರಿಂದ ನಿರಂತರ ಭಜನಾ ಕಾರ್ಯಕ್ರಮ  ನಡೆಯಲಿದೆ.                                                           

Related posts

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 2024-25 ಸಾಲಿನ ಅಂತಿಮ ವರ್ಷದ ಪರೀಕ್ಷೆ: ಉಜಿರೆ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿಗೆ ಸತತ ಮೂರನೇ ಬಾರಿಗೆ ಶೇಕಡಾ 100 ಫಲಿತಾಂಶ

Suddi Udaya

ಎಕ್ಸಲೆ೦ಟ್ ಮೂಡುಬಿದಿರೆ ನೀಟ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

Suddi Udaya

ಕಡಿರುದ್ಯಾವರ: ಕಾನರ್ಪ ಶ್ರೀ ರಾಮಾಂಜನೇಯ ದೇವಸ್ಥಾನದಲ್ಲಿ ಸತ್ಯನಾರಾಯಣ ಪೂಜೆ ಹಾಗೂ ಭಜನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಎಸ್‌ಡಿಎಂ ಶಾಲೆಯಲ್ಲಿ ಸಮ್ಮರ್ ಸ್ಪಾರ್ಕ್ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಭಾರತೀಯ ಸೇನೆಗೆ ನೇಮಕಗೊಂಡಿರುವ ಮನೋಹರ್ ಪೂಜಾರಿಯವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಗೌರವಾರ್ಪಣೆ

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿ ಸಮಿತಿಯ ಜೊತೆಕಾರ್ಯದರ್ಶಿ ನಝೀರ್ ಸುಣ್ಣಲಡ್ಡ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!