March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿ

ಧರ್ಮಸ್ಥಳದಲ್ಲಿ ಅಹೋರಾತ್ರಿ ಸಾಮೂಹಿಕ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ

ಧರ್ಮಸ್ಥಳ: ನೀನೊಲಿದರೆ ಕೊರಡು ಕೊನರುವುದು, ವಿಷವೂ ಅಮೃತವಾಗುವುದು ಎಂಬಂತೆ ಪರಿಶುದ್ಧ ಮನದಿಂದ ಶಿವರಾತ್ರಿಯ ಶುಭರಾತ್ರಿಯಲ್ಲಿ ಶಿವನಾಮ ಸ್ಮರಣೆ ಮಾಡಿದರೆ ಸಕಲದೋಷಗಳ ಪರಿಹಾರವಾಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಅಹೋರಾತ್ರಿ ಶಿವನಾಮ ಪಂಚಾಕ್ಷರಿ ಪಠಣಕ್ಕೆ ಚಾಲನೆ ನೀಡಿ ಮಾತನಾಡಿದರು.ನಮ್ಮ ಎಲ್ಲಾ ಮನೋವಿಕಾರಗಳನ್ನು ದೂರಮಾಡಿ ಸಕಲ ಜೀವಿಗಳಿಗೆ ಲೇಸನ್ನೆ ಬಯಸಿ ಉನ್ನತ ಸಾಧನೆ ಮಾಡಬೇಕು. ಶಿವನ ಜೋತೆಗೆ ಶಿವಭಕ್ತರ ಸೇವೆ ಮಾಡಿದರೂ ಪುಣ್ಯ ಬರುತ್ತದೆ ಎಂದು ಅವರು ಹೇಳಿದರು.

ಮಹಿಳೆಯರನ್ನು ಗೌರವದಿಂದ ಕಾಣಬೇಕು. ಅವರು ನೊಂದು ಕಣ್ಣೀರು ಹಾಕಿದರೂ ಅದು ಶಾಪವಾಗಿ ಪರಿಣಮಿಸುತ್ತದೆ. ಹಿತ-ಮಿತ, ಸುಮಧುರ ಮಾತುಗಳನ್ನಾಡಬೇಕು. ಮಾತೇ ಮಾಣಿಕ್ಯ. ಮಾತು ಬಿಡ ಮಂಜುನಾಥ ಎಂಬ ಮಾತನ್ನು ಎಲ್ಲರೂ ಸದಾ ನೆನಪಿಟ್ಟುಕೊಳ್ಳಬೇಕು ಎಂದು ಅವರು ಕಿವಿಮಾತು ಹೇಳಿದರು.ಮನ, ವಚನ, ಕಾಯದಿಂದ ಪರಿಶುದ್ಧ, ದೃಢಸಂಕಲ್ಪ ಮತ್ತು ಪರಿಶುದ್ಧ ಭಕ್ತಿಯಿಂದ ದೇವರ ಅನುಗ್ರಹಕ್ಕೆ ಪಾತ್ರರಾಗಿ ಉನ್ನತ ಸಾಧನೆ ಮಾಡಬಹುದು. ಶಿವರಾತ್ರಿ ಒಂದೇ ರಾತ್ರಿಗೆ ಸೀಮಿತವಾಗದೆ ಪ್ರತಿ ರಾತ್ರಿಯೂ ಶಿವರಾತ್ರಿಯಾಗಿ, ಶುಭರಾತ್ರಿಯಾಗಿ ಎಲ್ಲೆಲ್ಲೂ ಸುಖ-ಶಾಂತಿ, ನೆಮ್ಮದಿ ನೆಲೆಸಲೆಂದು ಅವರು ಹಾರೈಸಿದರು.

ಹೇಮಾವತಿ ವೀ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್‌ಮ, ಸುಪ್ರಿಯಾ ಹರ್ಷೇಂದ್ರ ಕುಮಾರ್ ಪಾದಯಾತ್ರೆಯ ರೂವಾರಿ ಹನುಮಂತಪ್ಪ ಗುರೂಜಿ, ಮರಿಯಪ್ಪ ಉಪಸ್ಥಿತರಿದ್ದರು.

ಡಾ. ಪವನ್ ಸಂಪಾದಿಸಿದ “ವೈದ್ಯಾಮೃತ” ಕೃತಿಯನ್ನು ಬಿಡುಗಡೆಗೊಳಿಸಲಾಯಿತು.ಬೆಂಗಳೂರಿನ ಭಕ್ತರಿಂದ ಸೇವೆ: ಶಿವರಾತ್ರಿ ಪ್ರಯುಕ್ತ ಬೆಂಗಳೂರಿನ ಹಲವಾರು ಸಂಘಟನೆಗಳು ಸೇರಿ ಶುಕ್ರವಾರ ರಾತ್ರಿ ಭಕ್ತರಿಗೆ ಉಪಾಹಾರ ನೀಡಿದರು.

Related posts

ಬಿಗ್‌ಬಾಸ್ ಕನ್ನಡ ಸೀಸನ್ 11 ರ ಟ್ರೋಫಿ ಮುಡಿಗೇರಿಸಿಕೊಂಡ ಹಾವೇರಿಯ ಹಳ್ಳಿ ಹೈದ ಹನುಮಂತು

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗೀತಾ ಗಾಯನ ಸ್ಪರ್ಧೆ

Suddi Udaya

ಹ್ಯಾಂಡ್ ಬಾಲ್ ಪಂದ್ಯಾಟ: ಸಂತ ತೆರೇಸಾ ಸಂಸ್ಥೆಯ ವಿದ್ಯಾರ್ಥಿಗಳ ಅದ್ಭುತ ಸಾಧನೆ, ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಕ್ಯಾಲೆಂಡರ್ ಬಿಡುಗಡೆ

Suddi Udaya

ಮುಗೇರಡ್ಕ ಮೂವರು ದೈವಗಳ ದೈವಸ್ಥಾನದ ವಾರ್ಷಿಕ ನೇಮೋತ್ಸವ

Suddi Udaya

ಕೆನರಾ ಸ್ಟೀಲ್ ಇಂಡಸ್ಟ್ರೀಸ್‌ನ ಸಂಸ್ಥೆ ಪಣೆಜಾಲುವಿನಲ್ಲಿ ವಿನಯ ಸ್ಟೀಲ್ & ಮೆಟಲ್ಸ್ ಶುಭಾರಂಭ

Suddi Udaya
error: Content is protected !!