September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಹಿಳಾ ದಿನಾಚರಣೆ

ಬೆಳಾಲು : ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ನಾಗಾಂಬಿಕ ಸಂಜೀವಿನಿ ಒಕ್ಕೂಟ ಬೆಳಾಲು, ಹಾಗೂ ಸ್ತ್ರೀ ಶಕ್ತಿ ಗೊಂಚಲು ಇದರ ಸಹಯೋಗದಲ್ಲಿ ಮಹಿಳಾ ದಿನಾಚರಣೆಯನ್ನು ಮಾ. 07 ರಂದು ನಡೆಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿದ್ಯಾ ಶ್ರೀನಿವಾಸ ಗೌಡ ವಹಿಸಿಕೊಂಡು ಮಹಿಳೆಯರು ಸ್ವಾಲಂಬಿ ಬದುಕು ಕಟ್ಟಿಕೊಂಡು ಸಮಾಜದಲ್ಲಿ ಉತ್ತಮ ಸ್ಥಾನಮಾನವನ್ನು ಗಳಿಸಬೇಕೆಂದು ತಿಳಿಸಿದರು. ಒಕ್ಕೂಟದ ಅಧ್ಯಕ್ಷರಾದ ಮಧುರ ಹಾಗೂ ಅತಿಥಿಗಳು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಮುಖ್ಯ ಪುಸ್ತಕ ಬರಹಗಾರರಾದ ಹರಿಣಾಕ್ಷಿ ಇವರು ಒಕ್ಕೂಟದ ವರದಿಯನ್ನು ಮಂಡಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಉಷಾ ಕಾಮತ್ ಸರಕಾರದ ವಿವಿಧ ಯೋಜನೆಗಳನ್ನು ಮಹಿಳೆಯರು ಯಾವ ರೀತಿ ಬಳಸಿಕೊಳ್ಳಬೇಕೆಂದು ತಿಳಿಸಿದರು.

ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಪ್ರತಿಮಾ ಇವರು ಎನ್ ಆರ್ ಎಲ್ ಎಂ ಯೋಜನೆಯ ಬಗ್ಗೆ ಹಾಗೂ ಸಂಘಗಳಿಗೆ ಸೇರಿ ಮಹಿಳೆಯರು ಬೇರೆ ಬೇರೆ ಕಾರ್ಯಾಚಟುವಟಿಕೆಗಳಲ್ಲಿ ಸಾಧನೆ ಮಾಡಿರುವ ಬಗ್ಗೆ ತಿಳಿಸಿದರು. ಸ್ತ್ರೀ ಶಕ್ತಿ ಮೇಲ್ವಿಚಾರಕಿಯಾದ ಅನ್ನಪೂರ್ಣ ಇವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ತಿಳಿಸಿದರು. ಈ ಸಂದರ್ಭದಲ್ಲಿ ಸ್ತ್ರೀಶಕ್ತಿ ಹಾಗೂ ಸಂಜೀವಿನಿ ಸಂಘಗಳಲ್ಲಿ ಹೆಚ್ಚು ಸಾಧನೆ ಮಾಡಿದ ಸಂಘ ಹಾಗೂ ಸದಸ್ಯರನ್ನು ಗುರುತಿಸಿ ಸನ್ಮಾನಿಸಲಾಯಿತು.

ಮಹಿಳೆಯರಿಗೆ ವಿವಿಧ ಮನೋರಂಜನ ಆಟಗಳನ್ನು ಆಯೋಜಿಸಿ ಬಹುಮಾನಗಳನ್ನು ವಿತರಣೆ ಮಾಡಲಾಯಿತು. ಸಭೆಯಲ್ಲಿ ಉಪಾಧ್ಯಕ್ಷೆ ಗೀತಾ ,ಪಂಚಾಯತ್ ಸದಸ್ಯರು, ಅಭಿವೃದ್ಧಿ ಅಧಿಕಾರಿಗಳಾದ ಲಕ್ಷ್ಮೀಬಾಯಿ , ಒಕ್ಕೂಟದ ಅಧ್ಯಕ್ಷರು ಕಾರ್ಯದರ್ಶಿ ಪದಾಧಿಕಾರಿಗಳು, ಗೊಂಚಲಿನ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು, ಬ್ಲಾಕ್ ಸೊಸೈಟಿ ಅಧ್ಯಕ್ಷೆ ನಿಶಾ, ಎಂಬಿಕೆ ಹರಿಣಾಕ್ಷಿ , ಎಲ್ ಸಿ ಆರ್ ಪಿ ವಾಣಿ, ಸರಸ್ವತಿ , ಕೃಷಿ ಸಖಿ ಸ್ವಾತಿ, ಪಶುಸಖಿ ಯಶೋಧ, ಪಂಚಾಯತ್ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯವರು, ಅಂಗನವಾಡಿ ಕಾರ್ಯಕರ್ತೆಯರು, ಸಂಘದ ಸದಸ್ಯರು ಎಂ ಎಸ್ ಡಬ್ಲ್ಯೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಶಾಲಿನಿ ಕಾರ್ಯಕ್ರಮವನ್ನು ನಿರೂಪಿಸಿ, ಲತಾ, ವಿದ್ಯಾ ಭಟ್, ಆಶಾ ಇವರ ಪ್ರಾರ್ಥಸಿ , ಕೃಷಿಸಖಿ ಸ್ವಾತಿ ಸ್ವಾಗತಿಸಿದರು. ಎಲ್ ಸಿ ಆರ್ ಪಿ ಸರಸ್ವತಿ ಧನ್ಯವಾದವಿತ್ತರು.

Related posts

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಮತದಾರ ಪಟ್ಟಿ ತೀವ್ರ ಪರಿಷ್ಕರಣೆಯ ವಿಶೇಷ ಕಾರ್ಯಾಗಾರ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ ಆಯ್ಕೆ

Suddi Udaya

ಅಪರ ಸರಕಾರಿ ವಕೀಲ ಮನೋಹರ್ ಕುಮಾರ್ ಅವರ ನೂತನ ಕಚೇರಿ ಉದ್ಘಾಟನೆ

Suddi Udaya

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ : ಎಸ್.ಡಿ ಎಂ ಕಾಲೇಜಿನ ಬಾಲಕರ ತಂಡ ರಾಜ್ಯ ಮಟಕ್ಕೆ ಆಯ್ಕೆ

Suddi Udaya

ಕನ್ಯಾಡಿ: ಶ್ರೀ ರಾಮ ಕ್ಷೇತ್ರದಲ್ಲಿ ಶ್ರೀ ಹನುಮಾನ್ ರಥೋತ್ಸವ

Suddi Udaya
error: Content is protected !!