25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.9: ಬಜಿರೆಯಲ್ಲಿ 60 ಕೆ.ಜಿ ವಿಭಾಗದ ಪುರುಷರ ಹೊನಲು ಬೆಳಕಿನ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಯಂಗ್ ಬಾಯ್ಸ್ ಟ್ರೋಫಿ

ವೇಣೂರು: ಯಂಗ್ ಬಾಯ್ಸ್ ಬಜಿರೆ ಇದರ ಸಾರಥ್ಯದಲ್ಲಿ ಯುವಶಕ್ತಿ ಬಜಿರೆ ಇದರ ಸಹಕಾರದೊಂದಿಗೆ ದ.ಕ. ಜಿಲ್ಲಾ ಮತ್ತು ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ ಇದರ ಸಹಭಾಗಿತ್ವದಲ್ಲಿ 60 ಕೆ.ಜಿ ವಿಭಾಗದ ಪುರುಷರ ಹೊನಲು ಬೆಳಕಿನ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ ಯಂಗ್ ಬಾಯ್ಸ್ ಟ್ರೋಫಿ – 2024 ಮಾ.9ರಂದು ವೇಣೂರು ಬಜಿರೆಯಲ್ಲಿ ನಡೆಯಲಿದೆ.

ಅಧ್ಯಕ್ಷತೆಯನ್ನು ವೇಣೂರು ಗ್ರಾ.ಪಂ. ಅಧ್ಯಕ್ಷ ನೇಮಯ್ಯ ಕುಲಾಲ್ ವಹಿಸಲಿದ್ದಾರೆ, ಕಾರ್ಯಕ್ರಮದ ಉದ್ಘಾಟನೆಯನ್ನು ರಾಜೇಂದ್ರ ಆಚಾರ್ಯ, ಕಲ್ಪನೆ, ಬಜಿರೆ ಹಾಗೂ ಕ್ರೀಡಾಂಗಣ ಉದ್ಘಾಟನೆಯನ್ನು ಸುರೇಶ್ ಆರಿಗ, ಪೆರ್ಮಾಣುಗುತ್ತು, ಬಜಿರೆ ವಹಿಸಲಿದ್ದಾರೆ,

ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ಹರೀಶ್ ಕುಮಾರ್, ಭಾ.ಜ.ಪಾ. ದ.ಕ. ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್ ಮರೋಡಿ, ವೇಣೂರು ಪ್ರಾ.ಕೃ.ಪ.ಸ.ಸಂಘ (ನಿ.) ಅಧ್ಯಕ್ಷ ಸುಂದರ ಹೆಗ್ಡೆ ಬಿ.ಇ., ಅಳದಂಗಡಿ ಕ್ಷೇತ್ರ ಮಾಜಿ ಜಿ.ಪಂ. ಸದಸ್ಯ ಶೇಖರ ಕುಕ್ಕೇಡಿ , ವೇಣೂರು ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ಪುಷ್ಪಾವತಿ ಡಿ. ಹಾಗೂ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಬಜಿರೆಯ ಸಕ್ರೀಯ ಸದಸ್ಯರಾದ ಯುನಿವರ್ಸಿಟಿ ಗೋಲ್ಡ್ ಮೆಡಲಿಸ್ಟ್ ಹಾಗೂ ಖೋಲೋ ಇಂಡಿಯಾ ಯೂನಿವರ್ಸಿಟಿ ಗೋಲ್ಡ್ ಮೆಡಲಿಸ್ಟ್ ಗಳಾದ ಸುಶಾಂತ್ ಶೆಟ್ಟಿ, ಶಶಾಂಕ್ ಆಚಾರ್ಯ ಹಾಗೂ ಯಕ್ಷಗಾನ ಕ್ಷೇತ್ರದಲ್ಲಿ ಸಾಧನೆಗೈದ ಸದಾಶಿವ ಕುಲಾಲ್, ಸದಾಶಿವ ಆಚಾರ್ಯ, ಶೈಕ್ಷಣೀಕ ಕ್ಷೇತ್ರದಲ್ಲಿ ದೀಪಕ್ ಹೆಗ್ಡೆ, ಕ್ರೀಡಾ ಕ್ಷೇಥ್ರ ಪ್ರಿಥ್ವಿ ಭಂಡಾರಿ ದೇರಾಜೆ, ಸಿಂಚನ್ ಎಸ್, ಸಾಕ್ಷಿತಾ ಇವರುಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

Related posts

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವೃತ್ತಿಪರ ಕೌಶಲ್ಯದ ತರಬೇತಿ ಕಾರ್ಯಾಗಾರ

Suddi Udaya

ವಕೀಲರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಮ್ ಭೇಟಿ

Suddi Udaya

ನ.10: ಬಳಂಜ -ನಾಲ್ಕೂರು – ತೆಂಕಕಾರಂದೂರು ಗ್ರಾಮದ ಪ್ರಮುಖ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸಾರ್ವಜನಿಕ ಪ್ರಥಮ ವರ್ಷದ ಕೆಸರ್ದ ಲೇಸ್ ಬಲೇ ಗೊಬ್ಬುಗ

Suddi Udaya

ವಾಲಿಬಾಲ್ ಪಂದ್ಯಾಟ: ಚಂದ್ರಶೇಖರ ಗೌಡ ಕೊಯ್ಯೂರು ದ್ವಿತೀಯ ಸ್ಥಾನ

Suddi Udaya

ಉಜಿರೆ ಶ್ರೀ ಧ.ಮಂ. ಅ. ಸೆಕೆಂಡರಿ ಶಾಲೆಯಲ್ಲಿ ಸಂಭ್ರಮದ ‘ಪ್ರಾರಂಭೋತ್ಸವ’

Suddi Udaya

ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಯಕ್ಷ ಶಿಕ್ಷಣ ಯೋಜನೆಯ ವತಿಯಿಂದ ನಿಡ್ಲೆ ಸ.ಪ್ರೌ. ಶಾಲೆಯಲ್ಲಿ ಯಕ್ಷನಾಟ್ಯ ತರಬೇತಿ ಉದ್ಘಾಟನೆ

Suddi Udaya
error: Content is protected !!