April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಉತ್ಸವ: ವಿಶೇಷ ಪೂಜೆ

ಮಿತ್ತಬಾಗಿಲು: ಇಲ್ಲಿಯ ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಉತ್ಸವವು ಶ್ರೀ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ವೇದಮೂರ್ತಿ ಪಾವಂಜೆ ವಾಗೀಶ ಶಾಸ್ತ್ರಿಯವರ ನೇತೃತ್ವದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಜರುಗಿತು.

ಬೆಳಿಗ್ಗೆ ಪಂಚವಿಂಶತಿ ಕಲಶ ಸ್ಥಾಪನೆ, ಗಣಹೋಮ, ಅಧಿವಾಸ ಹೋಮ, ತೋರಣ ಮೂಹೂರ್ತ, ರುದ್ರಾಭಿಷೇಕ, ಪಂಚವಿಂಶತಿ ಕಲಶಾಭಿಷೇಕ, ಮಹಾಪೂಜೆ, ಉತ್ಸವ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಸಾಂಸ್ಕೃತಿಕ ಕಾರ್ಯಕ್ರಮದ ವಿದ್ಯುಕ್ತ ಉದ್ಘಾಟನೆ, ಕುಣಿತ ಭಜನೆ, ನಡೆಯಿತು.

ಈ ಸಂದರ್ಭದಲ್ಲಿ ಉತ್ಸವ ಸಮಿತಿ ಅಧ್ಯಕ್ಷ ಅಶೋಕ ಗೌಡ, ಕಾರ್ಯದರ್ಶಿ ರಾಜೇಶ್ ಎನ್.ಆರ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಧನಂಜಯ ರಾವ್ ವಕೀಲರು, ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರು, ಉತ್ಸವ ಸಮಿತಿಯ ಗೌರವಾಧ್ಯಕ್ಷರು, ಪದಾಧಿಕಾರಿಗಳು, ಅರ್ಚಕ ವೃಂದ, ವಿಲಯದವರು, ಊರವರು ಉಪಸ್ಥಿತರಿದ್ದರು.

ಸಂಜೆ 4.45 ಕ್ಕೆ ಏಕಾದಶ ರುದ್ರಾಭಿಷೇಕ, ನಿತ್ಯಪೂಜೆ, ದೈವಗಳಿಗೆ ಪರ್ವ, ಭಂಡಾರ ಇಳಿಸಿಕೊಡುವುದು, ರಾತ್ರಿ ಯಕ್ಷನೃತ್ಯ ಗಾನ, ವೈಭವ, , ಮಹಾರಂಗಪೂಜೆ, ಬಲಿ, ಕಟ್ಟೆ ಪೂಜೆ, ಮಂತ್ರಾಕ್ಷತೆ, ಪಿಲಿಚಾಮುಂಡಿ, ಕಲ್ಕುಡ, ಕಲ್ಲುರ್ಟಿ ದೈವಗಳಿಗೆ ನೇಮೋತ್ಸವ, ರಾತ್ರಿ ಗಮಟೆ 1.30 ರಿಂದ ಶಿವಜಾಗರಣೆ ಅಂಗವಾಗಿ ಗ್ರಾಮೀಣ ಆಟವಾದ ತೆಂಗಿನಕಾಯಿ ಕುಟ್ಟುವ ಸ್ಪರ್ಧೆ ನಡೆಯಲಿದೆ.

Related posts

ಧರ್ಮಸ್ಥಳ ನಾರ್ಯ ದಲ್ಲಿ ಸೇತುವೆ ಕುಸಿತ

Suddi Udaya

ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ವೃಷಭ ಆರಿಗ ಮತ್ತು ಮೊಹಮ್ಮದ್ ನಝೀರ್ ನೇಮಕ

Suddi Udaya

ಮಂಗಳೂರು ಕಥೋಲಿಕ್ ಸಭಾ ವತಿಯಿಂದ ಬೆಳ್ತಂಗಡಿ ಪತ್ರಕರ್ತ ಹೆರಾಲ್ಡ್ ಪಿಂಟೊ ರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಇಂದು (ಆ.28) ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ರಾಜ್ಯಪಾಲರ ಮೇಲೆ ಪ್ರಚೋದನಕಾರಿ ಹೇಳಿಕೆ ನೀಡಿರುವ ಐವನ್ ಡಿ ಸೋಜಾ ಮೇಲೆ ದೂರು ದಾಖಲಿಸಲು ಒತ್ತಾಯಿಸಿ ರಸ್ತೆ ತಡೆ- ಬೃಹತ್ ಪ್ರತಿಭಟನೆ

Suddi Udaya

ಜ.5ರಂದು ಕೋರ್ಟುಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ನ್ಯಾಯಾಲಯ ಆದೇಶ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya
error: Content is protected !!