24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಉತ್ಸವ: ವಿಶೇಷ ಪೂಜೆ

ಮಿತ್ತಬಾಗಿಲು: ಇಲ್ಲಿಯ ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಉತ್ಸವವು ಶ್ರೀ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ವೇದಮೂರ್ತಿ ಪಾವಂಜೆ ವಾಗೀಶ ಶಾಸ್ತ್ರಿಯವರ ನೇತೃತ್ವದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಜರುಗಿತು.

ಬೆಳಿಗ್ಗೆ ಪಂಚವಿಂಶತಿ ಕಲಶ ಸ್ಥಾಪನೆ, ಗಣಹೋಮ, ಅಧಿವಾಸ ಹೋಮ, ತೋರಣ ಮೂಹೂರ್ತ, ರುದ್ರಾಭಿಷೇಕ, ಪಂಚವಿಂಶತಿ ಕಲಶಾಭಿಷೇಕ, ಮಹಾಪೂಜೆ, ಉತ್ಸವ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಸಾಂಸ್ಕೃತಿಕ ಕಾರ್ಯಕ್ರಮದ ವಿದ್ಯುಕ್ತ ಉದ್ಘಾಟನೆ, ಕುಣಿತ ಭಜನೆ, ನಡೆಯಿತು.

ಈ ಸಂದರ್ಭದಲ್ಲಿ ಉತ್ಸವ ಸಮಿತಿ ಅಧ್ಯಕ್ಷ ಅಶೋಕ ಗೌಡ, ಕಾರ್ಯದರ್ಶಿ ರಾಜೇಶ್ ಎನ್.ಆರ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಧನಂಜಯ ರಾವ್ ವಕೀಲರು, ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರು, ಉತ್ಸವ ಸಮಿತಿಯ ಗೌರವಾಧ್ಯಕ್ಷರು, ಪದಾಧಿಕಾರಿಗಳು, ಅರ್ಚಕ ವೃಂದ, ವಿಲಯದವರು, ಊರವರು ಉಪಸ್ಥಿತರಿದ್ದರು.

ಸಂಜೆ 4.45 ಕ್ಕೆ ಏಕಾದಶ ರುದ್ರಾಭಿಷೇಕ, ನಿತ್ಯಪೂಜೆ, ದೈವಗಳಿಗೆ ಪರ್ವ, ಭಂಡಾರ ಇಳಿಸಿಕೊಡುವುದು, ರಾತ್ರಿ ಯಕ್ಷನೃತ್ಯ ಗಾನ, ವೈಭವ, , ಮಹಾರಂಗಪೂಜೆ, ಬಲಿ, ಕಟ್ಟೆ ಪೂಜೆ, ಮಂತ್ರಾಕ್ಷತೆ, ಪಿಲಿಚಾಮುಂಡಿ, ಕಲ್ಕುಡ, ಕಲ್ಲುರ್ಟಿ ದೈವಗಳಿಗೆ ನೇಮೋತ್ಸವ, ರಾತ್ರಿ ಗಮಟೆ 1.30 ರಿಂದ ಶಿವಜಾಗರಣೆ ಅಂಗವಾಗಿ ಗ್ರಾಮೀಣ ಆಟವಾದ ತೆಂಗಿನಕಾಯಿ ಕುಟ್ಟುವ ಸ್ಪರ್ಧೆ ನಡೆಯಲಿದೆ.

Related posts

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ: ‘ಟೆಕ್ನೋ-ಸಾಂಸ್ಕೃತಿಕ ಉತ್ಸವ – 2026’

Suddi Udaya

ತಡ ರಾತ್ರಿ ಹಂಚು ತೆಗೆದು ದೇಗುಲದೊಳಗೆ ನುಗ್ಗಿ ದಾಂಧಲೆ

Suddi Udaya

ಗೇರುಕಟ್ಟೆ ಮನ್‌ಶರ್ ಕ್ಯಾಂಪಸ್‌ನಲ್ಲಿ ಪ.ಪೂ ವಿಜ್ಞಾನ ವಿಭಾಗ ಆರಂಭಿಸಲು ಸರಕಾರದಿಂದ ಅಧಿಕೃತ ಅನುಮೋದನೆ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ 17ನೇ ವರ್ಷದ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya

ಉಜಿರೆ: ಶ್ರೀ ಧ. ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 75ನೇ ವರ್ಷದ ಜನ್ಮದಿನಾಚರಣೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಉಪ ಕಾರ್ಯನಿರ್ವಹಣಾಧಿಕಾರಿಯಾಗಿ ಸುಂದರ ಗೌಡ ನೇಮಕ

Suddi Udaya
error: Content is protected !!