22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಉತ್ಸವ: ವಿಶೇಷ ಪೂಜೆ

ಮಿತ್ತಬಾಗಿಲು: ಇಲ್ಲಿಯ ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಉತ್ಸವವು ಶ್ರೀ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ವೇದಮೂರ್ತಿ ಪಾವಂಜೆ ವಾಗೀಶ ಶಾಸ್ತ್ರಿಯವರ ನೇತೃತ್ವದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಜರುಗಿತು.

ಬೆಳಿಗ್ಗೆ ಪಂಚವಿಂಶತಿ ಕಲಶ ಸ್ಥಾಪನೆ, ಗಣಹೋಮ, ಅಧಿವಾಸ ಹೋಮ, ತೋರಣ ಮೂಹೂರ್ತ, ರುದ್ರಾಭಿಷೇಕ, ಪಂಚವಿಂಶತಿ ಕಲಶಾಭಿಷೇಕ, ಮಹಾಪೂಜೆ, ಉತ್ಸವ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಸಾಂಸ್ಕೃತಿಕ ಕಾರ್ಯಕ್ರಮದ ವಿದ್ಯುಕ್ತ ಉದ್ಘಾಟನೆ, ಕುಣಿತ ಭಜನೆ, ನಡೆಯಿತು.

ಈ ಸಂದರ್ಭದಲ್ಲಿ ಉತ್ಸವ ಸಮಿತಿ ಅಧ್ಯಕ್ಷ ಅಶೋಕ ಗೌಡ, ಕಾರ್ಯದರ್ಶಿ ರಾಜೇಶ್ ಎನ್.ಆರ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಧನಂಜಯ ರಾವ್ ವಕೀಲರು, ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರು, ಉತ್ಸವ ಸಮಿತಿಯ ಗೌರವಾಧ್ಯಕ್ಷರು, ಪದಾಧಿಕಾರಿಗಳು, ಅರ್ಚಕ ವೃಂದ, ವಿಲಯದವರು, ಊರವರು ಉಪಸ್ಥಿತರಿದ್ದರು.

ಸಂಜೆ 4.45 ಕ್ಕೆ ಏಕಾದಶ ರುದ್ರಾಭಿಷೇಕ, ನಿತ್ಯಪೂಜೆ, ದೈವಗಳಿಗೆ ಪರ್ವ, ಭಂಡಾರ ಇಳಿಸಿಕೊಡುವುದು, ರಾತ್ರಿ ಯಕ್ಷನೃತ್ಯ ಗಾನ, ವೈಭವ, , ಮಹಾರಂಗಪೂಜೆ, ಬಲಿ, ಕಟ್ಟೆ ಪೂಜೆ, ಮಂತ್ರಾಕ್ಷತೆ, ಪಿಲಿಚಾಮುಂಡಿ, ಕಲ್ಕುಡ, ಕಲ್ಲುರ್ಟಿ ದೈವಗಳಿಗೆ ನೇಮೋತ್ಸವ, ರಾತ್ರಿ ಗಮಟೆ 1.30 ರಿಂದ ಶಿವಜಾಗರಣೆ ಅಂಗವಾಗಿ ಗ್ರಾಮೀಣ ಆಟವಾದ ತೆಂಗಿನಕಾಯಿ ಕುಟ್ಟುವ ಸ್ಪರ್ಧೆ ನಡೆಯಲಿದೆ.

Related posts

ಗುರುವಾಯನಕೆರೆ:ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ )ಕರ್ನಾಟಕ ಕೇಂದ್ರ ಕಚೇರಿ ತುಮಕೂರು ನೇತ್ರಾವತಿ ವಲಯ ಮಂಗಳೂರು:ಉಪ್ಪಿನಂಗಡಿ ತಾಲೂಕು ಶ್ರೀ ಪಾಂಡುರಂಗ ಶಾಖೆ ಗುರುವಾಯನಕೆರೆ – ವಾರ್ಷಿಕೋತ್ಸವ ವೈಭವ

Suddi Udaya

ಡಿ.19: ಗುರುವಾಯನಕೆರೆ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಮತ್ತು ಶ್ರೀ ರಾಮ ಶಿಶು ಮಂದಿರ ಅಲೆಕ್ಕಿ- ಮುಗೇರಡ್ಕ ಆಶ್ರಯದಲ್ಲಿ ಶ್ರೀ ಕೃಷ್ಣಜನ್ಮಾಷ್ಠಮಿ ಪ್ರಯುಕ್ತ ಶ್ರೀ ಬಾಲಕೃಷ್ಣ ತೊಟ್ಟಿಲ ಸಂಭ್ರಮ

Suddi Udaya

ಧರ್ಮಸ್ಥಳ: ಶ್ರೀ. ಧ.ಮಂ. ಆಂ.ಮಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕ ಹಾಗೂ ಗ್ರಾಮಾಭ್ಯುದಯ ಅನುಷ್ಠಾನ ಸಮಿತಿಯಿಂದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೆರಿಯಲ್ ರವರಿಗೆ ಗೌರವಾರ್ಪಣೆ

Suddi Udaya

ಬಂದಾರು : ಶಾಸಕ ಹರೀಶ್ ಪೂಂಜರಿಂದ ಬೈಪಾಡಿ ಸರ್ಕಲ್ ಬಳಿ ರಿಕ್ಷಾ ತಂಗುದಾಣ ಲೋಕಾರ್ಪಣೆ

Suddi Udaya
error: Content is protected !!