25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಉತ್ಸವ: ವಿಶೇಷ ಪೂಜೆ

ಮಿತ್ತಬಾಗಿಲು: ಇಲ್ಲಿಯ ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಉತ್ಸವವು ಶ್ರೀ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ವೇದಮೂರ್ತಿ ಪಾವಂಜೆ ವಾಗೀಶ ಶಾಸ್ತ್ರಿಯವರ ನೇತೃತ್ವದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಜರುಗಿತು.

ಬೆಳಿಗ್ಗೆ ಪಂಚವಿಂಶತಿ ಕಲಶ ಸ್ಥಾಪನೆ, ಗಣಹೋಮ, ಅಧಿವಾಸ ಹೋಮ, ತೋರಣ ಮೂಹೂರ್ತ, ರುದ್ರಾಭಿಷೇಕ, ಪಂಚವಿಂಶತಿ ಕಲಶಾಭಿಷೇಕ, ಮಹಾಪೂಜೆ, ಉತ್ಸವ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಸಾಂಸ್ಕೃತಿಕ ಕಾರ್ಯಕ್ರಮದ ವಿದ್ಯುಕ್ತ ಉದ್ಘಾಟನೆ, ಕುಣಿತ ಭಜನೆ, ನಡೆಯಿತು.

ಈ ಸಂದರ್ಭದಲ್ಲಿ ಉತ್ಸವ ಸಮಿತಿ ಅಧ್ಯಕ್ಷ ಅಶೋಕ ಗೌಡ, ಕಾರ್ಯದರ್ಶಿ ರಾಜೇಶ್ ಎನ್.ಆರ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಧನಂಜಯ ರಾವ್ ವಕೀಲರು, ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರು, ಉತ್ಸವ ಸಮಿತಿಯ ಗೌರವಾಧ್ಯಕ್ಷರು, ಪದಾಧಿಕಾರಿಗಳು, ಅರ್ಚಕ ವೃಂದ, ವಿಲಯದವರು, ಊರವರು ಉಪಸ್ಥಿತರಿದ್ದರು.

ಸಂಜೆ 4.45 ಕ್ಕೆ ಏಕಾದಶ ರುದ್ರಾಭಿಷೇಕ, ನಿತ್ಯಪೂಜೆ, ದೈವಗಳಿಗೆ ಪರ್ವ, ಭಂಡಾರ ಇಳಿಸಿಕೊಡುವುದು, ರಾತ್ರಿ ಯಕ್ಷನೃತ್ಯ ಗಾನ, ವೈಭವ, , ಮಹಾರಂಗಪೂಜೆ, ಬಲಿ, ಕಟ್ಟೆ ಪೂಜೆ, ಮಂತ್ರಾಕ್ಷತೆ, ಪಿಲಿಚಾಮುಂಡಿ, ಕಲ್ಕುಡ, ಕಲ್ಲುರ್ಟಿ ದೈವಗಳಿಗೆ ನೇಮೋತ್ಸವ, ರಾತ್ರಿ ಗಮಟೆ 1.30 ರಿಂದ ಶಿವಜಾಗರಣೆ ಅಂಗವಾಗಿ ಗ್ರಾಮೀಣ ಆಟವಾದ ತೆಂಗಿನಕಾಯಿ ಕುಟ್ಟುವ ಸ್ಪರ್ಧೆ ನಡೆಯಲಿದೆ.

Related posts

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಎಸ್‌ಎಂವೈಎಂ ವತಿಯಿಂದ ಪಂಚಾಯತ್‌ಗೆ ಡಸ್ಟ್‌ಬಿನ್ ವಿತರಣೆ

Suddi Udaya

ಸ್ಪರ್ಧಾತ್ಮಕ ಪರೀಕ್ಷೆ: ಕು. ಅಂಚಿತಾ ಡಿ. ಜೈನ್ ಅಂತರ್‌ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಆರಂಬೋಡಿ: ಪಾಲ್ಯ ನಿವಾಸಿ ಓಡಿ ಕೊರಗ ನಿಧನ

Suddi Udaya

ಮಲವಂತಿಗೆ ವೀರೇಶ್ವರ ಮರಾಠೆ ನಿಧನ

Suddi Udaya

ಪದ್ಮುಂಜ ಸ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಮುಗೆರೋಡಿ, ಉಪಾಧ್ಯಕ್ಷರಾಗಿ ಗೀತಾ ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿ : ಮಕ್ಕಳ ಹಕ್ಕುಗಳ ಮಾಸೋತ್ಸವ ಉದ್ಘಾಟನೆ

Suddi Udaya
error: Content is protected !!