25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರದ್ಧಾಕೇಂದ್ರಗಳಲ್ಲಿ “ದೇವವೃಕ್ಷ” ನೆಡುವ ಅಭಿಯಾನಕ್ಕೆ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

ಧರ್ಮಸ್ಥಳ: ನದಿ, ಗಿಡ, ಬೆಟ್ಟ, ಗುಡ್ಡ – ಹೀಗೆ ಪ್ರಕೃತಿಯಲ್ಲೇ ದೇವರ ಸ್ವರೂಪ ಕಂಡು ಆರಾಧಿಸುವ ಪರಂಪರೆ ಭಾರತೀಯರದ್ದಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.


ಅವರು ಮಾ.8 ರಂದು ಧರ್ಮಸ್ಥಳದಲ್ಲಿ ಉದ್ಯಾನದಲ್ಲಿ ರುದ್ರಾಕ್ಷಿ ಗಿಡವನ್ನು ನೆಟ್ಟು ಮೂಡುಗಿಳಿಯಾರು ಜನಸೇವಾ ಟ್ರಸ್ಟ್ ಮೂಲಕ ಧಾರ್ಮಿಕ ಶ್ರದ್ಧಾಕೇಂದ್ರಗಳಲ್ಲಿ ಅರಳಿ, ರುದ್ರಾಕ್ಷಿ, ಪಾರಿಜಾತ, ಬಿಲ್ವಪತ್ರೆ, ಶಮಿ ಮೊದಲಾದ ದೇವವೃಕ್ಷಗಳ ಗಿಡಗಳನ್ನು ನೆಡುವ ಅಭಿಯಾನಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.


ಜನಸೇವಾ ಟ್ರಸ್ಟ್ ನ ಯೋಜನೆಯನ್ನು ಅವರು ಶ್ಲಾಘಿಸಿ ಅಭಿನಂದಿಸಿದರು. ಎಲ್ಲರೂ ಆಸಕ್ತಿಯಿಂದ ಅಭಿಯಾನಕ್ಕೆ ಪ್ರೋತ್ಸಾಹಿಸಿ ಸಹಕರಿಸಬೇಕೆಂದು ಸಲಹೆ ನೀಡಿದ ಅವರು ತನ್ಮೂಲಕ ಪ್ರಕೃತಿ-ಪರಿಸರ ಸಂರಕ್ಷಣೆ ಮಾಡಿದಂತೆಯೂ ಆಗುತ್ತದೆ ಎಂದು ಹೇಳಿದರು.


ಜನಸೇವಾಟ್ರಸ್ಟ್ ಅಧ್ಯಕ್ಷ ವಸಂತ ಗಿಳಿಯಾರು, ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ, ಧನಕೀರ್ತಿ ಆರಿಗಾ, ಸಂದೀಪ್ ರೈ, ರಾಘವೇಂದ್ರ ರಾಜ್, ಜೀವನ್ ಶೆಟ್ಟಿ ಅಯೋಧ್ಯಾ, ಶರತ್ ಶೆಟ್ಟಿ, ನಿಖಿಲ್ ನಾಯಕ್  ಮತ್ತು ಸಂದೀಪ್ ದೇವ್ ಉಪಸ್ಥಿತರಿದ್ದರು.

Related posts

ಬಂದಾರು: ಸಂಯೋಗ ಆಯುರ್ವೇದಾಲಯ ಶುಭಾರಂಭ

Suddi Udaya

‘ವಿಕಸಿತ ಭಾರತ : ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಭಾಗವಹಿಸಲು ಉಜಿರೆ ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚರಿಗೆ ಆಹ್ವಾನ

Suddi Udaya

ಲಾಯಿಲ: ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 12 ಅಭ್ಯರ್ಥಿಗಳು ಜಯಭೇರಿ

Suddi Udaya

ಜಿಲ್ಲಾ ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಕ್ರೀಡೋತ್ಸವ: ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಗರ್ಡಾಡಿ ವಲಯದ ಮಹಿಳಾ ಜ್ಞಾನವಿಕಾಸದ ವಾರ್ಷಿಕೋತ್ಸವ

Suddi Udaya
error: Content is protected !!