July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರದ್ಧಾಕೇಂದ್ರಗಳಲ್ಲಿ “ದೇವವೃಕ್ಷ” ನೆಡುವ ಅಭಿಯಾನಕ್ಕೆ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

ಧರ್ಮಸ್ಥಳ: ನದಿ, ಗಿಡ, ಬೆಟ್ಟ, ಗುಡ್ಡ – ಹೀಗೆ ಪ್ರಕೃತಿಯಲ್ಲೇ ದೇವರ ಸ್ವರೂಪ ಕಂಡು ಆರಾಧಿಸುವ ಪರಂಪರೆ ಭಾರತೀಯರದ್ದಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.


ಅವರು ಮಾ.8 ರಂದು ಧರ್ಮಸ್ಥಳದಲ್ಲಿ ಉದ್ಯಾನದಲ್ಲಿ ರುದ್ರಾಕ್ಷಿ ಗಿಡವನ್ನು ನೆಟ್ಟು ಮೂಡುಗಿಳಿಯಾರು ಜನಸೇವಾ ಟ್ರಸ್ಟ್ ಮೂಲಕ ಧಾರ್ಮಿಕ ಶ್ರದ್ಧಾಕೇಂದ್ರಗಳಲ್ಲಿ ಅರಳಿ, ರುದ್ರಾಕ್ಷಿ, ಪಾರಿಜಾತ, ಬಿಲ್ವಪತ್ರೆ, ಶಮಿ ಮೊದಲಾದ ದೇವವೃಕ್ಷಗಳ ಗಿಡಗಳನ್ನು ನೆಡುವ ಅಭಿಯಾನಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.


ಜನಸೇವಾ ಟ್ರಸ್ಟ್ ನ ಯೋಜನೆಯನ್ನು ಅವರು ಶ್ಲಾಘಿಸಿ ಅಭಿನಂದಿಸಿದರು. ಎಲ್ಲರೂ ಆಸಕ್ತಿಯಿಂದ ಅಭಿಯಾನಕ್ಕೆ ಪ್ರೋತ್ಸಾಹಿಸಿ ಸಹಕರಿಸಬೇಕೆಂದು ಸಲಹೆ ನೀಡಿದ ಅವರು ತನ್ಮೂಲಕ ಪ್ರಕೃತಿ-ಪರಿಸರ ಸಂರಕ್ಷಣೆ ಮಾಡಿದಂತೆಯೂ ಆಗುತ್ತದೆ ಎಂದು ಹೇಳಿದರು.


ಜನಸೇವಾಟ್ರಸ್ಟ್ ಅಧ್ಯಕ್ಷ ವಸಂತ ಗಿಳಿಯಾರು, ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ, ಧನಕೀರ್ತಿ ಆರಿಗಾ, ಸಂದೀಪ್ ರೈ, ರಾಘವೇಂದ್ರ ರಾಜ್, ಜೀವನ್ ಶೆಟ್ಟಿ ಅಯೋಧ್ಯಾ, ಶರತ್ ಶೆಟ್ಟಿ, ನಿಖಿಲ್ ನಾಯಕ್  ಮತ್ತು ಸಂದೀಪ್ ದೇವ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಕೀಲರ ಸಂಘದಿಂದ ಸಚಿವ ಸತೀಶ್ ಜಾರಕಿಹೊಳಿ ಭೇಟಿ: ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆಗೆ ಆಹ್ವಾನ

Suddi Udaya

ನಿರಂತರ ಮಳೆ: ನಡ ಅಂತ್ರಾಯಪಲ್ಕೆಯ ಗುಡ್ಡ ಕುಸಿತ- ಶ್ಯಾಮ್‌ಸುಂದರ್‌ರ ಮನೆಯ ಕಂಪೌಂಡ್‌ಗೆ ಹಾನಿ

Suddi Udaya

ಉಜಿರೆ: ಧರ್ಮ ಸಂರಕ್ಷಣಾ ಯಾತ್ರೆಯ ಬಗ್ಗೆ ಸಮಾಲೋಚನೆ ಸಭೆ

Suddi Udaya

ನಡ: ಸಿಡಿಲು ಬಡಿದು ಹಾನಿ: ಸಾಬ್ ಜನ್ ರವರ ಮನೆಗೆ ಎಂ.ಎಲ್.ಸಿ. ಹರೀಶ್ ಕುಮಾರ್ ಭೇಟಿ

Suddi Udaya

ಬೆಳಾಲು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ

Suddi Udaya

ನಡ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya
error: Content is protected !!