25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ರಾಷ್ಟ್ರ ಮಟ್ಟದ ಸಾಹಿತ್ಯೋತ್ಸವದಲ್ಲಿ ವಿಜೇತರಾದವರಿಗೆ ಅಭಿನಂದನೆ

ಗೇರುಕಟ್ಟೆ: ಇಲ್ಲಿಯ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಆಂದ್ರಪ್ರದೇಶದಲ್ಲಿ ನಡೆದ ರಾಷ್ಟ್ರಮಟ್ಟದ ಎಸ್.ಎಸ್.ಎಫ್ ಸಾಹಿತ್ಯೋತ್ಸವದಲ್ಲಿ ಜನರಲ್ ವಿಭಾಗದ ಖವಾಲಿ ಸ್ಪರ್ದೆಯಲ್ಲಿ ಪ್ರಥಮ ಸ್ಥಾನ, ನಶೀದ: ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ನಮ್ಮ ಜಮಾಆತ್ ನ ಎಸ್.ಎಸ್.ಎಫ್ ಕಾರ್ಯಕರ್ತರಾದ ಅನ್ವರ್ ಸಾದಾತ್ ಮತ್ತು ಮಹಮ್ಮದ್ ಜುನೈದ್ ರವರಿಗೆ, ಕ್ಯಾಂಪಸ್ ವಿಭಾಗದ ಹಮ್ ದು ಉರ್ದು ಸ್ಪರ್ದೆಯಲ್ಲಿ ಪ್ರಥಮ ಸ್ಥಾನ ಪಡೆದ ಅಬ್ದುಲ್ ಖಾದರ್ ಸೈಪುಲ್ಲಾರವರಿಗೆ, ಭಟ್ಕಳದಲ್ಲಿ ನಡೆದ ರಾಜ್ಯ ಮಟ್ಟದ ಸಾಹಿತ್ಯೋತ್ಸವದ ಕ್ಯಾಂಪಸ್ ವಿಭಾಗದ ಉರ್ದು ನಾತ್ ಗ್ರೂಪ್ ಸಾಂಗ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಉನೈಸ್ ಜಿ.ಎ.ಮತ್ತು ಸುಹೈಲ್ ರವರಿಗೆ, ಸ್ಮಾರ್ಟ್ ಸ್ಕಾಲರ್ ಶಿಪ್ ಎಕ್ಸಾಮ್ ನಲ್ಲಿ ಜಿ.ಸಿ.ಸಿ.ಯಲ್ಲಿ ರ್‍ಯಾಂಕ್ ಪಡೆದ ಹಿದಾಯತು ಸ್ಸಿಬಿಯಾನ್ ಮದರಸದ ವಿದ್ಯಾರ್ಥಿನಿಯಾದ ಆಯಿಶಾ ಸಮ್ಹಾ ಫಹೀಮಾಳಿಗೆ, ದಾರುಲ್ ಇರ್ಶಾದ್ ಮಾಣಿ ಶಿಕ್ಷಣ ಸಂಸ್ಥೆಯ ಪ್ರಥಮ ಪಿ.ಯು.ಸಿ. ದಅವಾ ಧಾರ್ಮಿಕ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಮುಹಮ್ಮದ್ ಲುಕ್ಮಾನ್ ,ಧಾರ್ಮಿಕ ದಅವಾ ಡಿಗ್ರಿಯಲ್ಲಿ ಪ್ರಥಮ ಸ್ಥಾನ ಪಡೆದ ಶಾಹುಲ್ ಹಮೀದ್ ರವರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮದಲ್ಲಿ ಖತೀಬರಾದ ತಾಜುದ್ದೀನ್ ಸಖಾಫಿ, ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ, ಅಬ್ಬಾಸ್ ಹಿಶಮಿ, ಅಬ್ದುಲ್ ಖಾದರ್ ಹಾಜಿ, ಅಬ್ದುಲ್ ಕರೀಮ್, ಜಿ. ಅಬ್ದುಲ್ ಖಾದರ್, ಅಬ್ದುಲ್ ಬಶೀರ್, ಬಶೀರ್ ಎಸ್.ಎ,ಯೂಸುಫ್.ಎಂ.ಕೆ., ಆದಂ ಹಾಜಿ,ಅಬ್ಬಾಸ್ ಬಟ್ಟೆಮಾರ್, ಮಹಮ್ಮದ್ ಎನ್.ಎನ್.,ರವೂಫ್ ಹಾಜಿ, ಹಾಮದ್ ಕುಂಞ ಕೊರಂಜ, ಆಸಿಫ್ ಎಸ್.ಯು,ಸಿದ್ದೀಕ್ . ಜಿ.ಎಚ್.,ಸೈಫುಲ್ಲಾ ಎಚ್.ಎಸ್,ಅಬ್ದುಲ್ ಅಝೀಝ್ ಮದನಿ,ಹಕೀಂ ಮುಳ್ಳಗುಡ್ಡೆ ಹಾಜರಿದ್ದರು.

Related posts

ವೇಣೂರಿನಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ ಐದನೇ ಸ್ಥಾನ ಪಡೆದ ಗರ್ಡಾಡಿಯ ಅತುಲ್ ಕೃಷ್ಣ ರಿಗೆ ಸನ್ಮಾನ

Suddi Udaya

ಕೇಂದ್ರ ಬಜೆಟ್ 2026-2027:ಜಾಗತಿಕ ಸವಾಲಿನ ನಡುವೆಯೂ ಜನರ ಆಶೋತ್ತರ ಪ್ರತಿಬಿಂಬಿತವಾದ ಬಜೆಟ್: ಹರೀಶ್ ಪೂಂಜ

Suddi Udaya

ಅಳದಂಗಡಿ ಪ.ಪೂ. ಕಾಲೇಜಿನಲ್ಲಿ ನೂತನ ವಿಜ್ಞಾನ ಪ್ರಯೋಗಾಲಯ ಕೊಠಡಿ ಮತ್ತು ಇತರ ಮೂಲಭೂತ ಸೌಕರ್ಯಗಳ ಉದ್ಘಾಟನೆ

Suddi Udaya

ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯಲ್ಲಿ ಸಮೃದ್ದ್ ನಿಟ್ಟಡೆ ತೇರ್ಗಡೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಗೌರವ ಪ್ರಶಸ್ತಿ: ಸಿರಿ ಸಿಬ್ಬಂದಿಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!