25.5 C
ಪುತ್ತೂರು, ಬೆಳ್ತಂಗಡಿ
June 8, 2026
ಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪೆರಾಲ್ಡಕಟ್ಟೆಯಲ್ಲಿ ಶಿವರಾತ್ರಿಯ ದಿನ ಯುವಕರ ತಂಡದಿಂದ ರಸ್ತೆಯಲ್ಲಿ ಕೀಟಲೆ: ಪ್ರಶ್ನಿಸಿದ ಪೊಲೀಸ್ ಮೇಲೆ ಹಲ್ಲೆ ಆರೋಪ; ಮೂವರ ಬಂಧನ

ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕ ಕಾರಂದೂರು ಗ್ರಾಮದ ಪೆರಾಲ್ಡಕಟ್ಟೆಯಲ್ಲಿ ಶಿವರಾತ್ರಿಯ ದಿನ ರಾತ್ರಿಯ ವೇಳೆ ರಸ್ತೆಯಲ್ಲಿ ಕೀಟಲೆ ನಡೆಸುತ್ತಾ ಇದ್ದ‌ ತಂಡವೊಂದನ್ನು ಸೋಡಾ ಬಾಟ್ಲಿಗಳನ್ನು, ಹಾಗೂ ಗ್ಲಾಸ್ ಗಳನ್ನು ರಸ್ತೆಯಲ್ಲಿ ಒಡೆದು ಹಾಕಿದ್ದೀರಿ ಎಂದು ಪ್ರಶ್ನಿಸಿದ ಪೊಲೀಸರ ಮೇಲೆ ತಂಡವೊಂದು ಹಲ್ಲೆಗೆ‌ ಯತ್ನಿಸೀದ ಘಟನೆ ಸಂಭವಿಸಿದ್ದು ಘಟನೆಯ ಬಗ್ಗೆ ಮೂವರ ವಿರುದ್ದ ಹಾಗೂ ಇತರ ಅಪರಿಚಿತರ ವಿರುದ್ದ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಹೇಶ್, ಸುರೇಶ್, ಅರುಣ್ ಹಾಗೂ ಇತರರು ಪೊಲೀಸರ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ವೇಣೂರು ಪೊಲೀಸ್‌ ಠಾಣೆಯ ಎ.ಎಸ್.ಐ ರಾಮಯ್ಯ ಅವರು ಯುವಕರ ತಂಡ ರಸ್ತೆಯಲ್ಲಿ ಕೀಟಲೆ ನಡೆಸುತ್ತಿರುವ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ್ದಾರೆ. ತಡ ರಾತ್ರಿ ವೇಳೆ ರಸ್ತೆಯಲ್ಲಿದ್ದ ಯುವಕರನ್ನು ರಸ್ತೆಯಲ್ಲಿ ಸೋಡಾ ಬಾಟ್ಲಿಗಳನ್ನು ಒಡೆದು ಹಾಕಿರುವ ಬಗ್ಗೆ ರಾಮಯ್ಯ ಅವರು ಪ್ರಶ್ನಿಸಿದ್ದಾರೆ ಇದರಿಂದ ಸಿಟ್ಟುಗೊಂಡ ತಂಡ ಅವರ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ರಾಮಯ್ಯ ಅವರು ನೀಡಿರುವ ದೂರಿನಂತೆ ವೇಣೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಪ್ರತಿಷ್ಟಿತ ಎಳ್ಕಜೆ ಗುತ್ತಿನಲ್ಲಿ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ರಾಮ ನವಮಿ ಆಚರಣೆ

Suddi Udaya

ಮದ್ದಡ್ಕ ಪೇಟೆಯಲ್ಲಿ 2 ತಿಂಗಳಿಂದ ಉರಿಯುತ್ತಿಲ್ಲ ದಾರಿ ದೀಪ: ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಬಳಂಜ ಪಂಚಶ್ರೀ ಮಹಿಳಾ ಭಜನಾ ಮಂಡಳಿಯಿಂದ ಓಡಿಲ್ನಾಳ ಕ್ಷೇತ್ರದಲ್ಲಿ ಭಜನಾ ಸೇವೆ

Suddi Udaya

ಧರ್ಮಸ್ಥಳ, ವೇಣೂರು, ಬೆಳ್ತಂಗಡಿ ನಕ್ಸಲ್ ಪ್ರಕರಣ: ನಕ್ಸಲ್ ಬಿ.ಜಿ.ಕೃಷ್ಣಮೂರ್ತಿ, ಸಾವಿತ್ರಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ನಡ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ 12 ಕ್ಷೇತ್ರಗಳಲ್ಲೂ ಜಯಭೇರಿ, 1 ಕ್ಷೇತ್ರಕ್ಕೆ ಅವಿರೋಧ ಆಯ್ಕೆ

Suddi Udaya
error: Content is protected !!