ಮಾ.25: ಕೊಕ್ಕಡ ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಕ್ಕಡ: ಶ್ರೀ ಪಿಲಿಚಾಮುಂಡಿ ದೈವಸ್ಥಾನ ಮಾಸ್ತಿಕಲ್ಲು ಮಜಲು ಇಲ್ಲಿ ಮಾ. 25 ರಂದು ಜರಗುವ ವಾರ್ಷಿಕ ನೇಮೋತ್ಸವದ ಆಮಂತ್ರಣ ಪತ್ರಿಕೆಯನ್ನು ಮಾ.8 ರಂದು ಶ್ರೀ ಕ್ಷೇತ್ರ ಮಹಾಗಣಪತಿ ದೇವಸ್ಥಾನ ಸೌತಡ್ಕ ಇಲ್ಲಿ ಶ್ರೀ ದೇವರಿಗೆ ಸಮರ್ಪಿಸಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಟ್ರಸ್ಟ್ ನ ಗೌರವಾಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಟ್ರಸ್ಟ್ ನ ಅಧ್ಯಕ್ಷ ಕುಶಾಲಪ್ಪ ಗೌಡ ಪೊಡಿಕೆತೂರು ಮತ್ತು ಟ್ರಸ್ಟ್ ನ ಸದಸ್ಯರಾದ ಕೃಷ್ಣಪ್ಪ ಗೌಡ ಪೂವಾಜೆ, ಸುಂದರ ಪೂಜಾರಿ ಅಂಕದ ಮಜಲು, ಮತ್ತು ದೈವ ನರ್ತಕರಾದ ನೀಲಯ್ಯ ನಳಿಕೆ ಉಪಸ್ಥಿತರಿದ್ದರು.

Leave a Comment

error: Content is protected !!